AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇತಾಜಿ 125 ನೇ ಜನ್ಮದಿನಾಚರಣೆ: ಬೋಸ್ ಬಗೆಗಿನ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ

ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿದ ಸ್ವಾತಂತ್ರ್ಯ ಹೋರಾಟಗಾರ ಐಸಿಎಸ್ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರೂ ಬ್ರಿಟಿಷ್ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ನಿರಾಕರಿಸಿದರು.

ನೇತಾಜಿ 125 ನೇ ಜನ್ಮದಿನಾಚರಣೆ: ಬೋಸ್ ಬಗೆಗಿನ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ
ನೇತಾಜಿ ಸುಭಾಸ್ ಚಂದ್ರ ಬೋಸ್
ಪೃಥ್ವಿಶಂಕರ
|

Updated on: Jan 22, 2021 | 4:01 PM

Share

ಕ್ರಾಂತಿಯ ಮೂಲಕ ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚನ್ನ ಹಚ್ಚಿದ ವೀರ ಸೇನಾನಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನುಮ ದಿನದ ಪ್ರಯುಕ್ತ ಅವರ ಬಗೆಗಿನ ಕೆಲವು ಕುತೂಹಲಕಾರಿ ಸಂಗತಿಗಳು ಇಲ್ಲಿವೆ.

– ಸುಭಾಸ್ ಚಂದ್ರ ಬೋಸ್ ಜನವರಿ 23, 1987 ರಂದು ಒಡಿಶಾದ ಕಟಕ್​ನಲ್ಲಿ ವಕೀಲ ಜನಕಿನಾಥ್ ಬೋಸ್ ಅವರ ಮಗನಾಗಿ ಜನಿಸಿದರು.

– ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿದ ಸ್ವಾತಂತ್ರ್ಯ ಹೋರಾಟಗಾರ ಐಸಿಎಸ್ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರೂ ಬ್ರಿಟಿಷ್ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ನಿರಾಕರಿಸಿದರು.

– ಸುಭಾಸ್ ಚಂದ್ರ ಬೋಸ್ ಅವರನ್ನು ನೇತಾಜಿ ಎಂದೂ ಕರೆಯಲಾಗುತ್ತಿತ್ತು. ಸುಭಾಸ್ ಚಂದ್ರ ಬೋಸ್ ಎರಡು ಬಾರಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

– ಸುಭಾಸ್ ಚಂದ್ರ ಬೋಸ್ ಭಾರತಕ್ಕೆ ಮರಳಿದ ನಂತರ ಸ್ವರಾಜ್ ಪತ್ರಿಕೆ ಪ್ರಾರಂಭಿಸಿದರು ಮತ್ತು ಬಂಗಾಳ ಪ್ರಾಂತೀಯ ಕಾಂಗ್ರೆಸ್ ಸಮಿತಿಯ ಪ್ರಚಾರದ ಉಸ್ತುವಾರಿ ವಹಿಸಿಕೊಂಡರು.

– ಬ್ರಿಟಿಷರೊಂದಿಗೆ ವ್ಯವಹರಿಸಲು ಗಾಂಧಿಯವರ ಅಹಿಂಸಾತ್ಮಕ ಕ್ರಮಗಳನ್ನು ವಿರೋಧಿಸಿದ ಸ್ವಾತಂತ್ರ್ಯ ಹೋರಾಟಗಾರನನ್ನು 1921 ರಿಂದ 1941 ರ ನಡುವೆ 11 ವಿವಿಧ ಜೈಲುಗಳಲ್ಲಿ ಬಂಧಿಸಿಡಲಾಗಿತ್ತು ಎಂದು ಹೇಳಲಾಗುತ್ತದೆ.

– ಜಪಾನ್ ಮತ್ತು ಜರ್ಮನಿಯ ಈ ಎರಡೂ ದೇಶಗಳು ಬ್ರಿಟಿಷರ ವಿರುದ್ಧವಾಗಿರುವುದರಿಂದ, ನೇತಾಜಿ ಜಪಾನ್ ಮತ್ತು ಜರ್ಮನಿಯ ಸಹಾಯವನ್ನು ಕೋರಿದ್ದರು.

– ಜರ್ಮನಿಯಲ್ಲಿ ಆಜಾದ್ ಹಿಂದ್ ರೇಡಿಯೊ ಕೇಂದ್ರವನ್ನು ಸ್ಥಾಪಿಸುವಲ್ಲಿ ನೇತಾಜಿ ಪ್ರಮುಖ ಪಾತ್ರ ವಹಿಸಿದರು ಮತ್ತು ಪೂರ್ವ ಏಷ್ಯಾದಲ್ಲಿ ಭಾರತೀಯ ರಾಷ್ಟ್ರೀಯತಾವಾದಿ ಚಳವಳಿಯನ್ನು ಮುನ್ನಡೆಸಿದರು.

– ಭಗವದ್ಗೀತೆ ಮತ್ತು ಸಾರ್ವತ್ರಿಕತೆಯ ಬಗ್ಗೆ ಸ್ವಾಮಿ ವಿವೇಕಾನಂದರ ಬೋಧನೆಗಳು ನೇತಾಜಿಗೆ ಉತ್ತಮ ಪ್ರೇರಣೆಯಾಗಿದ್ದವು.

– ನನಗೆ ರಕ್ತ ಕೊಡು, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ. ದಿಲ್ಲಿ ಚಲೋ ಮತ್ತು ಜೈ ಹಿಂದ್ ಮುಂತಾದ ಪ್ರಸಿದ್ಧ ಘೋಷಣೆಗಳ ಮುಖಾಂತರ ನೇತಾಜಿಯವರನ್ನು ನೆನೆಯಬಹುದಾಗಿದೆ.

– ಬೋಸ್ ಹೇಗೆ ನಿಧನರಾದರು ಎಂಬುದು ಇಲ್ಲಿಯವರೆಗೆ ತಿಳಿದಿಲ್ಲ, ಆಗಸ್ಟ್ 18, 1945 ರಂದು ತೈವಾನ್‌ನ ತೈಪೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ತನ್ನ ಪ್ರಾಣವನ್ನು ಕಳೆದುಕೊಂಡರೆಂದು ಕೆಲವರು ಹೇಳುತ್ತಾರೆ.

– ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿ ಮತ್ತು ಜಪಾನ್ ಸಹಾಯದಿಂದ ಭಾರತವನ್ನು ಬ್ರಿಟಿಷ್ ಆಡಳಿತದಿಂದ ಹೊರಹಾಕಲು ಪ್ರಯತ್ನಿಸಿದ ಬೋಸ್, ತೈವಾನ್ ಬಳಿ ವಿಮಾನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ.

ಬೋಸ್ 125ನೇ ಜನ್ಮ ದಿನಾಚರಣೆ: ಪ್ರಧಾನಿ ಮೋದಿ ಬಂಗಾಳ ಭೇಟಿ, ಮಮತಾ ನಾಡಲ್ಲಿ ಗರಿಗೆದರಿದ ರಾಜಕೀಯ..

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ