AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿಯಂದು ಪೀಯುಷ್ ಗೋಯಲ್ ಮನೆಯಲ್ಲಿ ಗಣಪತಿಗೆ ಆರತಿ ಬೆಳಗಿದ ಮೋದಿ

ಗಣೇಶ ಪೂಜೆಯ ಚಿತ್ರಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ, “ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ನನ್ನ ಸಹೋದ್ಯೋಗಿ ಪೀಯುಷ್ ಗೋಯಲ್ ಜಿ ಅವರ ನಿವಾಸದಲ್ಲಿ ಕಾರ್ಯಕ್ರಮಕ್ಕೆ ಹೋಗಿದ್ದೆ...

ಗಣೇಶ ಚತುರ್ಥಿಯಂದು ಪೀಯುಷ್ ಗೋಯಲ್ ಮನೆಯಲ್ಲಿ ಗಣಪತಿಗೆ ಆರತಿ ಬೆಳಗಿದ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 01, 2022 | 4:05 PM

ಗಣೇಶ ಚತುರ್ಥಿಯ ಸಂದರ್ಭದಲ್ಲಿ (Ganesh Chaturthi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬುಧವಾರ ಕೇಂದ್ರ ಸಚಿವ ಪೀಯುಷ್ ಗೋಯಲ್ (Piyush Goyal) ಅವರ ನಿವಾಸದಲ್ಲಿ ಗಣೇಶ ಆರತಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಕಿತ್ತಳೆ ಬಣ್ಣದ ಹಳದಿ ಕುರ್ತಾ ಮತ್ತು ಬಿಳಿ ಧೋತಿಯನ್ನು ಧರಿಸಿದ್ದರು. ಶುಭ ಸಮಾರಂಭದಲ್ಲಿ ಪ್ರಕಾಶಮಾನವಾದ ಕಿತ್ತಳೆ ‘ಅಂಗವಸ್ತ್ರ’ವನ್ನೂ ಸಹ ಧರಿಸಿದ್ದರು. ಆರತಿಯ ಮೊದಲು, ಅವರು ಗೋಯಲ್ ಅವರ ಮನೆಯಲ್ಲಿ ನೆರೆದಿದ್ದ ಜನರ ಗುಂಪಿಗೆ ಮೋದಿ ಶುಭಾಶಯಗಳನ್ನು ವ್ಯಕ್ತಪಡಿಸಿದರು ಎಂದು  ಎಎನ್ಐ ವರದಿ ಮಾಡಿದೆ. ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ಮತ್ತು ಉದ್ಯಮಿ ಸುನಿಲ್ ಭಾರತಿ ಮಿತ್ತಲ್ ಕೂಡ ಅಲ್ಲಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಗಣೇಶ ಪೂಜೆಯ ಚಿತ್ರಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ, “ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ನನ್ನ ಸಹೋದ್ಯೋಗಿ ಪೀಯುಷ್ ಗೋಯಲ್ ಜಿ ಅವರ ನಿವಾಸದಲ್ಲಿ ಕಾರ್ಯಕ್ರಮಕ್ಕೆ ಹೋಗಿದ್ದೆ. ಭಗವಾನ್ ಶ್ರೀ ಗಣೇಶನ ಆಶೀರ್ವಾದ ಸದಾ ನಮ್ಮ ಮೇಲೆ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ದಯೆ ಮತ್ತು ಸಹೋದರತ್ವದ ಮನೋಭಾವ ಸದಾ ಮೇಲುಗೈ ಸಾಧಿಸಲಿ ಎಂದು ಹಾರೈಸಿದರು.  ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡ ಅವರು “ಗಣೇಶ ಚತುರ್ಥಿಯ ಶುಭಾಶಯಗಳು. ಶ್ರೀ ಗಣೇಶನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ” ಎಂದು ಬರೆದಿದ್ದಾರೆ.

ಭಾರತದಲ್ಲಿ ವಿಶೇಷವಾಗಿ ಮಹಾರಾಷ್ಟ್ರದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಪ್ರತಿ ವರ್ಷ ಸಂಭ್ರಮದಿಂದ ಆಚರಿಸಲಾಗುತ್ತದೆ. ಸಾವಿರಾರು ಭಕ್ತರು ದೇವಾಲಯಗಳು ಮತ್ತು ‘ಗಣೇಶೋತ್ಸವ ಪೆಂಡಾಲ್ ಗಳಲ್ಲಿ’ ಪ್ರಾರ್ಥನೆ ಸಲ್ಲಿಸಲು ಸೇರುತ್ತಾರೆ. ಹತ್ತು ದಿನಗಳ ಆಚರಣೆಯು ಚತುರ್ಥಿ ತಿಥಿಯಿಂದ ಪ್ರಾರಂಭವಾಗಿ ಅನಂತ ಚತುರ್ದಶಿಯಂದು ಕೊನೆಗೊಳ್ಳುತ್ತದೆ. ಕೊವಿಡ್ -19 ಸಾಂಕ್ರಾಮಿಕ ರೋಗವು ಕಡಿಮೆ ಆದ ನಂತರ  2022 ರಲ್ಲಿ ಗಣೇಶ ಚತುರ್ಥಿ ಹಬ್ಬಗಳಿಗೆ ಸಾಂಪ್ರದಾಯಿಕ ಉತ್ಸಾಹವನ್ನು ಮರಳಿ ತಂದಿತು.ಇದು ಕಳೆದ ವರ್ಷ ವಿಧಿಸಲಾದ ಹೆಚ್ಚಿನ ನಿರ್ಬಂಧಗಳನ್ನು ಈ ಬಾರಿ ತೆಗೆದು ಹಾಕಲಾಗಿದೆ.

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ಕಾರಿನ ಗ್ಲಾಸ್ ಒಡೆದು 11 ಲಕ್ಷ ರೂ. ಕಳ್ಳತನ: ಸಿಸಿಟಿವಿ ವಿಡಿಯೋ ನೋಡಿ
ಕಾರಿನ ಗ್ಲಾಸ್ ಒಡೆದು 11 ಲಕ್ಷ ರೂ. ಕಳ್ಳತನ: ಸಿಸಿಟಿವಿ ವಿಡಿಯೋ ನೋಡಿ