AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರಿಂದ ನಾಲ್ವರ ಹತ್ಯೆ ಬೆನ್ನಲ್ಲೇ ರಜೌರಿಯಲ್ಲಿ ಬಾಂಬ್ ಸ್ಫೋಟ; ಒಂದು ಮಗು ಸಾವು, ಐವರಿಗೆ ಗಾಯ

ಇಂದು ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ರಜೌರಿಯಲ್ಲಿ ನಡೆದ ದಾಳಿಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಉಗ್ರರಿಂದ ನಾಲ್ವರ ಹತ್ಯೆ ಬೆನ್ನಲ್ಲೇ ರಜೌರಿಯಲ್ಲಿ ಬಾಂಬ್ ಸ್ಫೋಟ; ಒಂದು ಮಗು ಸಾವು, ಐವರಿಗೆ ಗಾಯ
ರಜೌರಿಯಲ್ಲಿ ಬಾಂಬ್ ಸ್ಫೋಟ ಉಂಟಾದ ಸ್ಥಳImage Credit source: Twitter
TV9 Web
| Edited By: |

Updated on: Jan 02, 2023 | 1:03 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ (Rajouri) ಇಂದು (ಸೋಮವಾರ) ನಡೆದ ಬಾಂಬ್ ಸ್ಫೋಟದಲ್ಲಿ (IED Blast) ಮಗುವೊಂದು ಸಾವನ್ನಪ್ಪಿದೆ. ಈ ಸ್ಫೋಟದಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ರಜೌರಿಯಲ್ಲಿ ಮನೆಗಳಿಗೆ ನುಗ್ಗಿದ ಉಗ್ರರು ನಾಲ್ವರು ನಾಗರಿಕರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳ ಒಳಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ನಾಲ್ವರು ನಾಗರಿಕರು ಸಾವನ್ನಪ್ಪಿದ 1 ದಿನದ ಬಳಿಕ ಈ ಘಟನೆ ನಡೆದಿದೆ. ಅದೇ ಸ್ಥಳದಲ್ಲಿ ಇಂದು ಬಾಂಬ್ ದಾಳಿ ನಡೆದಿದೆ. ಉಗ್ರರ ದಾಳಿಗೆ ನಾಗರಿಕರೊಬ್ಬರು ಬಲಿಯಾದ ಮನೆಯ ಬಳಿಯಲ್ಲೇ ಈ ಬಾಂಬ್ ದಾಳಿ ನಡೆದಿದೆ.

ಇದನ್ನೂ ಓದಿ: Jammu Encounter: ಜಮ್ಮು ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಎನ್​ಕೌಂಟರ್; ಮೂವರು ಉಗ್ರರ ಹತ್ಯೆ

ಇಂದು ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ರಜೌರಿಯಲ್ಲಿ ನಡೆದ ದಾಳಿಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಜೌರಿಯಲ್ಲಿ ಉಗ್ರರ ದಾಳಿಯನ್ನು ವಿರೋಧಿಸಿ ಸಂಪೂರ್ಣ ಬಂದ್ ಮಾಡಲಾಗಿದೆ.

ಶಂಕಿತ ಭಯೋತ್ಪಾದಕರ ಹುಡುಕಾಟದಲ್ಲಿ ಸೇನೆ, ಪೊಲೀಸ್, ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: Rajouri Terror Attack: ರಜೌರಿಯಲ್ಲಿ ಉಗ್ರರ ದಾಳಿ; ಸಾವಿನ ಸಂಖ್ಯೆ 4ಕ್ಕೆ ಏರಿಕೆ, 9 ಮಂದಿಗೆ ಗಾಯ

ಭಾನುವಾರ ಉಗ್ರರು ಕಾರಿನಲ್ಲಿ ಬಂದು ಮನಬಂದಂತೆ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತರನ್ನು ದೀಪಕ್ ಕುಮಾರ್, ಸತೀಶ್ ಕುಮಾರ್, ಪ್ರೀತಮ್ ಲಾಲ್ ಮತ್ತು ಶಿವಪಾಲ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಪವನ್ ಕುಮಾರ್, ರೋಹಿತ್ ಪಂಡಿತ್, ಸರೋಜ್ ಬಾಲಾ, ಸುಶೀಲ್ ಕುಮಾರ್, ಶುಭ್ ಶರ್ಮಾ ಮತ್ತು ಊರ್ವಶಿ ಶರ್ಮಾ ಎಂದು ಗುರುತಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!