AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶದ ಕಾಂಗ್ರೆಸ್​ ಶಾಸಕಿ, ಉತ್ತರ ಪ್ರದೇಶದ ಇಬ್ಬರು ಬಿಜೆಪಿ ಶಾಸಕರು ಕೊರೊನಾ ಸೋಂಕಿಗೆ ಬಲಿ

ಮಧ್ಯಪ್ರದೇಶ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕಿ ಕಲಾವತಿ ಭೂರಿಯಾ ಮತ್ತು ಉತ್ತರ ಪ್ರದೇಶ ರಾಜ್ಯದಲ್ಲಿ ಸುರೇಶ್ ಕುಮಾರ್ ಶ್ರೀವತ್ಸ ಮತ್ತು ರಮೇಶ್ ಚಂದ್ರ ದಿವಾಕರ್ ಎಂಬ ಇಬ್ಬರು ಬಿಜೆಪಿ ಶಾಸಕರು ಕೊರೊನಾದಿಂದ ಸಾವಿಗೀಡಾಗಿದ್ದಾರೆ.

ಮಧ್ಯ ಪ್ರದೇಶದ ಕಾಂಗ್ರೆಸ್​ ಶಾಸಕಿ, ಉತ್ತರ ಪ್ರದೇಶದ ಇಬ್ಬರು ಬಿಜೆಪಿ ಶಾಸಕರು ಕೊರೊನಾ ಸೋಂಕಿಗೆ ಬಲಿ
ಪ್ರಾತಿನಿಧಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Apr 24, 2021 | 1:12 PM

ಭೋಪಾಲ್: ಭಾರತದೆಲ್ಲೆಡೆ ಕೊರೊನಾ ಸೋಂಕಿನ ಎರಡನೇ ಅಲೆ ವೇಗವಾಗಿ ವ್ಯಾಪಿಸುತ್ತಿದ್ದು, ಹಲವು ರಾಜ್ಯಗಳಲ್ಲಿ ಪರಿಸ್ಥಿತಿ ಕೈ ಮೀರುವ ಹಂತಕ್ಕೆ ತಲುಪುತ್ತಿದೆ. ಜನಸಾಮಾನ್ಯರಿಂದ ಗಣ್ಯಾತಿಗಣ್ಯರ ತನಕ ಎಲ್ಲರೂ ಕೊರೊನಾ ಸೋಂಕಿಗೆ ತತ್ತರಿಸಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕಿಯೊಬ್ಬರು ಕೊರೊನಾ ಸೊಂಕಿನಿಂದ ಮೃತರಾಗಿದ್ದು, ಉತ್ತರ ಪ್ರದೇಶದಲ್ಲಿ ಇಬ್ಬರು ಬಿಜೆಪಿ ಶಾಸಕರು ಕೊರೊನಾದಿಂದ ಸಾವಿಗೀಡಾಗಿದ್ದಾರೆ.

ಮಧ್ಯಪ್ರದೇಶದ ಅಲಿರಾಜ್​ಪುರ್ ಜಿಲ್ಲೆಯ ಜೋಬತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಲಾವತಿ ಭೂರಿಯಾ ಎಂಬ ಕಾಂಗ್ರೆಸ್ ಶಾಸಕಿ 12 ದಿನಗಳ ಹಿಂದೆ ಶಲ್ಬೀ ಆಸ್ಪತ್ರೆಗೆ ದಾಖಲಾಗಿದ್ದರು. 49 ವರ್ಷ ವಯಸ್ಸಿನ ಇವರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಇಂದು (ಏಪ್ರಿಲ್ 24) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಸ್ಪತ್ರೆಯ ಮುಖ್ಯಸ್ಥ ವಿವೇಕ್ ಜೋಶಿ ಹೇಳಿದಂತೆ ಆಕೆಯ ಶ್ವಾಸಕೋಶ ಶೇ.70ರಷ್ಟು ಹಾನಿಗೊಂಡಿದ್ದು, ವೆಂಟಿಲೇಟರ್ ಆಧಾರದ ಮೇಲೆ ನೋಡಿಕೊಳ್ಳಲಾಗುತ್ತಿತ್ತು. ಆದರೆ, ತೀವ್ರವಾಗಿ ಆರೋಗ್ಯ ಹದಗೆಟ್ಟ ಕಾರಣ ಚಿಕಿತ್ಸೆಗೆ ಸ್ಪಂದಿಸಿದೆ ಇಂದು ಕೊನೆಯುಸಿರೆಳೆದಿದ್ದಾರೆ.

ಉತ್ತರ ಪ್ರದೇಶ ರಾಜ್ಯದ ಇಬ್ಬರು ಬಿಜೆಪಿ ಶಾಸಕರು ನಿಧನ ಲಕ್ನೋ: ಉತ್ತರ ಪ್ರದೇಶ ರಾಜ್ಯದಲ್ಲಿ ಸುರೇಶ್ ಕುಮಾರ್ ಶ್ರೀವತ್ಸ ಮತ್ತು ರಮೇಶ್ ಚಂದ್ರ ದಿವಾಕರ್ ಎಂಬ ಇಬ್ಬರು ಬಿಜೆಪಿ ಶಾಸಕರು ಶುಕ್ರವಾರ (ಏಪ್ರಿಲ್ 23) ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. 76 ವರ್ಷ ವಯಸ್ಸಿನ ಸುರೇಶ್ ಕುಮಾರ್ ಶ್ರೀವತ್ಸ ಲಕ್ನೋ ಆಸ್ಪತ್ರೆಗೆ ದಾಖಲಾಗಿದ್ದು, ಕಳೆದ ಕೆಲ ದಿನಗಳಿಂದ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಶುಕ್ರವಾರದಂದು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಇನ್ನೊಂದೆಡೆ 56 ವರ್ಷ ವಯಸ್ಸಿನ ರಮೇಶ್ ಚಂದ್ರ ದಿವಾಕರ್ ಸಹ ಕೊರೊನಾದಿಂದ ತೀವ್ರ ಸಮಸ್ಯೆಗೆ ಒಳಗಾಗಿ ಮೃತರಾಗಿದ್ದು, ಅವರ ಪತ್ನಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಮ್ಮ, ಮಗನ ದೂರ ಮಾಡಿದ ಕೊರೊನಾ; ಮಗನಿಗೆ ತಾಯಿಯ ಸಾವಿನ ಸುದ್ದಿ ಹೇಳದೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು 

ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ