AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್​ ನಾಮಪತ್ರ ಸಲ್ಲಿಕೆ

Lok Sabha Speaker Election: ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್​ ನಾಮಪತ್ರ ಸಲ್ಲಿಕೆ
ಓಂ ಬಿರ್ಲಾ, ಕೆ ಸುರೇಶ್​Image Credit source: Deccan Chronicle
ನಯನಾ ರಾಜೀವ್
|

Updated on:Jun 25, 2024 | 1:09 PM

Share

72 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್​(Lok Sabha Speaker) ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ(Om Birla) ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.

ಈ ಹಿಂದೆ 1952 ಹಾಗೂ 1974ರಲ್ಲಿಯೂ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಸ್ವತಂತ್ರ ಭಾರತದಲ್ಲಿ 1952ರಲ್ಲಿ ಮೊಟ್ಟ ಮೊದಲ ಬಾರಿಗೆ ಜಿವಿ ಮಾಳವಂಕರ್ ಮತ್ತು ಶಂಕರ್ ಶಾಂತಾರಾಮ್ ನಡುವೆ ಸ್ಪೀಕರ್ ಹುದ್ದೆಗೆ ಚುನಾವಣೆ ಪೈಪೋಟಿ ಏರ್ಪಟ್ಟಿತ್ತು. ಆ ಬಳಿಕ 1976ರಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ ಸ್ಪೀಕರ್ ಚುನಾವಣೆ ನಡೆದಿತ್ತು. ಆ ಸಮಯದಲ್ಲಿ ಬಲಿಗ್ರಾಮ ಭಗತ್ ಹಾಗೂ ಜಗನ್ನಾಥ ರಾವ್ ನಡುವೆ ಚುನಾವಣೆ ನಡೆದಿತ್ತು.

ಈಗ 2024ರಲ್ಲಿ ಮೂರನೇ ಬಾರಿಗೆ ಚುನಾವಣೆ ನಡೆಯಲಿದೆ. ಇಲ್ಲಿಯವರೆಗೆ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ನೇಮಕ ಮಾಡಲಾಗಿತ್ತು.

ಮತ್ತಷ್ಟು ಓದಿ:

ಈ ಹಿಂದೆ, ಸ್ಪೀಕರ್ ಚುನಾವಣೆಗೆ ಒಮ್ಮತ ಮೂಡಿಸಲು ಎನ್​ಡಿಎ ಪ್ರಯತ್ನ ಡನೆಸಿತು ಹಾಗೂ ಬಿಜೆಪಿಯ ಹಿರಿಯ ನಾಯಕರು ಇಂಡಿಯಾ ಬ್ಲಾಕ್​ನ ನಾಯಕರೊಂದಿಗೆ ಮಾತುಕತೆ ನಡೆಸಿದರು. ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್ ಮತ್ತು ಸಂಶದೀಯ ವ್ಯವಹಾರಗಳ ಸಚಿವ ಕಿರಣ್​ ರಿಜಿಜು ವಿವಿಧ ನಾಯಕರನ್ನು ಭೇಟಿ ಮಾಡಿ ಮಾತನಾಡಿದರು.

ಕೆ ಸುರೇಶ್​ 8 ಬಾರಿ ಸಂಸದರಾಗಿದ್ದಾರೆ, ಅವರು ಈಗ ನಾಮಪತ್ರ ಸಲ್ಲಿಸಿದ್ದಾರೆ, ಪ್ರತಿಪಕ್ಷ 237 ಸಂಸದರನ್ನು ಹೊಂದಿದೆ. ಇದರಲ್ಲಿ ಮೂವರು ಸ್ವತಂತ್ರರ ಬೆಂಬಲವೂ ಇದೆ.

ಕೆ ಸುರೇಶ್​ ನಾಮಪತ್ರಕ್ಕೆ ಇಂಡಿಯಾ ಬ್ಲಾಕ್​ನ ಮಿತ್ರಪಕ್ಷಗಳಾದ ಡಿಎಂಕೆ, ಶಿವಸೇನೆ, ಶರದ್​ಪವಾರ್​(ಎನ್​ಸಿಪಿ) ಹಾಗೂ ಇತರೆ ಪ್ರಮುಖ ಪಕ್ಷಗಳು ಸಹಿ ಹಾಕಿವೆ. ಮಮತಾ ಬ್ಯಾನರ್ಜಿ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಇದಕ್ಕೂ ಮುನ್ನ ಎನ್​ಡಿಎ ಪರವಾಗಿ ಓಂ ಬಿರ್ಲಾ ನಾಮಪತ್ರ ಸಲ್ಲಿಸಿದ್ದರು. ಆಡಳಿತ ಪಕ್ಷಕ್ಕೆ ಸಂಪೂರ್ಣ ಬಹುಮತವಿದೆ, ಎನ್​ಡಿಎಗೆ 292 ಸಂಸದರ ಬೆಂಬಲವಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:08 pm, Tue, 25 June 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​