AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​ನಿಂದ ಭಾರತದಲ್ಲಿ ಶುರುವಾದ ಕೊವಿಡ್​ 19 ಮೂರನೇ ಅಲೆ ಹೆಚ್ಚು ಬಾಧಿಸಿದ್ದು ಕಿರಿಯ ವಯಸ್ಸಿನವರಿಗೆ: ಐಸಿಎಂಆರ್​ ವರದಿ

ಭಾರತದಲ್ಲಿ ಡೆಲ್ಟಾದಿಂದ ಉಂಟಾಗಿದ್ದ ಎರಡನೇ ಅಲೆಗಿಂತಲೂ ಈ ಬಾರಿ ಒಮಿಕ್ರಾನ್​​ನಿಂದ ಉಂಟಾದ ಅಲೆ ವಿಭಿನ್ನವಾಗಿದೆ. ಹಿಂದಿನ ಅಲೆಯಲ್ಲಿ ದೊಡ್ಡಸಂಖ್ಯೆಯಲ್ಲಿ ಸಾವು ಉಂಟಾಗಿತ್ತು. ಆದರೆ ಈ ಬಾರಿ ಹಾಗಿಲ್ಲ ಎಂದು ಡಾ. ಬಲರಾಮ್​ ಭಾರ್ಗವ್​ ತಿಳಿಸಿದ್ದಾರೆ.

ಒಮಿಕ್ರಾನ್​ನಿಂದ ಭಾರತದಲ್ಲಿ ಶುರುವಾದ ಕೊವಿಡ್​ 19 ಮೂರನೇ ಅಲೆ ಹೆಚ್ಚು ಬಾಧಿಸಿದ್ದು ಕಿರಿಯ ವಯಸ್ಸಿನವರಿಗೆ: ಐಸಿಎಂಆರ್​ ವರದಿ
ಒಮಿಕ್ರಾನ್​
Follow us
TV9 Web
| Updated By: Lakshmi Hegde

Updated on:Feb 04, 2022 | 2:22 PM

ಒಮಿಕ್ರಾನ್​​ ಸೋಂಕಿನಿಂದ ಉಂಟಾಗಿರುವ ಕೊವಿಡ್​ 19 ಮೂರನೇ ಅಲೆ (Covid 19 3rd Wave) ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಯುಜನರು ಅಂದರೆ ಕಿರಿಯವಯಸ್ಸಿನವರಿಗೇ ಬಾಧಿಸುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು (ICMR), ಆಸ್ಪತ್ರೆಗಳ ಅಂಕಿ-ಅಂಶಗಳನ್ನು ಆಧರಿಸಿ ನಡೆಸಿದ್ದ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ.  ದೇಶಾದ್ಯಂತ ಸುಮಾರು 37 ಆಸ್ಪತ್ರೆಗಳಿಂದ ಸಂಗ್ರಹಿಸಿದ್ದ ಅಂಕಿ-ಅಂಶಗಳನ್ನು ಆಧರಿಸಿ ಸಮೀಕ್ಷೆ ನಡೆಸಲಾಗಿತ್ತು ಎಂದು ಐಸಿಎಂಆರ್​ ಮಹಾನಿರ್ದೇಶಕ ಡಾ.ಬಲರಾಮ್​ ಭಾರ್ಗವ್​ ತಿಳಿಸಿದ್ದಾರೆ. ಆಸ್ಪತ್ರೆಗಳಲ್ಲಿ ಲಭ್ಯವಾದ 2021  ಡಿಸೆಂಬರ್ 16 ಮತ್ತು 2022 ಜನವರಿ 17 ರ ನಡುವಿನ ಡೇಟಾವನ್ನು 2021ರ ನವೆಂಬರ್ 15 ಮತ್ತು ಡಿಸೆಂಬರ್ 15ರ ಡೇಟಾಕ್ಕೆ ಹೋಲಿಸಿ ಸಮೀಕ್ಷೆ ನಡೆಸಿದಾಗ, ಈ ಬಾರಿ ಮೂರನೇ ಅಲೆಯಲ್ಲಿ ಆಸ್ಪತ್ರೆಗೆ ಮೂರನೇ ತರಂಗದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸರಾಸರಿ ವಯಸ್ಸು ಅಂದಾಜು 44 ಆಗಿತ್ತು. ಅದು ಹಿಂದಿನ ಅಲೆಯಲ್ಲಿ ಅಂದಾಜು 55 ಆಗಿತ್ತು ಎಂದು ಹೇಳಲಾಗಿದೆ.

ಮೂರನೇ ಅಲೆಯಲ್ಲಿ ಆಸ್ಪತ್ರೆ ಸೇರಿದವರು ಕಿರಿಯ ವಯಸ್ಸಿನವರೇ ಆಗಿದ್ದರು. ಆದರೆ ಅಚ್ಚರಿಯ ವಿಷಯವೆಂದರೆ, ಕಿರಿಯವಯಸ್ಸಾದರೂ ಇತರ ಕೆಲವರು ಕಾಯಿಲೆಗಳಿಂದ ಬಳಲುತ್ತಿದ್ದರು. 40 ರ ಆಸುಪಾಸಿನವರಿಗೂ ಕೂಡ ಹಲವು ರೋಗಗಳು ಬಾಧಿಸುತ್ತಿವೆ. ಮೂರನೇ ಅಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಶೇ.46ರಷ್ಟು ಕಿರಿ ವಯಸ್ಸಿನ ಜನರು ಬೇರೆ ಕೆಲವು ರೋಗಗಳಿಂದ ಬಳಲುತ್ತಿರುವವರೇ ಆಗಿದ್ದಾರೆ ಎಂದು ಡಾ.ಭಾರ್ಗವ್​ ಹೇಳಿದ್ದಾರೆ.

ಭಾರತದಲ್ಲಿ ಡೆಲ್ಟಾದಿಂದ ಉಂಟಾಗಿದ್ದ ಎರಡನೇ ಅಲೆಗಿಂತಲೂ ಈ ಬಾರಿ ಒಮಿಕ್ರಾನ್​​ನಿಂದ ಉಂಟಾದ ಅಲೆ ವಿಭಿನ್ನವಾಗಿದೆ. ಹಿಂದಿನ ಅಲೆಯಲ್ಲಿ ದೊಡ್ಡಸಂಖ್ಯೆಯಲ್ಲಿ ಸಾವು ಉಂಟಾಗಿತ್ತು. ಆದರೆ ಈ ಬಾರಿ ಹಾಗಿಲ್ಲ. ಲಕ್ಷಣಗಳಲ್ಲೂ ವ್ಯತ್ಯಾಸವಿದೆ ಎಂದು ಹೇಳಿದ್ದಾರೆ. ಒಮಿಕ್ರಾನ್​ ಸೋಂಕಿನಿಂದ ಬಂದ ಮೂರನೇ ಅಲೆಯಲ್ಲಿ, ಉಸಿರಾಟದ ತೊಂದರೆ, ರುಚಿ, ವಾಸನೆ ಕಳೆದುಕೊಳ್ಳುವುದು ಪ್ರಾಥಮಿಕ ಲಕ್ಷಣವಲ್ಲ. ಅದರ ಬದಲು ಗಂಟಲು ನೋವು, ಜ್ವರ, ಕೆಮ್ಮುಗಳು ಪ್ರಾಥಮಿಕ ಲಕ್ಷಣಗಳಾಗಿವೆ ಎಂದೂ ಡಾ. ಭಾರ್ಗವ್​ ಮಾಹಿತಿ ನೀಡಿದ್ದಾರೆ.  ಅಷ್ಟೇ ಅಲ್ಲ, ಮೂರನೇ ಅಲೆಯಲ್ಲಿ ಯಾವುದೇ ರೀತಿಯ ಅವ್ಯವಸ್ಥೆಯಾಗಿಲ್ಲ. ಔಷಧಗಳ ಬಳಕೆಯೂ ಕಡಿಮೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Bhargavi Narayan Birthday : ‘ಕಡೇ ಸ್ಟೇಷನ್ನಿನಲ್ಲಿ ನಿಲ್ಲಿಸಿದ ರೈಲಿನಲ್ಲಿ ಹತ್ತಿ ಕುಳಿತಿದ್ದೆವು!’

Published On - 9:29 am, Fri, 4 February 22

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ