Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಮಿಕ್ರಾನ್ ಗಂಭೀರವಾದ ಸೋಂಕಲ್ಲ, ಆದರೆ…’: ದೇಶದ ಜನರಿಗೆ ಮಹತ್ವದ ಮಾಹಿತಿ ನೀಡಿದ ಡಾ ರಣದೀಪ್ ಗುಲೇರಿಯಾ

Dr Randeep Guleria: AIIMS ದೆಹಲಿಯ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಹೊಸ ವರ್ಷಾಚರಣೆಗೂ ಮುನ್ನ ದೇಶದ ಜನರಿಗೆ ಮಹತ್ವದ ಸಂದೇಶ ನೀಡಿದ್ದಾರೆ. ವಿಡಿಯೋ ಮೂಲಕ ಅವರು ಸಂದೇಶ ನೀಡಿದ್ದು, ಆ ಕುರಿತ ಮಾಹಿತಿ ಇಲ್ಲಿದೆ.

‘ಒಮಿಕ್ರಾನ್ ಗಂಭೀರವಾದ ಸೋಂಕಲ್ಲ, ಆದರೆ...’: ದೇಶದ ಜನರಿಗೆ ಮಹತ್ವದ ಮಾಹಿತಿ ನೀಡಿದ ಡಾ ರಣದೀಪ್ ಗುಲೇರಿಯಾ
ಡಾ.ರಣದೀಪ್​ ಗುಲೇರಿಯಾ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on:Dec 30, 2021 | 1:21 PM

ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ದೆಹಲಿಯ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ (Dr Randeep Guleria) ಹೊಸ ವರ್ಷದ ಸಂದೇಶ ನೀಡಿದ್ದಾರೆ. ಅದರಲ್ಲಿ ಅವರು ಜನರಿಗೆ ಎಚ್ಚರಿಕೆ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದು, ಒಮಿಕ್ರಾನ್ ರೂಪಾಂತರದ ಕುರಿತು ಭಯಬೇಡ, ಆದರೆ ಜಾಗರೂಕರಾಗಿರಿ ಎಂದು ಕಿವಿಮಾತು ಹೇಳಿದ್ದಾರೆ. ಒಮಿಕ್ರಾನ್ ಲಕ್ಷಣಗಳು ಹಾಗೂ ಪರಿಣಾಮದ ಕುರಿತು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಲಭ್ಯವಾಗಿರುವ ಅಧ್ಯಯನಗಳ ಪ್ರಕಾರ ಒಮಿಕ್ರಾನ್ ರೂಪಾಂತರದ ಪರಿಣಾಮಗಳು ಸೌಮ್ಯವಾಗಿದ್ದು, ಗಂಭೀರವಾದ ಸೋಂಕಲ್ಲ. ಎರಡನೇ ಅಲೆಯಲ್ಲಿ ಉಂಟಾಗಿದ್ದಂತೆ ಆಮ್ಲಜನಕದ ಅವಶ್ಯಕತೆ ಹೆಚ್ಚು ಬೇಕಾಗುವುದಿಲ್ಲ. ಜನರು ಆಮ್ಲಜನಕ ಸಿಲಿಂಡರ್ ಹಾಗೂ ಔಷಧಗಳನ್ನು ಸಂಗ್ರಹಿಸಲು ಮುಂದಾಗಬೇಡಿ ಎಂದು ಅವರು ಸಲಹೆ ನೀಡಿದ್ದಾರೆ. ಇದರಿಂದ ಒಂದು ರಾಷ್ಟ್ರವಾಗಿ ಸಮಸ್ಯೆಯನ್ನು ಸಮರ್ಥವಾಗಿ ಹಾಗೂ ವ್ಯವಸ್ಥಿತವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ಸಂದೇಶದಲ್ಲಿ ಡಾ.ಗುಲೇರಿಯಾ ಜನರಿಗೆ 2022ರ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ ಸಂತೋಷ, ಆರೋಗ್ಯಕರ ಮತ್ತು ಸಮೃದ್ಧ 2022 ಅನ್ನು ಹಾರೈಸುತ್ತೇನೆ ಎಂದು ಸಂದೇಶದಲ್ಲಿ ತಿಳಿಸಿರುವ ಗುಲೇರಿಯಾ, ಸಾಂಕ್ರಮಿಕ ರೋಗ ಕೊನೆಗೊಂಡಿಲ್ಲ. ಆದರೆ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ ಎನ್ನುವುದನ್ನು ಅರ್ಥ ಮಾಡಿಕೊಳ್ಳುವುದು ಮುಖ್ಯವಾಗಿದೆ ಎಂದಿದ್ದಾರೆ. ಭಾರತದಲ್ಲಿ ಹೆಚ್ಚಿನ ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ. ಆದರೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದು, ಜನಸಂದಣಿ ತಪ್ಪಿಸುವುದು ಮೊದಲಾದ ಎಚ್ಚರಿಕೆ ತೆಗೆದುಕೊಳ್ಳುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು ಎಷ್ಟಿವೆ? ಭಾರತದಲ್ಲಿ ಪ್ರಕರಣಗಳು ನಿಧಾನವಾಗಿ ಹೆಚ್ಚಾಗುತ್ತಿರುವ ಕಾರಣ ರಾಜ್ಯಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಹಲವು ರಾಜ್ಯಗಳು ಕಠಿಣ ಕ್ರಮಗಳನ್ನೂ ಘೋಷಿಸಿವೆ. ಇದುವರೆಗೆ ಒಟ್ಟು 961 ಒಮಿಕ್ರಾನ್ ಪ್ರಕರಣ ವರದಿಯಾಗಿದ್ದು 320 ಜನರು ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಮಿಕ್ರಾನ್ ರೂಪಾಂತರ ಕಂಡುಬಂದಿದೆ. ದೆಹಲಿಯಲ್ಲಿ 263 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದರೆ ಮಹಾರಾಷ್ಟ್ರದಲ್ಲಿ 252 ಮತ್ತು ಗುಜರಾತ್​ನಲ್ಲಿ 97 ಪ್ರಕರಣಗಳು ವರದಿಯಾಗಿವೆ.

ರಾಜಸ್ಥಾನ ಮತ್ತು ಕೇರಳದಲ್ಲಿ ಕ್ರಮವಾಗಿ 69 ಮತ್ತು 65 ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ತೆಲಂಗಾಣದಲ್ಲಿ 62 ಜನರಿಗೆ, ತಮಿಳುನಾಡಿನಲ್ಲಿ 45 ಜನರಿಗೆ ಒಮಿಕ್ರಾನ್ ಸೋಂಕು ತಗುಲಿದೆ. ಕರ್ನಾಟಕದಲ್ಲಿ 34 ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ (16 ಪ್ರಕರಣಗಳು), ಹರಿಯಾಣ (12 ಪ್ರಕರಣಗಳು) ಮತ್ತು ಪಶ್ಚಿಮ ಬಂಗಾಳಗಳಲ್ಲಿ (11 ಪ್ರಕರಣಗಳು) ಇದುವರೆಗೆ 20 ಕ್ಕಿಂತ ಕಡಿಮೆ ಪ್ರಕರಣಗಳು ಕಂಡುಬಂದಿವೆ.

ಮಧ್ಯಪ್ರದೇಶ (9 ಪ್ರಕರಣಗಳು), ಒಡಿಶಾ (9 ಪ್ರಕರಣಗಳು), ಉತ್ತರಾಖಂಡ (4 ಪ್ರಕರಣಗಳು), ಚಂಡೀಗಢ (3 ಪ್ರಕರಣಗಳು), ಜಮ್ಮು ಮತ್ತು ಕಾಶ್ಮೀರ (3 ಪ್ರಕರಣಗಳು), ಉತ್ತರ ಪ್ರದೇಶ (2 ಪ್ರಕರಣಗಳು), ಗೋವಾ, ಹಿಮಾಚಲ ಪ್ರದೇಶ, ಲಡಾಖ್, ಮಣಿಪುರ ಮತ್ತು ಪಂಜಾಬ್​ಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ:

ಮುಂಬೈನಲ್ಲಿ ಹೊಸ ವರ್ಷಾಚರಣೆಗೆ ಫುಲ್​ ಬ್ರೇಕ್​; ನಗರಾದ್ಯಂತ ಇಂದಿನಿಂದಲೇ ಸೆಕ್ಷನ್​ 144 ಜಾರಿ

ಮೊಲ್ನುಪಿರಾವಿರ್ ಮಾತ್ರೆಗಳಿಂದ ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡಲು 2000-3000 ರೂ.ವೆಚ್ಚವಾಗಬಹುದು

Published On - 1:20 pm, Thu, 30 December 21

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!