AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲ ಒಂದು ದಿನ ಹಿಜಾಬಿಯೇ ಭಾರತದ ಪ್ರಧಾನ ಮಂತ್ರಿಯಾಗುತ್ತಾಳೆ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ

ಅದಕ್ಕೂ ಮೊದಲು ಟ್ವೀಟ್ ಮಾಡಿದ್ದ ಅಸಾದುದ್ದೀನ್​ ಓವೈಸಿ, ನಾನು ಮುಸ್ಕಾನ್ ಖಾನ್​ ಮತ್ತುಆಕೆಯ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಆಕೆಯ ಶಿಕ್ಷಣದ ಬಗೆಗಿನ ಬದ್ಧತೆ ಮತ್ತು ಧರ್ಮ ಹಾಗೂ ಆಯ್ಕೆಯ ಸ್ವಾತಂತ್ರ್ಯವನ್ನು ಬಳಸಿಕೊಳ್ಳುತ್ತಿರುವ ರೀತಿಗೆ ಖುಷಿಯಾಗಿದೆ ಎಂದು ಹೇಳಿದ್ದರು.

ಒಂದಲ್ಲ ಒಂದು ದಿನ ಹಿಜಾಬಿಯೇ ಭಾರತದ ಪ್ರಧಾನ ಮಂತ್ರಿಯಾಗುತ್ತಾಳೆ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ
ಅಸಾದುದ್ದೀನ್​ ಓವೈಸಿ
TV9 Web
| Edited By: |

Updated on:Feb 13, 2022 | 11:41 AM

Share

ದೆಹಲಿ: ಕರ್ನಾಟಕದಲ್ಲಿ ಎದ್ದಿರುವ ಹಿಜಾಬ್​ ಇದೀಗ ರಾಷ್ಟ್ರವ್ಯಾಪಿಯಾಗಿದೆ. ಇತ್ತೀಚೆಗೆ ಪಾಕಿಸ್ತಾನ ಕೂಡ ಈ ವಿವಾದದಲ್ಲಿ ಮೂಗು ತೂರಿಸಿತ್ತು. ಅದಕ್ಕೆ ಆಲ್​ ಇಂಡಿಯಾ ಮಜ್ಲಿಸ್​ ಇ ಇತ್ತೆಹದುಲ್​ ಮುಸ್ಲಿಮೀನ್​ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ತಿರುಗೇಟು ಕೂಡ ನೀಡಿದ್ದರು. ನೀವು ನಿಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ, ಭಾರತದ ಆಂತರಿಕ ವಿಚಾರಗಳಿಗೆ ಮೂಗು ತೂರಿಸಲು ಬರಬೇಡಿ ಎಂದು ಹೇಳಿದ್ದರು. ಇದೀಗ ಹಿಜಾಬ್​ ಬಗ್ಗೆ ಮತ್ತೊಂದು ಹೇಳಿಕೆ ನೀಡಿರುವ ಅಸಾದುದ್ದೀನ್​ ಓವೈಸಿ, ಒಂದಲ್ಲ ಒಂದು ದಿನ  ಹಿಜಾಬಿಯೇ ಭಾರತದ ಪ್ರಧಾನಿಯಾಗುತ್ತಾಳೆ ಎಂದಿದ್ದಾರೆ. ಹಿಜಾಬಿ ಎಂದರೆ ಹಿಜಾಬ್​ ಧರಿಸುವ ಮಹಿಳೆ ಎಂದರ್ಥ. ಉತ್ತರ ಪ್ರದೇಶದ ರ್ಯಾಲಿಯಲ್ಲಿ ಮಾತನಾಡಿದ ಅವರು, ಹಿಜಾಬ್ ಧರಿಸುವ ಹೆಣ್ಣುಮಕ್ಕಳು ಜಿಲ್ಲಾಧಿಕಾರಿಯಾಗಬಹುದು, ವೈದ್ಯರಾಗಬಹುದು ಅಷ್ಟೇ ಏಕೆ? ಮುಂದೊಂದು ದಿನ ಈ ದೇಶದ ಪ್ರಧಾನಮಂತ್ರಿಯೂ ಆಗುತ್ತಾರೆ ಎಂದು ಹೇಳಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟೆ ವೈರಲ್ ಆಗುತ್ತಿದೆ.

ಉತ್ತರಪ್ರದೇಶದ ಸಂಭಾಲ್​ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಅಸಾದುದ್ದೀನ್​ ಓವೈಸಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣೆ, ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. ಹಾಗೇ ಮಾತನಾಡುವಾಗಲೆಲ್ಲ ತ್ರಿವಳಿ ತಲಾಖ್​ ಕಾನೂನನ್ನು ಉಲ್ಲೇಖಿಸುತ್ತಾರೆ. ಆದರೆ ಈಗ ಹಿಜಾಬ್​ ಇಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹಿಜಾಬ್ ಮುಸ್ಲಿಂ ಹುಡುಗಿಯರ ಹಕ್ಕು. ಆದರೆ ಅದನ್ನು ಧರಿಸಲು ನಿರಾಕರಿಸಲಾಗುತ್ತಿದೆ ಎಂದು ಹೇಳಿದ ಅಸಾದುದ್ದೀನ್ ಓವೈಸಿ, ಹಿಜಾಬ್​ ಹಕ್ಕು ಪ್ರತಿಪಾದಿಸುತ್ತಿರುವ ಕರ್ನಾಟಕದ ಮಹಿಳೆಯರಿಗೆ ನನ್ನ ಸಲಾಂ ಎಂದು ಹೇಳಿದರು. ಅಷ್ಟೇ ಅಲ್ಲ, ಕೇಸರಿ ಶಾಲು ಧರಿಸಿ ಜೈಶ್ರೀರಾಮ್​ ಎಂದು ಕೂಗಿದವರಿಗೆ ಪ್ರತಿಯಾಗಿ, ಅಲ್ಲಾ ಹು ಅಕ್ಬರ್ ಎಂದು ಕೂಗಿದ ಮಂಡ್ಯದ ಮುಸ್ಕಾನ್​​ ಖಾನ್​ರನ್ನೂ ಶ್ಲಾಘಿಸಿದರು.

ಅದಕ್ಕೂ ಮೊದಲು ಟ್ವೀಟ್ ಮಾಡಿದ್ದ ಅಸಾದುದ್ದೀನ್​ ಓವೈಸಿ, ನಾನು ಮುಸ್ಕಾನ್ ಖಾನ್​ ಮತ್ತುಆಕೆಯ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಆಕೆಯ ಶಿಕ್ಷಣದ ಬಗೆಗಿನ ಬದ್ಧತೆ ಮತ್ತು ಧರ್ಮ ಹಾಗೂ ಆಯ್ಕೆಯ ಸ್ವಾತಂತ್ರ್ಯವನ್ನು ಬಳಸಿಕೊಳ್ಳುತ್ತಿರುವ ರೀತಿಗೆ ಖುಷಿಯಾಗಿದೆ. ಅವಳು ಹೀಗೇ ಮುಂದುವರಿಯಲಿ.  ಅವಳ ನಿರ್ಭೀತಿ ನಮ್ಮೆಲ್ಲರಿಗೂ ಧೈರ್ಯದ ಮೂಲವಾಗಿದೆ ಎಂದು ಹೇಳಿದ್ದರು. ಇನ್ನು ಕರ್ನಾಟಕ ಹಿಜಾಬ್​ ವಿವಾದ ಸದ್ಯ ಹೈಕೋರ್ಟ್ ಮೆಟ್ಟಿಲೇರಿದೆ. ಮುಂದಿನ ತೀರ್ಪಿನವರೆಗೂ ಶಾಲಾ-ಕಾಲೇಜುಗಳಿಗೆ ಧರ್ಮ ಪ್ರತಿಬಿಂಬಕ ಬಟ್ಟೆಗಳನ್ನು ವಿದ್ಯಾರ್ಥಿಗಳು ಧರಿಸುವಂತಿಲ್ಲ ಎಂದು ಮಧ್ಯಂತರ ತೀರ್ಪನ್ನು ಕೋರ್ಟ್ ನೀಡಿದೆ. ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಹಿಂದೇಟು ಹಾಕಿದೆ.

ಇದನ್ನೂ ಓದಿ: ₹ 200 ಕೋಟಿ ಮೌಲ್ಯದ 2 ಲಕ್ಷ ಕೆಜಿ ಗಾಂಜಾಕ್ಕೆ ಬೆಂಕಿ ಹಚ್ಚಿ ನಾಶ ಮಾಡಿದ ಆಂಧ್ರಪ್ರದೇಶ ಪೊಲೀಸ್; ವಿಡಿಯೊ ನೋಡಿ

Published On - 11:30 am, Sun, 13 February 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ