AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇತಾಜಿ 125 ನೇ ಜನ್ಮದಿನಾಚರಣೆ: ಬೋಸ್ ಬಗೆಗಿನ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ

ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿದ ಸ್ವಾತಂತ್ರ್ಯ ಹೋರಾಟಗಾರ ಐಸಿಎಸ್ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರೂ ಬ್ರಿಟಿಷ್ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ನಿರಾಕರಿಸಿದರು.

ನೇತಾಜಿ 125 ನೇ ಜನ್ಮದಿನಾಚರಣೆ: ಬೋಸ್ ಬಗೆಗಿನ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ
ನೇತಾಜಿ ಸುಭಾಸ್ ಚಂದ್ರ ಬೋಸ್
ಪೃಥ್ವಿಶಂಕರ
|

Updated on: Jan 22, 2021 | 4:01 PM

Share

ಕ್ರಾಂತಿಯ ಮೂಲಕ ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚನ್ನ ಹಚ್ಚಿದ ವೀರ ಸೇನಾನಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನುಮ ದಿನದ ಪ್ರಯುಕ್ತ ಅವರ ಬಗೆಗಿನ ಕೆಲವು ಕುತೂಹಲಕಾರಿ ಸಂಗತಿಗಳು ಇಲ್ಲಿವೆ.

– ಸುಭಾಸ್ ಚಂದ್ರ ಬೋಸ್ ಜನವರಿ 23, 1987 ರಂದು ಒಡಿಶಾದ ಕಟಕ್​ನಲ್ಲಿ ವಕೀಲ ಜನಕಿನಾಥ್ ಬೋಸ್ ಅವರ ಮಗನಾಗಿ ಜನಿಸಿದರು.

– ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿದ ಸ್ವಾತಂತ್ರ್ಯ ಹೋರಾಟಗಾರ ಐಸಿಎಸ್ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರೂ ಬ್ರಿಟಿಷ್ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ನಿರಾಕರಿಸಿದರು.

– ಸುಭಾಸ್ ಚಂದ್ರ ಬೋಸ್ ಅವರನ್ನು ನೇತಾಜಿ ಎಂದೂ ಕರೆಯಲಾಗುತ್ತಿತ್ತು. ಸುಭಾಸ್ ಚಂದ್ರ ಬೋಸ್ ಎರಡು ಬಾರಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

– ಸುಭಾಸ್ ಚಂದ್ರ ಬೋಸ್ ಭಾರತಕ್ಕೆ ಮರಳಿದ ನಂತರ ಸ್ವರಾಜ್ ಪತ್ರಿಕೆ ಪ್ರಾರಂಭಿಸಿದರು ಮತ್ತು ಬಂಗಾಳ ಪ್ರಾಂತೀಯ ಕಾಂಗ್ರೆಸ್ ಸಮಿತಿಯ ಪ್ರಚಾರದ ಉಸ್ತುವಾರಿ ವಹಿಸಿಕೊಂಡರು.

– ಬ್ರಿಟಿಷರೊಂದಿಗೆ ವ್ಯವಹರಿಸಲು ಗಾಂಧಿಯವರ ಅಹಿಂಸಾತ್ಮಕ ಕ್ರಮಗಳನ್ನು ವಿರೋಧಿಸಿದ ಸ್ವಾತಂತ್ರ್ಯ ಹೋರಾಟಗಾರನನ್ನು 1921 ರಿಂದ 1941 ರ ನಡುವೆ 11 ವಿವಿಧ ಜೈಲುಗಳಲ್ಲಿ ಬಂಧಿಸಿಡಲಾಗಿತ್ತು ಎಂದು ಹೇಳಲಾಗುತ್ತದೆ.

– ಜಪಾನ್ ಮತ್ತು ಜರ್ಮನಿಯ ಈ ಎರಡೂ ದೇಶಗಳು ಬ್ರಿಟಿಷರ ವಿರುದ್ಧವಾಗಿರುವುದರಿಂದ, ನೇತಾಜಿ ಜಪಾನ್ ಮತ್ತು ಜರ್ಮನಿಯ ಸಹಾಯವನ್ನು ಕೋರಿದ್ದರು.

– ಜರ್ಮನಿಯಲ್ಲಿ ಆಜಾದ್ ಹಿಂದ್ ರೇಡಿಯೊ ಕೇಂದ್ರವನ್ನು ಸ್ಥಾಪಿಸುವಲ್ಲಿ ನೇತಾಜಿ ಪ್ರಮುಖ ಪಾತ್ರ ವಹಿಸಿದರು ಮತ್ತು ಪೂರ್ವ ಏಷ್ಯಾದಲ್ಲಿ ಭಾರತೀಯ ರಾಷ್ಟ್ರೀಯತಾವಾದಿ ಚಳವಳಿಯನ್ನು ಮುನ್ನಡೆಸಿದರು.

– ಭಗವದ್ಗೀತೆ ಮತ್ತು ಸಾರ್ವತ್ರಿಕತೆಯ ಬಗ್ಗೆ ಸ್ವಾಮಿ ವಿವೇಕಾನಂದರ ಬೋಧನೆಗಳು ನೇತಾಜಿಗೆ ಉತ್ತಮ ಪ್ರೇರಣೆಯಾಗಿದ್ದವು.

– ನನಗೆ ರಕ್ತ ಕೊಡು, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ. ದಿಲ್ಲಿ ಚಲೋ ಮತ್ತು ಜೈ ಹಿಂದ್ ಮುಂತಾದ ಪ್ರಸಿದ್ಧ ಘೋಷಣೆಗಳ ಮುಖಾಂತರ ನೇತಾಜಿಯವರನ್ನು ನೆನೆಯಬಹುದಾಗಿದೆ.

– ಬೋಸ್ ಹೇಗೆ ನಿಧನರಾದರು ಎಂಬುದು ಇಲ್ಲಿಯವರೆಗೆ ತಿಳಿದಿಲ್ಲ, ಆಗಸ್ಟ್ 18, 1945 ರಂದು ತೈವಾನ್‌ನ ತೈಪೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ತನ್ನ ಪ್ರಾಣವನ್ನು ಕಳೆದುಕೊಂಡರೆಂದು ಕೆಲವರು ಹೇಳುತ್ತಾರೆ.

– ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿ ಮತ್ತು ಜಪಾನ್ ಸಹಾಯದಿಂದ ಭಾರತವನ್ನು ಬ್ರಿಟಿಷ್ ಆಡಳಿತದಿಂದ ಹೊರಹಾಕಲು ಪ್ರಯತ್ನಿಸಿದ ಬೋಸ್, ತೈವಾನ್ ಬಳಿ ವಿಮಾನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ.

ಬೋಸ್ 125ನೇ ಜನ್ಮ ದಿನಾಚರಣೆ: ಪ್ರಧಾನಿ ಮೋದಿ ಬಂಗಾಳ ಭೇಟಿ, ಮಮತಾ ನಾಡಲ್ಲಿ ಗರಿಗೆದರಿದ ರಾಜಕೀಯ..

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!