AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಗುರು ಜನ್ಮದಿನದ ಪ್ರಯುಕ್ತ ಗುಜರಾತ್​ನಲ್ಲಿ ಮಣ್ಣು ಆಧಾರಿತ ರೈತರ ಕಂಪನಿ ಪ್ರಾರಂಭ

ಸದ್ಗುರುಗಳ ಜನ್ಮದಿನವಾದ ಇಂದು ಗುಜರಾತಿನ ಬನಸ್ಕಾಂತದಲ್ಲಿ ವಿಶಿಷ್ಟ ಮಣ್ಣು ಆಧಾರಿತ ರೈತರ ಉತ್ಪಾದಕ ಕಂಪನಿಯನ್ನು ಪ್ರಾರಂಭಿಸಲಾಯಿತು. ಇದು ಬನಸ್ಕಾಂತದಾದ್ಯಂತ ವಿಸ್ತರಿಸಲು ಮತ್ತು ಜಿಲ್ಲೆಯ ಎಲ್ಲಾ ರೈತರನ್ನು ಇಂದೇ ಸೂರಿನಡಿ ತರುವ ಗುರಿಯನ್ನು ಹೊಂದಿದೆ. ಈ ಕ್ಷೇತ್ರದ ಮಣ್ಣನ್ನು ಫಲವತ್ತಾಗಿಸುವ ಜತೆಗೆ ಇಲ್ಲಿನ ಜನರ ಆಹಾರ, ನೀರಿನ ಅಗತ್ಯವನ್ನೂ ಈ ಸಂಸ್ಥೆ ಪೂರೈಸಲಿದೆ.

ಸದ್ಗುರು ಜನ್ಮದಿನದ ಪ್ರಯುಕ್ತ ಗುಜರಾತ್​ನಲ್ಲಿ ಮಣ್ಣು ಆಧಾರಿತ ರೈತರ ಕಂಪನಿ ಪ್ರಾರಂಭ
ಗುಜರಾತ್​ನಲ್ಲಿ ಮಣ್ಣು ಆಧಾರಿತ ರೈತರ ಕಂಪನಿ ಪ್ರಾರಂಭ
ಸುಷ್ಮಾ ಚಕ್ರೆ
|

Updated on: Sep 03, 2024 | 10:38 PM

Share

ಅಹಮದಾಬಾದ್: ಇಶಾ ಫೌಂಡೇಶನ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರ ಜನ್ಮದಿನದಂದು ಗುಜರಾತ್‌ನ ಬನಸ್ಕಾಂತದಲ್ಲಿ ಒಂದು ವಿಶಿಷ್ಟ ಉಪಕ್ರಮವನ್ನು ತೆಗೆದುಕೊಳ್ಳಲಾಗಿದೆ. ಸದ್ಗುರು ಆರಂಭಿಸಿದ ಮಣ್ಣು ಉಳಿಸುವ ಜಾಗತಿಕ ಆಂದೋಲನದಿಂದ ಪ್ರೇರಿತರಾದ ರೈತರು ಇಲ್ಲಿ ಒಂದೆಡೆ ಸೇರಿದ್ದರು. ಅವರು ಇಂದು ಬನಾಸ್ ಸೇವ್ ಸೋಲ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ (BSSFPC) ಸ್ಥಾಪಿಸಿದ್ದಾರೆ. ಇದು ಮಿಟ್ಟಿ ಬಚಾವೋ ಆಂದೋಲನದ ಸಹಭಾಗಿತ್ವದಲ್ಲಿ ಭಾರತದ ಮೊದಲ ಮಣ್ಣು ಕೇಂದ್ರಿತ ರೈತ ಉತ್ಪಾದಕ ಕಂಪನಿಯಾಗಿದೆ.

ಈ ಸಂದರ್ಭದಲ್ಲಿ ಗುಜರಾತ್ ವಿಧಾನಸಭೆಯ ಸ್ಪೀಕರ್ ಮತ್ತು ಬನಾಸ್ ಡೈರಿಯ ಅಧ್ಯಕ್ಷ ಶಂಕರಭಾಯಿ ಚೌಧರಿ ಅವರು ಥರಾಡ್‌ನಲ್ಲಿ ಬನಾಸ್ ಮಣ್ಣು ಪರೀಕ್ಷಾ ಪ್ರಯೋಗಾಲಯ (ಬಿಎಸ್‌ಟಿಎಲ್), ಖಿಮಾನದಲ್ಲಿ ಬನಾಸ್ ಜೈವಿಕ ರಸಗೊಬ್ಬರ ಸಂಶೋಧನೆ, ಅಭಿವೃದ್ಧಿ ಪ್ರಯೋಗಾಲಯ (ಬಿಬಿಆರ್‌ಡಿಎಲ್) ಮತ್ತು ರೈತರ ತರಬೇತಿಯೊಂದಿಗೆ ಎಫ್‌ಪಿಸಿಯನ್ನು ಉದ್ಘಾಟಿಸಿದರು.

ಇದನ್ನೂ ಓದಿ: Eternal Echoes: ಹೊಸ ಪ್ರಯೋಗಕ್ಕಿಳಿದ ಸದ್ಗುರು; ಎಟರ್ನಲ್ ಎಕೋಸ್ ಆಲ್ಬಂ ಬಿಡುಗಡೆ

ಈ ಕುರಿತಾದ ವಿಡಿಯೋ ಸಂದೇಶದಲ್ಲಿ ಅವರು ಈ ಉಪಕ್ರಮಕ್ಕಾಗಿ ಬನಸ್ಕಾಂತದ ರೈತರಿಗೆ ಅಭಿನಂದನೆಗಳು ಎಂದು ಹೇಳಿದ್ದು, ರೈತರ ಕಂಪನಿಯ ಯಶಸ್ಸಿಗೆ ಹಾರೈಸಿದರು. ಇದರಿಂದ ಜನರಿಗೆ ಪೌಷ್ಟಿಕಾಂಶ ದೊರೆಯುವುದಲ್ಲದೆ ಇಲ್ಲಿನ ಮಣ್ಣು ಕೂಡ ಸಮೃದ್ಧವಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸದ್ಗುರು ಜಗ್ಗಿ ವಾಸುದೇವ್ 2 ವರ್ಷಗಳ ಹಿಂದೆ ಜಾಗತಿಕ ಮಣ್ಣು ಉಳಿಸುವ ಆಂದೋಲನವನ್ನು ಪ್ರಾರಂಭಿಸಿದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿ ಮತ್ತು ಗುಜರಾತ್ ಅಸೆಂಬ್ಲಿಯ ಸ್ಪೀಕರ್ ಮತ್ತು ಬನಾಸ್ ಡೈರಿಯ ಅಧ್ಯಕ್ಷ ಶಂಕರಭಾಯಿ ಚೌಧರಿ ಮಾತನಾಡಿ, ಬನಾಸ್ ಡೈರಿಗೆ ಇಂದು ನಿರ್ಣಾಯಕ ಕ್ಷಣವಾಗಿದೆ. ಬನಾಸ್ ಸೇವ್ ಸೋಲ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಮತ್ತು ಥರಾಡ್ ಮತ್ತು ಖಿಮಾನದಲ್ಲಿರುವ ನಮ್ಮ ಹೊಸ ಸೌಲಭ್ಯಗಳು ಸುಸ್ಥಿರ ಭವಿಷ್ಯಕ್ಕೆ ಅಡಿಪಾಯ ಹಾಕುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಬ್ರೂನೆಯ ಪ್ರಸಿದ್ಧ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ

ಪ್ರಯೋಗಾಲಯದ ಮುಖ್ಯ ತಾಂತ್ರಿಕ ಅಧಿಕಾರಿ ಪ್ರವೀಣ್ ಶ್ರೀಧರ್ ಮಾತನಾಡಿ, ಸದ್ಗುರು ಅವರ ‘ಮಣ್ಣು ಉಳಿಸಿ ಆಂದೋಲನ’ ಅತ್ಯಂತ ಮಹತ್ವದ್ದಾಗಿದೆ. ಬನಸ್ಕಾಂತದ ಭೂಮಿ ಅರೆ ಒಣಭೂಮಿಯಾಗಿದ್ದು, ಇದರಿಂದ ಮಣ್ಣಿನ ಫಲವತ್ತತೆ ಹಾಗೂ ರೈತರ ಜೀವನೋಪಾಯಕ್ಕೆ ಧಕ್ಕೆಯಾಗಿದೆ ಎಂದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!