AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಕೂರದೇ ಐಎಎಸ್​ ಪಾಸಾಗಿದ್ದಾರೆ ಎನ್ನುವ ಟೀಕೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ತಿರುಗೇಟು

ಅಂಜಲಿ ಬಿರ್ಲಾ ಮೂರು ಹಂತದ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ಪಾಸು ಮಾಡಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಅಂಜಲಿ ಬಗ್ಗೆ ಸುಳ್ಳು ಸುದ್ದಿ ಹರಿದಾಡಿತ್ತು

ಪರೀಕ್ಷೆ ಕೂರದೇ ಐಎಎಸ್​ ಪಾಸಾಗಿದ್ದಾರೆ ಎನ್ನುವ ಟೀಕೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ತಿರುಗೇಟು
ಅಂಜಲಿ ಬಿರ್ಲಾ
ರಾಜೇಶ್ ದುಗ್ಗುಮನೆ
| Edited By: |

Updated on: Jan 21, 2021 | 9:14 PM

Share

ದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ಅವರು ನಾಗರಿಕ ಸೇವಾ ಆಯೋಗ ಪರೀಕ್ಷೆಗೆ ಹಾಜರಾಗದೆ ಉತ್ತೀರ್ಣರಾಗಿದ್ದಾರೆ ಎನ್ನುವ ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈ ವಿಚಾರಕ್ಕೆ ಅಂಜಲಿ ಬಿರ್ಲಾ ಸಿಟ್ಟಾಗಿದ್ದಾರೆ.

ಟ್ರೋಲ್​ ಮಾಡುವುದನ್ನು ತಡೆಯಲು ಒಂದು ಕಾನೂನು ತರಬೇಕು. ಸುಳ್ಳು ಸುದ್ದಿ ಹರಡುವವರನ್ನು ಪತ್ತೆ ಹಚ್ಚಿ ಶಿಕ್ಷೆ ನೀಡಬೇಕು. ಸುಳ್ಳುಸುದ್ದಿಗೆ ಇಂದು ನಾನು ಸಂತ್ರಸ್ಥೆ ಆಗಿದ್ದೇನೆ. ನಾಳೆ ಮತ್ತೊಬ್ಬರು ಸಂತ್ರಸ್ಥರಾಗಬಹುದು ಎಂದು ಹೇಳಿದ್ದಾರೆ.

ನಾನು ಕಷ್ಟಪಟ್ಟು ಓದಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದೇನೆ. ನನ್ನ ಬಗ್ಗೆ ಹರಿದಾಡಿದ ಟ್ರೋಲ್​ಗಳು ನನ್ನನ್ನು ಮತ್ತಷ್ಟು ಗಟ್ಟಿ ಮಾಡಿವೆ. ನಾನು ನನ್ನ ಜೀವನದಲ್ಲಿ ಪ್ರಾಮಾಣಿಕಳಾಗಿದ್ದೇನೆ. ಆಪ್ತರಿಗೆ ನನ್ನ ಪರಿಶ್ರಮದ ಅರಿವಿದೆ ಎಂದು ಅಂಜಲಿ ಹೇಳಿದ್ದಾರೆ.

ನಾಗರಿಕ ಸೇವಾ ಪರೀಕ್ಷೆಗಳನ್ನು ಕ್ರಮಬದ್ಧವಾಗಿ ಮಾಡಲಾಗುತ್ತದೆ. ಮೂರು ಪರೀಕ್ಷೆಗಳಲ್ಲಿ ಉತ್ತೀರ್ಣರಾದರಷ್ಟೇ ನೀವು ಅಧಿಕಾರಿ ಆಗಲು ಸಾಧ್ಯ ಎಂದು ಅವರು ಹೇಳಿದ್ದಾರೆ. ಈ ಮೂಲಕ ತಾವು ಪರೀಕ್ಷೆ ಬರೆದೇ ಪಾಸ್​ ಆಗಿದ್ದೇನೆ ಎಂದು ಒತ್ತಿ ಹೇಳಿದ್ದಾರೆ.

ಅಂಜಲಿ ಬಿರ್ಲಾ ಮೂರು ಹಂತದ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ಪಾಸು ಮಾಡಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಅಂಜಲಿ ಬಗ್ಗೆ ಸುಳ್ಳು ಸುದ್ದಿ ಹರಿದಾಡಿತ್ತು. ತಂದೆಯ ಪ್ರಭಾವ ಬಳಸಿ ಅಂಜಲಿ ಪರೀಕ್ಷೆ ಪಾಸಾಗಿದ್ದಾರೆ ಎನ್ನುವ ಪೋಸ್ಟ್​ಗಳು ಕಾಣಿಸಿಕೊಂಡಿದ್ದವು.

ಕೊರೊನಾ ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ತಡೆಯಲು ಫೇಸ್​ಬುಕ್​ನಿಂದ ಹೊಸ ಅಸ್ತ್ರ

ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ