AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಯುವ ದಿನದ ಅಂಗವಾಗಿ ನಾಳೆ ವಿಕಸಿತ್ ಭಾರತ್ ಯುವ ನಾಯಕರ ಸಂವಾದದಲ್ಲಿ ಪ್ರಧಾನಿ ಮೋದಿ ಭಾಗಿ

30 ಲಕ್ಷಕ್ಕೂ ಹೆಚ್ಚು ಯುವಕ-ಯುವತಿಯರು ಭಾಗವಹಿಸುವುದರಿಂದ ಅರ್ಹತೆ ಆಧಾರಿತ, ಬಹು-ಹಂತದ ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆಯಾದ 3000 ಯುವ ನಾಯಕರೊಂದಿಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಯುವಜನರು ತಮ್ಮ ಆಲೋಚನೆಗಳು, ಅನುಭವಗಳು ಮತ್ತು ಆಕಾಂಕ್ಷೆಗಳನ್ನು ಊಟದ ಸಮಯದಲ್ಲಿ ಪ್ರಧಾನಿಗೆ ನೇರವಾಗಿ ಹಂಚಿಕೊಳ್ಳಲು ಅವಕಾಶವನ್ನು ಪಡೆಯಲಿದ್ದಾರೆ.

ರಾಷ್ಟ್ರೀಯ ಯುವ ದಿನದ ಅಂಗವಾಗಿ ನಾಳೆ ವಿಕಸಿತ್ ಭಾರತ್ ಯುವ ನಾಯಕರ ಸಂವಾದದಲ್ಲಿ ಪ್ರಧಾನಿ ಮೋದಿ ಭಾಗಿ
Pm Narendra Modi
ಸುಷ್ಮಾ ಚಕ್ರೆ
|

Updated on: Jan 11, 2025 | 4:13 PM

Share

ನವದೆಹಲಿ: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜನವರಿ 12ರಂದು ಆಚರಿಸಲಾಗುವ ರಾಷ್ಟ್ರೀಯ ಯುವ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನಾಳೆ (ಭಾನುವಾರ) ಬೆಳಿಗ್ಗೆ 10 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುವ ವಿಕಸಿತ್ ಭಾರತ್ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಲಿದ್ದಾರೆ. ಅವರು ಭಾರತದಾದ್ಯಂತದ 3,000 ಕ್ರಿಯಾಶೀಲ ಯುವ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ. ಇದಾದ ಬಳಿಕ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಕಸಿತ್ ಭಾರತ್ ಯುವ ನಾಯಕರ ಸಂವಾದವು ರಾಷ್ಟ್ರೀಯ ಯುವ ಉತ್ಸವವನ್ನು ಸಾಂಪ್ರದಾಯಿಕ ರೀತಿಯಲ್ಲಿ ನಡೆಸುವ 25 ವರ್ಷಗಳ ಹಳೆಯ ಸಂಪ್ರದಾಯವನ್ನು ಮುರಿದು ಹೊಸ ರೀತಿಯಲ್ಲಿ ಆಚರಿಸುವ ಗುರಿಯನ್ನು ಹೊಂದಿದೆ. ಈ ಬಾರಿಯ ರಾಷ್ಟ್ರೀಯ ಯುವ ದಿನದಂದು ಪ್ರಧಾನ ಮಂತ್ರಿ ಮೋದಿ ದೇಶದ ಭವಿಷ್ಯದ ನಾಯಕರನ್ನು ಪ್ರೇರೇಪಿಸಲು ಮತ್ತು ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾದ ಬಹು ಚಟುವಟಿಕೆಗಳಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಭಾರತದ ಅಭಿವೃದ್ಧಿಗೆ ಪ್ರಮುಖವಾದ 10 ವಿಷಯಾಧಾರಿತ ಕ್ಷೇತ್ರಗಳನ್ನು ಪ್ರತಿನಿಧಿಸುವ ಯುವ ನಾಯಕರು 10 ಪವರ್‌ಪಾಯಿಂಟ್ ಪ್ರಸ್ತುತಿಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಮುಂದೆ ಮಂಡಿಸಲಿದ್ದಾರೆ.

ಪ್ರಧಾನಿ ಮೋದಿ 10 ವಿಷಯಗಳ ಕುರಿತು ಭಾಗವಹಿಸುವವರು ಬರೆದ ಅತ್ಯುತ್ತಮ ಪ್ರಬಂಧಗಳ ಸಂಕಲನವನ್ನು ಸಹ ಬಿಡುಗಡೆ ಮಾಡಲಿದ್ದಾರೆ. ಈ ವಿಷಯಗಳು ತಂತ್ರಜ್ಞಾನ, ಸುಸ್ಥಿರತೆ, ಮಹಿಳಾ ಸಬಲೀಕರಣ, ಉತ್ಪಾದನೆ ಮತ್ತು ಕೃಷಿಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಒಳಗೊಂಡಿವೆ.

ಇದನ್ನೂ ಓದಿ: ಶತಮಾನಗಳ ತ್ಯಾಗದ ಪ್ರತಿಫಲ; ರಾಮ ಮಂದಿರ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ ಕುರಿತು ಪ್ರಧಾನಿ ಮೋದಿ

ಇದೇ ವೇಳೆ ಪ್ರಧಾನಿ ಮೋದಿ ಯುವ ನಾಯಕರೊಂದಿಗೆ ಊಟ ಮಾಡಲಿದ್ದಾರೆ. ಊಟದ ವೇಳೆ ನಡೆಯುವ ವೈಯಕ್ತಿಕ ಸಂವಾದವು ಆಡಳಿತ ಮತ್ತು ಯುವ ಆಕಾಂಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ, ಭಾಗವಹಿಸುವವರಲ್ಲಿ ಆಳವಾದ ಮಾಲೀಕತ್ವ ಮತ್ತು ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುತ್ತದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್
‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್
ಅರ್ಷದೀಪ್ ಮೇಲೆ ಉಗ್ರರೂಪ ತಾಳಿದ ಗಂಭೀರ್; ವಿಡಿಯೋ
ಅರ್ಷದೀಪ್ ಮೇಲೆ ಉಗ್ರರೂಪ ತಾಳಿದ ಗಂಭೀರ್; ವಿಡಿಯೋ
ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS:ಅಲೋಕ್ ಕುಮಾರ್ ಗತ್ತು ನೋಡಿ
ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS:ಅಲೋಕ್ ಕುಮಾರ್ ಗತ್ತು ನೋಡಿ
Bigg Boss: ಬಿಗ್​​ಬಾಸ್ ಟಾಸ್ಕ್: ಕಾವ್ಯಾಗೆ ಇದೆಂಥ ಶಿಕ್ಷೆ?
Bigg Boss: ಬಿಗ್​​ಬಾಸ್ ಟಾಸ್ಕ್: ಕಾವ್ಯಾಗೆ ಇದೆಂಥ ಶಿಕ್ಷೆ?
ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ
ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ
ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್
ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್
ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ
ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ
ಗಿಲ್ಲಿ ಬಗ್ಗೆ ಮನೆಮಂದಿಗೆ ಇರುವ ಅಭಿಪ್ರಾಯ ಬದಲಿಸಲು ಯತ್ನಿಸಿದ ರಜತ್
ಗಿಲ್ಲಿ ಬಗ್ಗೆ ಮನೆಮಂದಿಗೆ ಇರುವ ಅಭಿಪ್ರಾಯ ಬದಲಿಸಲು ಯತ್ನಿಸಿದ ರಜತ್