AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇತಾಜಿ 125 ನೇ ಜನ್ಮದಿನಾಚರಣೆ: ಬೋಸ್ ಬಗೆಗಿನ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ

ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿದ ಸ್ವಾತಂತ್ರ್ಯ ಹೋರಾಟಗಾರ ಐಸಿಎಸ್ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರೂ ಬ್ರಿಟಿಷ್ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ನಿರಾಕರಿಸಿದರು.

ನೇತಾಜಿ 125 ನೇ ಜನ್ಮದಿನಾಚರಣೆ: ಬೋಸ್ ಬಗೆಗಿನ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ
ನೇತಾಜಿ ಸುಭಾಸ್ ಚಂದ್ರ ಬೋಸ್
ಪೃಥ್ವಿಶಂಕರ
|

Updated on: Jan 22, 2021 | 4:01 PM

Share

ಕ್ರಾಂತಿಯ ಮೂಲಕ ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚನ್ನ ಹಚ್ಚಿದ ವೀರ ಸೇನಾನಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನುಮ ದಿನದ ಪ್ರಯುಕ್ತ ಅವರ ಬಗೆಗಿನ ಕೆಲವು ಕುತೂಹಲಕಾರಿ ಸಂಗತಿಗಳು ಇಲ್ಲಿವೆ.

– ಸುಭಾಸ್ ಚಂದ್ರ ಬೋಸ್ ಜನವರಿ 23, 1987 ರಂದು ಒಡಿಶಾದ ಕಟಕ್​ನಲ್ಲಿ ವಕೀಲ ಜನಕಿನಾಥ್ ಬೋಸ್ ಅವರ ಮಗನಾಗಿ ಜನಿಸಿದರು.

– ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿದ ಸ್ವಾತಂತ್ರ್ಯ ಹೋರಾಟಗಾರ ಐಸಿಎಸ್ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರೂ ಬ್ರಿಟಿಷ್ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ನಿರಾಕರಿಸಿದರು.

– ಸುಭಾಸ್ ಚಂದ್ರ ಬೋಸ್ ಅವರನ್ನು ನೇತಾಜಿ ಎಂದೂ ಕರೆಯಲಾಗುತ್ತಿತ್ತು. ಸುಭಾಸ್ ಚಂದ್ರ ಬೋಸ್ ಎರಡು ಬಾರಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

– ಸುಭಾಸ್ ಚಂದ್ರ ಬೋಸ್ ಭಾರತಕ್ಕೆ ಮರಳಿದ ನಂತರ ಸ್ವರಾಜ್ ಪತ್ರಿಕೆ ಪ್ರಾರಂಭಿಸಿದರು ಮತ್ತು ಬಂಗಾಳ ಪ್ರಾಂತೀಯ ಕಾಂಗ್ರೆಸ್ ಸಮಿತಿಯ ಪ್ರಚಾರದ ಉಸ್ತುವಾರಿ ವಹಿಸಿಕೊಂಡರು.

– ಬ್ರಿಟಿಷರೊಂದಿಗೆ ವ್ಯವಹರಿಸಲು ಗಾಂಧಿಯವರ ಅಹಿಂಸಾತ್ಮಕ ಕ್ರಮಗಳನ್ನು ವಿರೋಧಿಸಿದ ಸ್ವಾತಂತ್ರ್ಯ ಹೋರಾಟಗಾರನನ್ನು 1921 ರಿಂದ 1941 ರ ನಡುವೆ 11 ವಿವಿಧ ಜೈಲುಗಳಲ್ಲಿ ಬಂಧಿಸಿಡಲಾಗಿತ್ತು ಎಂದು ಹೇಳಲಾಗುತ್ತದೆ.

– ಜಪಾನ್ ಮತ್ತು ಜರ್ಮನಿಯ ಈ ಎರಡೂ ದೇಶಗಳು ಬ್ರಿಟಿಷರ ವಿರುದ್ಧವಾಗಿರುವುದರಿಂದ, ನೇತಾಜಿ ಜಪಾನ್ ಮತ್ತು ಜರ್ಮನಿಯ ಸಹಾಯವನ್ನು ಕೋರಿದ್ದರು.

– ಜರ್ಮನಿಯಲ್ಲಿ ಆಜಾದ್ ಹಿಂದ್ ರೇಡಿಯೊ ಕೇಂದ್ರವನ್ನು ಸ್ಥಾಪಿಸುವಲ್ಲಿ ನೇತಾಜಿ ಪ್ರಮುಖ ಪಾತ್ರ ವಹಿಸಿದರು ಮತ್ತು ಪೂರ್ವ ಏಷ್ಯಾದಲ್ಲಿ ಭಾರತೀಯ ರಾಷ್ಟ್ರೀಯತಾವಾದಿ ಚಳವಳಿಯನ್ನು ಮುನ್ನಡೆಸಿದರು.

– ಭಗವದ್ಗೀತೆ ಮತ್ತು ಸಾರ್ವತ್ರಿಕತೆಯ ಬಗ್ಗೆ ಸ್ವಾಮಿ ವಿವೇಕಾನಂದರ ಬೋಧನೆಗಳು ನೇತಾಜಿಗೆ ಉತ್ತಮ ಪ್ರೇರಣೆಯಾಗಿದ್ದವು.

– ನನಗೆ ರಕ್ತ ಕೊಡು, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ. ದಿಲ್ಲಿ ಚಲೋ ಮತ್ತು ಜೈ ಹಿಂದ್ ಮುಂತಾದ ಪ್ರಸಿದ್ಧ ಘೋಷಣೆಗಳ ಮುಖಾಂತರ ನೇತಾಜಿಯವರನ್ನು ನೆನೆಯಬಹುದಾಗಿದೆ.

– ಬೋಸ್ ಹೇಗೆ ನಿಧನರಾದರು ಎಂಬುದು ಇಲ್ಲಿಯವರೆಗೆ ತಿಳಿದಿಲ್ಲ, ಆಗಸ್ಟ್ 18, 1945 ರಂದು ತೈವಾನ್‌ನ ತೈಪೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ತನ್ನ ಪ್ರಾಣವನ್ನು ಕಳೆದುಕೊಂಡರೆಂದು ಕೆಲವರು ಹೇಳುತ್ತಾರೆ.

– ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿ ಮತ್ತು ಜಪಾನ್ ಸಹಾಯದಿಂದ ಭಾರತವನ್ನು ಬ್ರಿಟಿಷ್ ಆಡಳಿತದಿಂದ ಹೊರಹಾಕಲು ಪ್ರಯತ್ನಿಸಿದ ಬೋಸ್, ತೈವಾನ್ ಬಳಿ ವಿಮಾನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ.

ಬೋಸ್ 125ನೇ ಜನ್ಮ ದಿನಾಚರಣೆ: ಪ್ರಧಾನಿ ಮೋದಿ ಬಂಗಾಳ ಭೇಟಿ, ಮಮತಾ ನಾಡಲ್ಲಿ ಗರಿಗೆದರಿದ ರಾಜಕೀಯ..

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!