AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇತಾಜಿ 125 ನೇ ಜನ್ಮದಿನಾಚರಣೆ: ಬೋಸ್ ಬಗೆಗಿನ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ

ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿದ ಸ್ವಾತಂತ್ರ್ಯ ಹೋರಾಟಗಾರ ಐಸಿಎಸ್ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರೂ ಬ್ರಿಟಿಷ್ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ನಿರಾಕರಿಸಿದರು.

ನೇತಾಜಿ 125 ನೇ ಜನ್ಮದಿನಾಚರಣೆ: ಬೋಸ್ ಬಗೆಗಿನ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ
ನೇತಾಜಿ ಸುಭಾಸ್ ಚಂದ್ರ ಬೋಸ್
Follow us
ಪೃಥ್ವಿಶಂಕರ
|

Updated on: Jan 22, 2021 | 4:01 PM

ಕ್ರಾಂತಿಯ ಮೂಲಕ ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚನ್ನ ಹಚ್ಚಿದ ವೀರ ಸೇನಾನಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನುಮ ದಿನದ ಪ್ರಯುಕ್ತ ಅವರ ಬಗೆಗಿನ ಕೆಲವು ಕುತೂಹಲಕಾರಿ ಸಂಗತಿಗಳು ಇಲ್ಲಿವೆ.

– ಸುಭಾಸ್ ಚಂದ್ರ ಬೋಸ್ ಜನವರಿ 23, 1987 ರಂದು ಒಡಿಶಾದ ಕಟಕ್​ನಲ್ಲಿ ವಕೀಲ ಜನಕಿನಾಥ್ ಬೋಸ್ ಅವರ ಮಗನಾಗಿ ಜನಿಸಿದರು.

– ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿದ ಸ್ವಾತಂತ್ರ್ಯ ಹೋರಾಟಗಾರ ಐಸಿಎಸ್ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರೂ ಬ್ರಿಟಿಷ್ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ನಿರಾಕರಿಸಿದರು.

– ಸುಭಾಸ್ ಚಂದ್ರ ಬೋಸ್ ಅವರನ್ನು ನೇತಾಜಿ ಎಂದೂ ಕರೆಯಲಾಗುತ್ತಿತ್ತು. ಸುಭಾಸ್ ಚಂದ್ರ ಬೋಸ್ ಎರಡು ಬಾರಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

– ಸುಭಾಸ್ ಚಂದ್ರ ಬೋಸ್ ಭಾರತಕ್ಕೆ ಮರಳಿದ ನಂತರ ಸ್ವರಾಜ್ ಪತ್ರಿಕೆ ಪ್ರಾರಂಭಿಸಿದರು ಮತ್ತು ಬಂಗಾಳ ಪ್ರಾಂತೀಯ ಕಾಂಗ್ರೆಸ್ ಸಮಿತಿಯ ಪ್ರಚಾರದ ಉಸ್ತುವಾರಿ ವಹಿಸಿಕೊಂಡರು.

– ಬ್ರಿಟಿಷರೊಂದಿಗೆ ವ್ಯವಹರಿಸಲು ಗಾಂಧಿಯವರ ಅಹಿಂಸಾತ್ಮಕ ಕ್ರಮಗಳನ್ನು ವಿರೋಧಿಸಿದ ಸ್ವಾತಂತ್ರ್ಯ ಹೋರಾಟಗಾರನನ್ನು 1921 ರಿಂದ 1941 ರ ನಡುವೆ 11 ವಿವಿಧ ಜೈಲುಗಳಲ್ಲಿ ಬಂಧಿಸಿಡಲಾಗಿತ್ತು ಎಂದು ಹೇಳಲಾಗುತ್ತದೆ.

– ಜಪಾನ್ ಮತ್ತು ಜರ್ಮನಿಯ ಈ ಎರಡೂ ದೇಶಗಳು ಬ್ರಿಟಿಷರ ವಿರುದ್ಧವಾಗಿರುವುದರಿಂದ, ನೇತಾಜಿ ಜಪಾನ್ ಮತ್ತು ಜರ್ಮನಿಯ ಸಹಾಯವನ್ನು ಕೋರಿದ್ದರು.

– ಜರ್ಮನಿಯಲ್ಲಿ ಆಜಾದ್ ಹಿಂದ್ ರೇಡಿಯೊ ಕೇಂದ್ರವನ್ನು ಸ್ಥಾಪಿಸುವಲ್ಲಿ ನೇತಾಜಿ ಪ್ರಮುಖ ಪಾತ್ರ ವಹಿಸಿದರು ಮತ್ತು ಪೂರ್ವ ಏಷ್ಯಾದಲ್ಲಿ ಭಾರತೀಯ ರಾಷ್ಟ್ರೀಯತಾವಾದಿ ಚಳವಳಿಯನ್ನು ಮುನ್ನಡೆಸಿದರು.

– ಭಗವದ್ಗೀತೆ ಮತ್ತು ಸಾರ್ವತ್ರಿಕತೆಯ ಬಗ್ಗೆ ಸ್ವಾಮಿ ವಿವೇಕಾನಂದರ ಬೋಧನೆಗಳು ನೇತಾಜಿಗೆ ಉತ್ತಮ ಪ್ರೇರಣೆಯಾಗಿದ್ದವು.

– ನನಗೆ ರಕ್ತ ಕೊಡು, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ. ದಿಲ್ಲಿ ಚಲೋ ಮತ್ತು ಜೈ ಹಿಂದ್ ಮುಂತಾದ ಪ್ರಸಿದ್ಧ ಘೋಷಣೆಗಳ ಮುಖಾಂತರ ನೇತಾಜಿಯವರನ್ನು ನೆನೆಯಬಹುದಾಗಿದೆ.

– ಬೋಸ್ ಹೇಗೆ ನಿಧನರಾದರು ಎಂಬುದು ಇಲ್ಲಿಯವರೆಗೆ ತಿಳಿದಿಲ್ಲ, ಆಗಸ್ಟ್ 18, 1945 ರಂದು ತೈವಾನ್‌ನ ತೈಪೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ತನ್ನ ಪ್ರಾಣವನ್ನು ಕಳೆದುಕೊಂಡರೆಂದು ಕೆಲವರು ಹೇಳುತ್ತಾರೆ.

– ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿ ಮತ್ತು ಜಪಾನ್ ಸಹಾಯದಿಂದ ಭಾರತವನ್ನು ಬ್ರಿಟಿಷ್ ಆಡಳಿತದಿಂದ ಹೊರಹಾಕಲು ಪ್ರಯತ್ನಿಸಿದ ಬೋಸ್, ತೈವಾನ್ ಬಳಿ ವಿಮಾನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ.

ಬೋಸ್ 125ನೇ ಜನ್ಮ ದಿನಾಚರಣೆ: ಪ್ರಧಾನಿ ಮೋದಿ ಬಂಗಾಳ ಭೇಟಿ, ಮಮತಾ ನಾಡಲ್ಲಿ ಗರಿಗೆದರಿದ ರಾಜಕೀಯ..

ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್