AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್​ ನಾಮಪತ್ರ ಸಲ್ಲಿಕೆ

Lok Sabha Speaker Election: ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್​ ನಾಮಪತ್ರ ಸಲ್ಲಿಕೆ
ಓಂ ಬಿರ್ಲಾ, ಕೆ ಸುರೇಶ್​Image Credit source: Deccan Chronicle
ನಯನಾ ರಾಜೀವ್
|

Updated on:Jun 25, 2024 | 1:09 PM

Share

72 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್​(Lok Sabha Speaker) ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ(Om Birla) ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.

ಈ ಹಿಂದೆ 1952 ಹಾಗೂ 1974ರಲ್ಲಿಯೂ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಸ್ವತಂತ್ರ ಭಾರತದಲ್ಲಿ 1952ರಲ್ಲಿ ಮೊಟ್ಟ ಮೊದಲ ಬಾರಿಗೆ ಜಿವಿ ಮಾಳವಂಕರ್ ಮತ್ತು ಶಂಕರ್ ಶಾಂತಾರಾಮ್ ನಡುವೆ ಸ್ಪೀಕರ್ ಹುದ್ದೆಗೆ ಚುನಾವಣೆ ಪೈಪೋಟಿ ಏರ್ಪಟ್ಟಿತ್ತು. ಆ ಬಳಿಕ 1976ರಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ ಸ್ಪೀಕರ್ ಚುನಾವಣೆ ನಡೆದಿತ್ತು. ಆ ಸಮಯದಲ್ಲಿ ಬಲಿಗ್ರಾಮ ಭಗತ್ ಹಾಗೂ ಜಗನ್ನಾಥ ರಾವ್ ನಡುವೆ ಚುನಾವಣೆ ನಡೆದಿತ್ತು.

ಈಗ 2024ರಲ್ಲಿ ಮೂರನೇ ಬಾರಿಗೆ ಚುನಾವಣೆ ನಡೆಯಲಿದೆ. ಇಲ್ಲಿಯವರೆಗೆ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ನೇಮಕ ಮಾಡಲಾಗಿತ್ತು.

ಮತ್ತಷ್ಟು ಓದಿ:

ಈ ಹಿಂದೆ, ಸ್ಪೀಕರ್ ಚುನಾವಣೆಗೆ ಒಮ್ಮತ ಮೂಡಿಸಲು ಎನ್​ಡಿಎ ಪ್ರಯತ್ನ ಡನೆಸಿತು ಹಾಗೂ ಬಿಜೆಪಿಯ ಹಿರಿಯ ನಾಯಕರು ಇಂಡಿಯಾ ಬ್ಲಾಕ್​ನ ನಾಯಕರೊಂದಿಗೆ ಮಾತುಕತೆ ನಡೆಸಿದರು. ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್ ಮತ್ತು ಸಂಶದೀಯ ವ್ಯವಹಾರಗಳ ಸಚಿವ ಕಿರಣ್​ ರಿಜಿಜು ವಿವಿಧ ನಾಯಕರನ್ನು ಭೇಟಿ ಮಾಡಿ ಮಾತನಾಡಿದರು.

ಕೆ ಸುರೇಶ್​ 8 ಬಾರಿ ಸಂಸದರಾಗಿದ್ದಾರೆ, ಅವರು ಈಗ ನಾಮಪತ್ರ ಸಲ್ಲಿಸಿದ್ದಾರೆ, ಪ್ರತಿಪಕ್ಷ 237 ಸಂಸದರನ್ನು ಹೊಂದಿದೆ. ಇದರಲ್ಲಿ ಮೂವರು ಸ್ವತಂತ್ರರ ಬೆಂಬಲವೂ ಇದೆ.

ಕೆ ಸುರೇಶ್​ ನಾಮಪತ್ರಕ್ಕೆ ಇಂಡಿಯಾ ಬ್ಲಾಕ್​ನ ಮಿತ್ರಪಕ್ಷಗಳಾದ ಡಿಎಂಕೆ, ಶಿವಸೇನೆ, ಶರದ್​ಪವಾರ್​(ಎನ್​ಸಿಪಿ) ಹಾಗೂ ಇತರೆ ಪ್ರಮುಖ ಪಕ್ಷಗಳು ಸಹಿ ಹಾಕಿವೆ. ಮಮತಾ ಬ್ಯಾನರ್ಜಿ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಇದಕ್ಕೂ ಮುನ್ನ ಎನ್​ಡಿಎ ಪರವಾಗಿ ಓಂ ಬಿರ್ಲಾ ನಾಮಪತ್ರ ಸಲ್ಲಿಸಿದ್ದರು. ಆಡಳಿತ ಪಕ್ಷಕ್ಕೆ ಸಂಪೂರ್ಣ ಬಹುಮತವಿದೆ, ಎನ್​ಡಿಎಗೆ 292 ಸಂಸದರ ಬೆಂಬಲವಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:08 pm, Tue, 25 June 24

Follow Us
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​