AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸ್ಥಾಪನಾ ದಿನದಂದು ಭಾರತದಾದ್ಯಂತ 10 ಲಕ್ಷ ಸ್ಥಳಗಳಲ್ಲಿ ಪ್ರಧಾನಿ ಮೋದಿ ಭಾಷಣ ಪ್ರದರ್ಶನ

ಏಪ್ರಿಲ್ 6 ರಿಂದ ಏಪ್ರಿಲ್ 14 ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದವರೆಗೆ ಒಂದು ವಾರದ ಸಾಮಾಜಿಕ ಸಾಮರಸ್ಯ ಅಭಿಯಾನವನ್ನು ಬಿಜೆಪಿ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸಂಸ್ಥಾಪನಾ ದಿನದಂದು ಭಾರತದಾದ್ಯಂತ 10 ಲಕ್ಷ ಸ್ಥಳಗಳಲ್ಲಿ ಪ್ರಧಾನಿ ಮೋದಿ ಭಾಷಣ ಪ್ರದರ್ಶನ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 03, 2023 | 10:34 PM

Share

ಮುಖ್ಯಾಂಶಗಳು

  • ಏಪ್ರಿಲ್ 6 ರಂದು ಬಿಜೆಪಿ ಸಂಸ್ಥಾಪನಾ ದಿನ
  • ಬಿಜೆಪಿ ಮೂಲಗಳ ಪ್ರಕಾರ ಪ್ರಧಾನಿ ಭಾಷಣವನ್ನು ದೇಶಾದ್ಯಂತ ಪ್ರದರ್ಶಿಸಲು ಸಿದ್ಧತೆ ನಡೆದಿದೆ
  • ಪ್ರಧಾನಿ ಮೋದಿಯವರ ಭಾಷಣ ಕೇಳಲು ಬಿಜೆಪಿ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಕ್ಷದ ಕಚೇರಿಗಳಲ್ಲಿ ಸೇರಲಿದ್ದಾರೆ

ಬಿಜೆಪಿಯ (BJP) 43 ನೇ ಸಂಸ್ಥಾಪನಾ ದಿನವಾದ (foundation day)ಏಪ್ರಿಲ್ 6 ರಂದು ದೇಶಾದ್ಯಂತ 10 ಲಕ್ಷ ಸ್ಥಳಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭಾಷಣ ಪ್ರದರ್ಶನವಾಗಲಿದೆ. ಏಪ್ರಿಲ್ 6 ರಂದು ಬಿಜೆಪಿ ಸಂಸ್ಥಾಪನಾ ದಿನವಾಗಿದ್ದು, ಇದಕ್ಕಾಗಿ ಬಿಜೆಪಿ ಭಾರಿ ಸಿದ್ಧತೆ ನಡೆಸುತ್ತಿದೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ. ಇದಕ್ಕಾಗಿ ಸಿದ್ಧತೆಗಳು ಪೂರ್ಣಗೊಂಡಿವೆ. ಇದೀಗ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ ಪ್ರಧಾನಿ ಭಾಷಣವನ್ನು ದೇಶಾದ್ಯಂತ ಪ್ರದರ್ಶಿಸಲು ಸಿದ್ಧತೆ ನಡೆದಿದೆ.

ದೆಹಲಿಯಲ್ಲಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಚೇರಿಯಲ್ಲಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಬೆಳಗ್ಗೆ ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ದೇಶಾದ್ಯಂತ ಬಿಜೆಪಿ ಕಚೇರಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ನಡೆಯಲಿದೆ. ಪ್ರಧಾನಿ ಮೋದಿಯವರ ಭಾಷಣ ಕೇಳಲು ಬಿಜೆಪಿ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಕ್ಷದ ಕಚೇರಿಗಳಲ್ಲಿ ಸೇರಲಿದ್ದಾರೆ.

ಬೂತ್ ಮಟ್ಟದ ಎಲ್ಲಾ ಕಾರ್ಯಕರ್ತರಿಗೆ ಮಾಹಿತಿ ನೀಡಲಾಗಿದೆ. ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಬಿಜೆಪಿ ಕಾರ್ಯಕರ್ತರಿಗೆ ಪತ್ರವನ್ನೂ ನೀಡಿದೆ ಎಂದು ಬಿಜೆಪಿ ಮುಖಂಡರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿNMACC launch: ಭಾರತೀಯ ಕಲಾ ಪ್ರಕಾರಗಳನ್ನು ಉತ್ತೇಜಿಸುವ ಪ್ರಯತ್ನಗಳಿಗಾಗಿ ನೀತಾ ಅಂಬಾನಿಯವರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಏಪ್ರಿಲ್ 6 ರಿಂದ ಏಪ್ರಿಲ್ 14 ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದವರೆಗೆ ಒಂದು ವಾರದ ಸಾಮಾಜಿಕ ಸಾಮರಸ್ಯ ಅಭಿಯಾನವನ್ನು ಪಕ್ಷವು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!