AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್​ ನಾಮಪತ್ರ ಸಲ್ಲಿಕೆ

Lok Sabha Speaker Election: ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್​ ನಾಮಪತ್ರ ಸಲ್ಲಿಕೆ
ಓಂ ಬಿರ್ಲಾ, ಕೆ ಸುರೇಶ್​Image Credit source: Deccan Chronicle
Follow us
ನಯನಾ ರಾಜೀವ್
|

Updated on:Jun 25, 2024 | 1:09 PM

72 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್​(Lok Sabha Speaker) ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ(Om Birla) ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.

ಈ ಹಿಂದೆ 1952 ಹಾಗೂ 1974ರಲ್ಲಿಯೂ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಸ್ವತಂತ್ರ ಭಾರತದಲ್ಲಿ 1952ರಲ್ಲಿ ಮೊಟ್ಟ ಮೊದಲ ಬಾರಿಗೆ ಜಿವಿ ಮಾಳವಂಕರ್ ಮತ್ತು ಶಂಕರ್ ಶಾಂತಾರಾಮ್ ನಡುವೆ ಸ್ಪೀಕರ್ ಹುದ್ದೆಗೆ ಚುನಾವಣೆ ಪೈಪೋಟಿ ಏರ್ಪಟ್ಟಿತ್ತು. ಆ ಬಳಿಕ 1976ರಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ ಸ್ಪೀಕರ್ ಚುನಾವಣೆ ನಡೆದಿತ್ತು. ಆ ಸಮಯದಲ್ಲಿ ಬಲಿಗ್ರಾಮ ಭಗತ್ ಹಾಗೂ ಜಗನ್ನಾಥ ರಾವ್ ನಡುವೆ ಚುನಾವಣೆ ನಡೆದಿತ್ತು.

ಈಗ 2024ರಲ್ಲಿ ಮೂರನೇ ಬಾರಿಗೆ ಚುನಾವಣೆ ನಡೆಯಲಿದೆ. ಇಲ್ಲಿಯವರೆಗೆ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ನೇಮಕ ಮಾಡಲಾಗಿತ್ತು.

ಮತ್ತಷ್ಟು ಓದಿ:

ಈ ಹಿಂದೆ, ಸ್ಪೀಕರ್ ಚುನಾವಣೆಗೆ ಒಮ್ಮತ ಮೂಡಿಸಲು ಎನ್​ಡಿಎ ಪ್ರಯತ್ನ ಡನೆಸಿತು ಹಾಗೂ ಬಿಜೆಪಿಯ ಹಿರಿಯ ನಾಯಕರು ಇಂಡಿಯಾ ಬ್ಲಾಕ್​ನ ನಾಯಕರೊಂದಿಗೆ ಮಾತುಕತೆ ನಡೆಸಿದರು. ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್ ಮತ್ತು ಸಂಶದೀಯ ವ್ಯವಹಾರಗಳ ಸಚಿವ ಕಿರಣ್​ ರಿಜಿಜು ವಿವಿಧ ನಾಯಕರನ್ನು ಭೇಟಿ ಮಾಡಿ ಮಾತನಾಡಿದರು.

ಕೆ ಸುರೇಶ್​ 8 ಬಾರಿ ಸಂಸದರಾಗಿದ್ದಾರೆ, ಅವರು ಈಗ ನಾಮಪತ್ರ ಸಲ್ಲಿಸಿದ್ದಾರೆ, ಪ್ರತಿಪಕ್ಷ 237 ಸಂಸದರನ್ನು ಹೊಂದಿದೆ. ಇದರಲ್ಲಿ ಮೂವರು ಸ್ವತಂತ್ರರ ಬೆಂಬಲವೂ ಇದೆ.

ಕೆ ಸುರೇಶ್​ ನಾಮಪತ್ರಕ್ಕೆ ಇಂಡಿಯಾ ಬ್ಲಾಕ್​ನ ಮಿತ್ರಪಕ್ಷಗಳಾದ ಡಿಎಂಕೆ, ಶಿವಸೇನೆ, ಶರದ್​ಪವಾರ್​(ಎನ್​ಸಿಪಿ) ಹಾಗೂ ಇತರೆ ಪ್ರಮುಖ ಪಕ್ಷಗಳು ಸಹಿ ಹಾಕಿವೆ. ಮಮತಾ ಬ್ಯಾನರ್ಜಿ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಇದಕ್ಕೂ ಮುನ್ನ ಎನ್​ಡಿಎ ಪರವಾಗಿ ಓಂ ಬಿರ್ಲಾ ನಾಮಪತ್ರ ಸಲ್ಲಿಸಿದ್ದರು. ಆಡಳಿತ ಪಕ್ಷಕ್ಕೆ ಸಂಪೂರ್ಣ ಬಹುಮತವಿದೆ, ಎನ್​ಡಿಎಗೆ 292 ಸಂಸದರ ಬೆಂಬಲವಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:08 pm, Tue, 25 June 24

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ