AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿಸಲು ಬಂದ ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕಾಂಗ್ರೆಸ್ ನಾಯಕ; ವಿಡಿಯೋ ಮೂಲಕ ಟ್ರೋಲ್ ಮಾಡಿದ ಬಿಜೆಪಿ

ನಿಷೇಧಾಜ್ಞೆ ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಯೂತ್ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಬಿವಿ ಅವರನ್ನು ಬಂಧಿಸಲು ಹೋದಾಗ ಬಿವಿ ಶ್ರೀನಿವಾಸ್ ಬಂಧನಕ್ಕೊಳಗಾಗುವುದನ್ನು ತಪ್ಪಿಸಲು ಓಡಿಹೋಗಿದ್ದಾರೆ.

ಬಂಧಿಸಲು ಬಂದ ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕಾಂಗ್ರೆಸ್ ನಾಯಕ; ವಿಡಿಯೋ ಮೂಲಕ ಟ್ರೋಲ್ ಮಾಡಿದ ಬಿಜೆಪಿ
ಪೊಲೀಸರಿಂದ ತಪ್ಪಿಸಿಕೊಂಡು ಓಡಿಹೋದ ಕಾಂಗ್ರೆಸ್ ನಾಯಕImage Credit source: NDTV
TV9 Web
| Updated By: ಸುಷ್ಮಾ ಚಕ್ರೆ|

Updated on:Jun 14, 2022 | 1:29 PM

Share

ನವದೆಹಲಿ: ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ (National Herald Case) ರಾಹುಲ್ ಗಾಂಧಿಗೆ ಇಡಿ (ED) ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ನಿನ್ನೆ ಇಡಿ ಕಚೇರಿಗಳ ಎದುರು ದೇಶಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಸೋಮವಾರ ದೆಹಲಿಯ ಜಾರಿ ನಿರ್ದೇಶನಾಲಯದ ಹೊರಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದಾಗ ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ಬಂಧನದಿಂದ ಪಾರಾಗಲು ದೆಹಲಿ ಪೊಲೀಸರಿಂದ ತಪ್ಪಿಸಿಕೊಂಡು ಓಡಿಹೋಗಿದ್ದಾರೆ.

ಇಡಿ ಸಮನ್ಸ್​ ಹಿನ್ನೆಲೆಯಲ್ಲಿ ರಾಜಕೀಯ ಶಕ್ತಿ ಪ್ರದರ್ಶನದ ವೇಳೆ ರಾಹುಲ್ ಗಾಂಧಿ ಅವರು ಇಡಿ ಏಜೆನ್ಸಿಯ ಮುಂದೆ ಹಾಜರಾಗುತ್ತಿದ್ದಂತೆ ಕಾಂಗ್ರೆಸ್ ಬೆಂಬಲಿಗರು ಸೋಮವಾರ ದೆಹಲಿಯ ಇಡಿ ಕಚೇರಿಯ ಹೊರಗೆ ಜಮಾಯಿಸಿದ್ದರು. ಆದರೆ ನಿಷೇಧಾಜ್ಞೆ ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಶ್ರೀನಿವಾಸ್ ಬಿವಿ ಅವರನ್ನು ಬಂಧಿಸಲು ಹೋದಾಗ, ಯೂತ್ ಕಾಂಗ್ರೆಸ್ ಮುಖಂಡ ಬಿವಿ ಶ್ರೀನಿವಾಸ್ ಬಂಧನಕ್ಕೊಳಗಾಗುವುದನ್ನು ತಪ್ಪಿಸಲು ಓಡಿಹೋಗಿದ್ದಾರೆ.

ಇದನ್ನೂ ಓದಿ
Image
Presidential Polls 2022 ರಾಷ್ಟ್ರಪತಿ ಚುನಾವಣೆಯ ರೇಸ್​​ನಲ್ಲಿ ಇಲ್ಲ ಎಂದ ಶರದ್​​ ಪವಾರ್​​
Image
Agnipath Scheme: ಅಗ್ನಿಪಥ ಯೋಜನೆಗೆ ಅನುಮೋದನೆ, ಸಂಪುಟ ಸಮಿತಿ ಐತಿಹಾಸಿಕ ನಿರ್ಧಾರ: ರಾಜನಾಥ್ ಸಿಂಗ್
Image
ರಾಹುಲ್ ಗಾಂಧಿ ಕಂಡರೆ ಬಿಜೆಪಿಗೆ ಭಯ: ರಣದೀಪ್ ಸುರ್ಜೇವಾಲ ವ್ಯಂಗ್ಯ

ದೆಹಲಿ ಪೊಲೀಸರಿಂದ ತಪ್ಪಿಸಿಕೊಂಡು ಓಡಿಹೋಗುತ್ತಿರುವ ಯುವ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್ ಅವರ ವೀಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ನಿನ್ನೆ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಬೃಹತ್ ಶಕ್ತಿ ಪ್ರದರ್ಶನವನ್ನು ನಡೆಸಿದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: National Herald Case: ಏನಿದು ನ್ಯಾಷನಲ್ ಹೆರಾಲ್ಡ್​ ಪ್ರಕರಣ? ಈ ಕೇಸಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಪಾತ್ರವೇನು?

ವೈರಲ್ ಆಗಿರುವ ವಿಡಿಯೋದಲ್ಲಿ ತನ್ನ ಕಾರಿನಿಂದ ಕೆಳಗಿಳಿದ ಬಿ.ವಿ ಶ್ರೀನಿವಾಸ್ ಅವರನ್ನು ಪೊಲೀಸರು ತಡೆದು ನಿಲ್ಲಿಸಿದಾಗ ತಪ್ಪಿಸಿಕೊಂಡು ಓಡಿಹೋಗಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಮತ್ತೊಂದು ವಿಡಿಯೋ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದು, ಆ ದಿನ ನಿಜವಾಗಲೂ ಏನಾಯಿತು ಎಂಬುದನ್ನು ಆ ವಿಡಿಯೋದಲ್ಲಿ ನೋಡಬಹುದು.

ಮತ್ತೊಂದು ವಿಡಿಯೋ ಕ್ಲಿಪ್‌ನಲ್ಲಿ, ದೆಹಲಿ ಬಿಜೆಪಿ ವಕ್ತಾರ ಅಜಯ್ ಸೆಹ್ರಾವತ್ ಅವರು ಟ್ವೀಟ್ ಮಾಡಿದ್ದು, ಕಾಂಗ್ರೆಸ್ ನಾಯಕರು ಪೊಲೀಸರಿಗೆ ಹೆದರುವುದಿಲ್ಲ, ಪೊಲೀಸರ ಎದುರು ಶರಣಾಗುವುದಿಲ್ಲ. ಅವರು ಸುಮ್ಮನೆ ಓಡಿಹೋಗುತ್ತಾರಷ್ಟೆ ಎಂದು ಲೇವಡಿ ಮಾಡಿ ಟ್ವೀಟ್ ಮಾಡಿದ್ದಾರೆ.

ನಿನ್ನೆ ಕೆಸಿ ವೇಣುಗೋಪಾಲ್, ಸಿಎಂ ಅಶೋಕ್ ಗೆಹ್ಲೋಟ್ ಸೇರಿದಂತೆ ಅನೇಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಲವಂತವಾಗಿ ಹಿಡಿದು ಬಸ್‌ಗಳಿಗೆ ತುಂಬಿಸುತ್ತಿರುವ ವಿಡಿಯೋ ಕೂಡ ವೈರಲ್ ಆಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:13 pm, Tue, 14 June 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?