ಕೇಂದ್ರದೊಂದಿಗೆ ದೃಢ ಸಂಬಂಧವನ್ನು ಬಯಸುತ್ತೇವೆ; ಪ್ರಧಾನಿ ಮೋದಿಯನ್ನು ಹೊಗಳಿದ ಒಮರ್ ಅಬ್ದುಲ್ಲಾ

ಕೇಂದ್ರಾಡಳಿತ ಪ್ರದೇಶವಾಗಿ ಬಹಳಷ್ಟು ಕೆಲಸಗಳನ್ನು ಮಾಡಬಹುದು, ಸ್ಪಷ್ಟವಾಗಿ ಕೆಲವು ವಿಷಯಗಳು ಸಾಧ್ಯವಿಲ್ಲ. ಆದರೆ ಜಮ್ಮು ಮತ್ತು ಕಾಶ್ಮೀರ ಶಾಶ್ವತವಾಗಿ ಕೇಂದ್ರಾಡಳಿತ ಪ್ರದೇಶವಾಗಿ ಆಗಿ ಉಳಿಯುವುದಿಲ್ಲ ಎಂದು ನಾವು ನಿರೀಕ್ಷಿಸುತ್ತೇವೆ. ಗೌರವಾನ್ವಿತ ಪ್ರಧಾನಿಯವರು ಗೌರವಾನ್ವಿತ ಕೆಲಸವನ್ನು ಮಾಡುತ್ತಾರೆ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಶೀಘ್ರದಲ್ಲಿ ಹಿಂದಿರುಗಿಸುತ್ತಾರೆ ಎಂಬ ನಿರೀಕ್ಷೆ ಇದೆ

ಕೇಂದ್ರದೊಂದಿಗೆ ದೃಢ ಸಂಬಂಧವನ್ನು ಬಯಸುತ್ತೇವೆ; ಪ್ರಧಾನಿ ಮೋದಿಯನ್ನು ಹೊಗಳಿದ ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ
Follow us
|

Updated on: Oct 09, 2024 | 1:13 PM

ಶ್ರೀನಗರ ಅಕ್ಟೋಬರ್ 09: ನ್ಯಾಷನಲ್ ಕಾನ್ಫರೆನ್ಸ್ (National Conference) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ (Omar Abdullah) ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಬುದ್ಗಾಮ್ ಮತ್ತು ಗಂದರ್ಬಾಲ್ ಎರಡನ್ನೂ ಗೆದ್ದ ನಂತರ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಹಿಂದಿರುಗಿಸುವ ಮೂಲಕ “ಗೌರವಾನ್ವಿತ ಕೆಲಸ” ಮಾಡುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರಾಡಳಿತ ಪ್ರದೇಶವಾಗಿ ಬಹಳಷ್ಟು ಕೆಲಸಗಳನ್ನು ಮಾಡಬಹುದು, ಸ್ಪಷ್ಟವಾಗಿ ಕೆಲವು ವಿಷಯಗಳು ಸಾಧ್ಯವಿಲ್ಲ. ಆದರೆ ಜಮ್ಮು ಮತ್ತು ಕಾಶ್ಮೀರ ಶಾಶ್ವತವಾಗಿ ಕೇಂದ್ರಾಡಳಿತ ಪ್ರದೇಶವಾಗಿ ಆಗಿ ಉಳಿಯುವುದಿಲ್ಲ ಎಂದು ನಾವು ನಿರೀಕ್ಷಿಸುತ್ತೇವೆ. ಗೌರವಾನ್ವಿತ ಪ್ರಧಾನಿಯವರು ಗೌರವಾನ್ವಿತ ಕೆಲಸವನ್ನು ಮಾಡುತ್ತಾರೆ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಶೀಘ್ರದಲ್ಲಿ ಹಿಂದಿರುಗಿಸುತ್ತಾರೆ ಎಂಬ ನಿರೀಕ್ಷೆ ಇದೆ. ನಂತರ ನಮ್ಮ ಪ್ರಣಾಳಿಕೆಯ ಉಳಿದ ಭಾಗಗಳನ್ನು ಕಾರ್ಯಗತಗೊಳಿಸಲಾಗುತ್ತದೆ ಎಂದು  ಎಂದು ಒಮರ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಪ್ರಧಾನಿ, ಗೃಹ ಸಚಿವರು, ಅವರೆಲ್ಲರೂ ಗೌರವಾನ್ವಿತ  ವ್ಯಕ್ತಿಗಳು”. ಅವರು ಸಂಸತ್ತಿನಲ್ಲಿ ತಮ್ಮ ಭಾಷಣಗಳು, ಮಧ್ಯಸ್ಥಿಕೆಗಳಲ್ಲಿ ಮತ್ತು ಸುಪ್ರೀಂಕೋರ್ಟ್‌ನಲ್ಲಿ ತಮ್ಮ ಪ್ರತಿನಿಧಿಯ ಮೂಲಕ “ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಭರವಸೆ” ನೀಡಿದ್ದಾರೆ ಎಂದಿದ್ದಾರೆ ಒಮರ್.

ಜಮ್ಮು ಮತ್ತು ಕಾಶ್ಮೀರದಲ್ಲಿನ ಹೊಸ ಸರ್ಕಾರವು “ಕೇಂದ್ರ ಸರ್ಕಾರದೊಂದಿಗೆ ವಿರೋಧಿ ಸಂಬಂಧವನ್ನು ಹೊಂದಲು ಸಾಧ್ಯವಿಲ್ಲ”. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಯಾರೇ ಆಗಿರಲಿ, ಅವರು ದೆಹಲಿಗೆ ತೆರಳಿ ಪ್ರಧಾನಿ, ಗೃಹ ಸಚಿವರು ಮತ್ತು ಇತರ ನಾಯಕರನ್ನು ಭೇಟಿಯಾಗಿ ಜಮ್ಮು ಮತ್ತು ಕಾಶ್ಮೀರದ ಜನರ ಜನಾದೇಶವನ್ನು ಮನವರಿಕೆ ಮಾಡುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ. ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವುದು, ಅಭಿವೃದ್ಧಿ ಮತ್ತು ಶಾಂತಿಗಾಗಿ ಆಗಿದೆ. ಯಾರೇ ಸಿಎಂ ಆಗಿರಲಿ, ಅವರು ಕೇಂದ್ರ ಸರ್ಕಾರ ಜೊತೆ ಯೋಗ್ಯವಾದ ಕೆಲಸದ ಸಂಬಂಧವನ್ನು ಸ್ಥಾಪಿಸಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ.

ಕೇಂದ್ರ ಸರ್ಕಾರದೊಂದಿಗೆ ಬಲವಾದ ಸಂಬಂಧಗಳ ಅಗತ್ಯವನ್ನು ಒತ್ತಿಹೇಳಿದ ಒಮರ್, ಪ್ರಾದೇಶಿಕ ಸವಾಲುಗಳ ನಡುವೆ ಜಮ್ಮು ಮತ್ತು ಕಾಶ್ಮೀರದ ಸ್ಥಿರತೆಗೆ ಸಹಕಾರ ಅತ್ಯಗತ್ಯ ಎಂದು ನಾನು ನಂಬುತ್ತೇನೆ. ಪ್ರಧಾನಿ ಒಬ್ಬ ಗೌರವಾನ್ವಿತ ವ್ಯಕ್ತಿ. ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನದ ಬಗ್ಗೆ ಜನರಿಗೆ ಭರವಸೆ ನೀಡಿದರು. ಅವರು ಅದನ್ನು ಅನುಸರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ”ಎಂದಿದ್ದಾರೆ.

‘ಒಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಲಿದ್ದಾರೆ’ ಎಂದು ಜೆಕೆಎನ್‌ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿಕೆಗೆ, ಜೆಕೆಎನ್‌ಸಿ ಉಪಾಧ್ಯಕ್ಷರು ತಮ್ಮ ತಂದೆ ತನ್ನಲ್ಲಿ ಇಟ್ಟಿರುವ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದರು. ಆದರೆ, ಈ ನಿರ್ಧಾರವನ್ನು ಶಾಸಕರು ಕೈಗೊಳ್ಳಬೇಕು ಎಂದರು.

“ಇದು ಮೈತ್ರಿಕೂಟದ ನಿರ್ಧಾರ. ನಾನು ನನ್ನ ಅಪ್ಪನನ್ನು ತುಂಬಾ ಪ್ರೀತಿಸುತ್ತೇನೆ. ಅವರು ನಿನ್ನೆ ನನಗೆ ತೋರಿಸಿದ ಬೆಂಬಲಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ಆದರೆ ಅಂತಿಮವಾಗಿ ಹೇಳುವುದು ಶಾಸಕರಾಗಿರಬೇಕು. ನಾನು ಯಾವಾಗಲೂ ನಿಯಮಗಳ ಮೂಲಕ ಮತ್ತು ಪುಸ್ತಕದ ಮೂಲಕ ಕೆಲಸಗಳನ್ನು ಮಾಡುತ್ತೇನೆ. ಇದು ಅನುಸರಿಸಬೇಕಾದ ಕಾರ್ಯವಿಧಾನವಾಗಿದೆ ಮತ್ತು ಅದನ್ನು ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆ 

ಮುಂದಿನ ದಿನಗಳಲ್ಲಿ ಯಾವ ಸಿಎಂ ಪ್ರಮಾಣ ವಚನ ಸ್ವೀಕರಿಸಿದರೂ ಎರಡು ಆದ್ಯತೆಗಳಿರುತ್ತವೆ – ಒಂದು ಶಾಸಕಾಂಗ, ಅಧಿವೇಶನ ಕರೆದಾಗ ವಿಧಾನಸಭೆಯ ಸದಸ್ಯರು ನಿರ್ಧರಿಸುತ್ತಾರೆ ಆದರೆ ಇನ್ನೊಂದು ಸರ್ಕಾರಕ್ಕೆ ಸಂಬಂಧಿಸಿದ್ದು. ಮುಂಬರುವ ಸರ್ಕಾರಕ್ಕೆ ನನ್ನದೇ ಆದ ಸಲಹೆಯೆಂದರೆ, ಸಂಪುಟದ ಮೊದಲ ಕೆಲಸವೆಂದರೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ಕೋರುವ ನಿರ್ಣಯವನ್ನು ಅಂಗೀಕರಿಸುವುದು ಮತ್ತು ಸಿಎಂ ಆ ನಿರ್ಣಯದೊಂದಿಗೆ ದೆಹಲಿಗೆ ಪ್ರಯಾಣಿಸಬೇಕು, ಅವರು ತಮ್ಮ ವಾಗ್ದಾನವನ್ನು ಪೂರೈಸಲು ದೇಶದ ಹಿರಿಯ ನಾಯಕರನ್ನು ಕರೆದು ಕೇಳಬೇಕು” ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿನ90 ಚುನಾಯಿತ ಅಸೆಂಬ್ಲಿ ಸ್ಥಾನಗಳಲ್ಲಿ NC-ಕಾಂಗ್ರೆಸ್ 49 ಅನ್ನು ಗೆದ್ದುಕೊಂಡಿತು, ಬಿಜೆಪಿ 29 ಮತ್ತು ಮೆಹಬೂಬಾ ಮುಫ್ತಿಯ PDP ಕೇವಲ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?
ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?
ಸಿಎಂ ಹುದ್ದೆಗೆ ಸತೀಶ್ ಹೆಸರು ಪ್ರಸ್ತಾಪ ಯಾಕೆ? ಅವರನ್ನೇ ಕೇಳಿ: ಪರಮೇಶ್ವರ್
ಸಿಎಂ ಹುದ್ದೆಗೆ ಸತೀಶ್ ಹೆಸರು ಪ್ರಸ್ತಾಪ ಯಾಕೆ? ಅವರನ್ನೇ ಕೇಳಿ: ಪರಮೇಶ್ವರ್
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು