AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ನೆಲಸಮ ಬಗ್ಗೆ ವಿವರಣೆ ನೀಡುವಂತೆ ಉತ್ತರ ಪ್ರದೇಶಕ್ಕೆ ಸುಪ್ರೀಂಕೋರ್ಟ್ ನೋಟಿಸ್

“ಎಲ್ಲವೂ ನ್ಯಾಯಯುತವಾಗಿರಬೇಕು. ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಸರಿಯಾದ ಕಾರ್ಯವಿಧಾನವನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ, ”ಎಂದು ನ್ಯಾಯಪೀಠ ಹೇಳಿದೆ

ಕಟ್ಟಡ ನೆಲಸಮ ಬಗ್ಗೆ ವಿವರಣೆ ನೀಡುವಂತೆ ಉತ್ತರ ಪ್ರದೇಶಕ್ಕೆ ಸುಪ್ರೀಂಕೋರ್ಟ್ ನೋಟಿಸ್
ಸುಪ್ರೀಂಕೋರ್ಟ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 16, 2022 | 3:38 PM

Share

“ಎಲ್ಲವೂ ನ್ಯಾಯಯುತವಾಗಿರಬೇಕು” ಮತ್ತು ಅಧಿಕಾರಿಗಳು ಕಾನೂನಿನಡಿಯಲ್ಲಿ ಸರಿಯಾದ ಕಾರ್ಯವಿಧಾನವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು  ಸುಪ್ರೀಂಕೋರ್ಟ್ (Supreme Court) ಹೇಳಿದೆ. ಗುರುವಾರ ವಿಚಾರಣೆ ನಡೆಸಿದ ನ್ಯಾಯಾಲಯ ಕಳೆದ ವಾರ ಹಿಂಸಾಚಾರದಲ್ಲಿನ ಆರೋಪಿಗಳ ಮನೆಗಳನ್ನು ಕಾನೂನುಬಾಹಿರವಾಗಿ ಕೆಡವಲಾಗಿದೆ  ಎಂದು ಆರೋಪಿಸಿರುವ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಉತ್ತರ ಪ್ರದೇಶ (Uttar Pradesh) ಸರ್ಕಾರ ಮತ್ತು ಅದರ ಅಧಿಕಾರಿಗಳಿಗೆ  ಮೂರು ದಿನಗಳ ಕಾಲಾವಕಾಶ ನೀಡಿದೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಜಾರಿಯಲ್ಲಿದೆ ಎಂಬ ಭಾವನೆ ನಾಗರಿಕರಲ್ಲಿ ಇರಬೇಕು ಎಂದು ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ವಿಕ್ರಮ್ ನಾಥ್ ಎಂದು ಹೇಳಿದ ರಜಾಕಾಲದ ಪೀಠವು ಮುಂದಿನ ಮಂಗಳವಾರಕ್ಕೆ ವಿಚಾರಣೆಗೆ ಮುಂದೂಡಿದೆ. “ಎಲ್ಲವೂ ನ್ಯಾಯಯುತವಾಗಿರಬೇಕು. ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಸರಿಯಾದ ಕಾರ್ಯವಿಧಾನವನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ, ”ಎಂದು ನ್ಯಾಯಪೀಠ ಹೇಳಿದೆ. ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಕಾನ್ಪುರ ಮತ್ತು ಪ್ರಯಾಗ್‌ರಾಜ್ ನಾಗರಿಕ ಅಧಿಕಾರಿಗಳನ್ನು ಪ್ರತಿನಿಧಿಸುವ ಹಿರಿಯ ವಕೀಲ ಹರೀಶ್ ಸಾಳ್ವೆ, ಕಾನೂನು ಪ್ರಕ್ರಿಯೆಯನ್ನು ಅನುಸರಿಸಲಾಗಿದೆ. 2020 ರ ಆಗಸ್ಟ್‌ನಲ್ಲಿ ನೀಡಿದ ನೋಟಿಸ್ ಆಧಾರದ ಮೇಲೆ ನೆಲಸಮ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಕ್ರಮದಿಂದ ನೊಂದ ಕಕ್ಷಿದಾರರು ಯಾರೂ ನ್ಯಾಯಾಲಯದ ಮುಂದೆ ಹಾಜರಾಗಿಲ್ಲ ಎಂದು ಮೆಹ್ತಾ ಹೇಳಿದ್ದಾರೆ. ಮುಸ್ಲಿಂ ಸಂಘಟನೆಯಾದ ಜಮಿಯತ್ ಉಲಾಮಾ-ಇ-ಹಿಂದ್ ಯಾವುದೇ ರೀತಿಯಲ್ಲಿ ಮನೆಗಳನ್ನು ನೆಲಸಮ ಮಾಡಬಾರದು ಎಂಬ ಸಾರ್ವತ್ರಿಕ ಆದೇಶವನ್ನು ಕೋರಿ ನ್ಯಾಯಾಲಯವನ್ನು ಸಂಪರ್ಕಿಸಿದೆ. ಜಮಿಯತ್ ಉಲಮಾ-ಇ-ಹಿಂದ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಸಿ ಯು ಸಿಂಗ್, ಹುಝೆಫಾ ಅಹ್ಮದಿ ಮತ್ತು ನಿತ್ಯಾ ರಾಮಕೃಷ್ಣನ್ ಅವರು, ಉತ್ತರ ಪ್ರದೇಶ ಮುಖ್ಯಮಂತ್ರಿ ಸೇರಿದಂತೆ ಅತ್ಯುನ್ನತ ಸಾಂವಿಧಾನಿಕ ಅಧಿಕಾರಿಗಳು ಹೇಳಿಕೆಗಳನ್ನು ನೀಡುತ್ತಿದ್ದು ಆಪಾದಿತ ಗಲಭೆ ಆರೋಪಿಗಳು ತಮ್ಮ ಮನೆಗಳನ್ನು ಖಾಲಿ ಮಾಡಲು ಅವಕಾಶ ನೀಡದೆ ಕಟ್ಟಡಗಳನ್ನು ಕೆಡವುತ್ತಿದ್ದಾರೆ ಎಂದಿದ್ದಾರೆ.

ರಾಜ್ಯದಲ್ಲಿ ಇತ್ತೀಚಿನ ಹಿಂಸಾಚಾರದ ಆರೋಪಿಗಳ ಆಸ್ತಿಗಳನ್ನು ಇನ್ನು ಮುಂದೆ ಧ್ವಂಸಗೊಳಿಸದಂತೆ ಖಚಿತಪಡಿಸಿಕೊಳ್ಳಲು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಮುಸ್ಲಿಂ ಸಂಸ್ಥೆ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ
Image
ಬಿಜೆಪಿಯ ‘ಬುಲ್ಡೋಜರ್’ ತಡೆಯುವ ಶಕ್ತಿ ಯಾರಿಗಿದೆ?: ಅಖಿಲೇಶ್ ಯಾದವ್
Image
Viral Photo : ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?
Image
ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಬುರ್ಖಾಧಾರಿ ಮಹಿಳೆ, ಎಚ್ಚರಿಸಿದ ಮಕ್ಕಳು, ತಪ್ಪಿದ ಅನಾಹುತ!

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 3:36 pm, Thu, 16 June 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್