AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶದ ಕಾಂಗ್ರೆಸ್​ ಶಾಸಕಿ, ಉತ್ತರ ಪ್ರದೇಶದ ಇಬ್ಬರು ಬಿಜೆಪಿ ಶಾಸಕರು ಕೊರೊನಾ ಸೋಂಕಿಗೆ ಬಲಿ

ಮಧ್ಯಪ್ರದೇಶ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕಿ ಕಲಾವತಿ ಭೂರಿಯಾ ಮತ್ತು ಉತ್ತರ ಪ್ರದೇಶ ರಾಜ್ಯದಲ್ಲಿ ಸುರೇಶ್ ಕುಮಾರ್ ಶ್ರೀವತ್ಸ ಮತ್ತು ರಮೇಶ್ ಚಂದ್ರ ದಿವಾಕರ್ ಎಂಬ ಇಬ್ಬರು ಬಿಜೆಪಿ ಶಾಸಕರು ಕೊರೊನಾದಿಂದ ಸಾವಿಗೀಡಾಗಿದ್ದಾರೆ.

ಮಧ್ಯ ಪ್ರದೇಶದ ಕಾಂಗ್ರೆಸ್​ ಶಾಸಕಿ, ಉತ್ತರ ಪ್ರದೇಶದ ಇಬ್ಬರು ಬಿಜೆಪಿ ಶಾಸಕರು ಕೊರೊನಾ ಸೋಂಕಿಗೆ ಬಲಿ
ಪ್ರಾತಿನಿಧಿಕ ಚಿತ್ರ
Skanda
| Updated By: ಸಾಧು ಶ್ರೀನಾಥ್​|

Updated on: Apr 24, 2021 | 1:12 PM

Share

ಭೋಪಾಲ್: ಭಾರತದೆಲ್ಲೆಡೆ ಕೊರೊನಾ ಸೋಂಕಿನ ಎರಡನೇ ಅಲೆ ವೇಗವಾಗಿ ವ್ಯಾಪಿಸುತ್ತಿದ್ದು, ಹಲವು ರಾಜ್ಯಗಳಲ್ಲಿ ಪರಿಸ್ಥಿತಿ ಕೈ ಮೀರುವ ಹಂತಕ್ಕೆ ತಲುಪುತ್ತಿದೆ. ಜನಸಾಮಾನ್ಯರಿಂದ ಗಣ್ಯಾತಿಗಣ್ಯರ ತನಕ ಎಲ್ಲರೂ ಕೊರೊನಾ ಸೋಂಕಿಗೆ ತತ್ತರಿಸಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕಿಯೊಬ್ಬರು ಕೊರೊನಾ ಸೊಂಕಿನಿಂದ ಮೃತರಾಗಿದ್ದು, ಉತ್ತರ ಪ್ರದೇಶದಲ್ಲಿ ಇಬ್ಬರು ಬಿಜೆಪಿ ಶಾಸಕರು ಕೊರೊನಾದಿಂದ ಸಾವಿಗೀಡಾಗಿದ್ದಾರೆ.

ಮಧ್ಯಪ್ರದೇಶದ ಅಲಿರಾಜ್​ಪುರ್ ಜಿಲ್ಲೆಯ ಜೋಬತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಲಾವತಿ ಭೂರಿಯಾ ಎಂಬ ಕಾಂಗ್ರೆಸ್ ಶಾಸಕಿ 12 ದಿನಗಳ ಹಿಂದೆ ಶಲ್ಬೀ ಆಸ್ಪತ್ರೆಗೆ ದಾಖಲಾಗಿದ್ದರು. 49 ವರ್ಷ ವಯಸ್ಸಿನ ಇವರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಇಂದು (ಏಪ್ರಿಲ್ 24) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಸ್ಪತ್ರೆಯ ಮುಖ್ಯಸ್ಥ ವಿವೇಕ್ ಜೋಶಿ ಹೇಳಿದಂತೆ ಆಕೆಯ ಶ್ವಾಸಕೋಶ ಶೇ.70ರಷ್ಟು ಹಾನಿಗೊಂಡಿದ್ದು, ವೆಂಟಿಲೇಟರ್ ಆಧಾರದ ಮೇಲೆ ನೋಡಿಕೊಳ್ಳಲಾಗುತ್ತಿತ್ತು. ಆದರೆ, ತೀವ್ರವಾಗಿ ಆರೋಗ್ಯ ಹದಗೆಟ್ಟ ಕಾರಣ ಚಿಕಿತ್ಸೆಗೆ ಸ್ಪಂದಿಸಿದೆ ಇಂದು ಕೊನೆಯುಸಿರೆಳೆದಿದ್ದಾರೆ.

ಉತ್ತರ ಪ್ರದೇಶ ರಾಜ್ಯದ ಇಬ್ಬರು ಬಿಜೆಪಿ ಶಾಸಕರು ನಿಧನ ಲಕ್ನೋ: ಉತ್ತರ ಪ್ರದೇಶ ರಾಜ್ಯದಲ್ಲಿ ಸುರೇಶ್ ಕುಮಾರ್ ಶ್ರೀವತ್ಸ ಮತ್ತು ರಮೇಶ್ ಚಂದ್ರ ದಿವಾಕರ್ ಎಂಬ ಇಬ್ಬರು ಬಿಜೆಪಿ ಶಾಸಕರು ಶುಕ್ರವಾರ (ಏಪ್ರಿಲ್ 23) ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. 76 ವರ್ಷ ವಯಸ್ಸಿನ ಸುರೇಶ್ ಕುಮಾರ್ ಶ್ರೀವತ್ಸ ಲಕ್ನೋ ಆಸ್ಪತ್ರೆಗೆ ದಾಖಲಾಗಿದ್ದು, ಕಳೆದ ಕೆಲ ದಿನಗಳಿಂದ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಶುಕ್ರವಾರದಂದು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಇನ್ನೊಂದೆಡೆ 56 ವರ್ಷ ವಯಸ್ಸಿನ ರಮೇಶ್ ಚಂದ್ರ ದಿವಾಕರ್ ಸಹ ಕೊರೊನಾದಿಂದ ತೀವ್ರ ಸಮಸ್ಯೆಗೆ ಒಳಗಾಗಿ ಮೃತರಾಗಿದ್ದು, ಅವರ ಪತ್ನಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಮ್ಮ, ಮಗನ ದೂರ ಮಾಡಿದ ಕೊರೊನಾ; ಮಗನಿಗೆ ತಾಯಿಯ ಸಾವಿನ ಸುದ್ದಿ ಹೇಳದೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು 

ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?