AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus India Update: ಭಾರತದಲ್ಲಿ ಒಂದೇ ದಿನ 1.26 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ

Covid-19 Cases In India: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1,26,789 ಹೊಸ ಕೊವಿಡ್ ಪ್ರಕರಣಗಳು ವರದಿಯಾಗಿದ್ದು, 59,258 ಮಂದಿ ಚೇತರಿಸಿಕೊಂಡಿದ್ದಾರೆ. 685 ಮಂದಿ ಮೃತ ಪಟ್ಟಿದ್ದು ಮೃತರ ಸಂಖ್ಯೆ 1,66,862ಕ್ಕೇರಿದೆ.

Coronavirus India Update: ಭಾರತದಲ್ಲಿ ಒಂದೇ ದಿನ 1.26 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ
ಪಟ್ನಾದಲ್ಲಿ ರೈಲು ಪ್ರಯಾಣಿಕರ ಸ್ವಾಬ್ ಟೆಸ್ಟಿಂಗ್ ಮಾಡುತ್ತಿರುವ ಆರೋ ಗ್ಯ ಕಾರ್ಯಕರ್ತ
ರಶ್ಮಿ ಕಲ್ಲಕಟ್ಟ
|

Updated on:Apr 08, 2021 | 11:21 AM

Share

ದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1,26,789 ಹೊಸ ಕೊವಿಡ್ ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕಿತರಿದ್ದು, ಛತ್ತೀಸಗಡದಲ್ಲಿ ಇದೇ ಮೊದಲ ಬಾರಿ ಸೋಂಕಿತರ ಸಂಖ್ಯೆ 10,000 ಗಡಿದಾಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ 1,29,28,574ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಹೇಳಿವೆ. ಈ ಪೈಕಿ 8,43,473 ಸಕ್ರಿಯ ಪ್ರಕರಣಗಳಿದ್ದು 1,18,51,393 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 1,66,862 ಮಂದಿ ಸಾವಿಗೀಡಾಗಿದ್ದಾರೆ. 9,01,98,673 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.  ಕಳೆದ 24 ಗಂಟೆಗಳಲ್ಲಿ 59,258 ಮಂದಿ ಚೇತರಿಸಿಕೊಂಡಿದ್ದು 685 ಮಂದಿ ಮೃತಪಟ್ಟಿದ್ದಾರೆ.

ನಾಲ್ಕು ದಿನಗಳ ಅವಧಿಯಲ್ಲಿ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ ಮೂರು ಬಾರಿ 1ಲಕ್ಷದ ಗಡಿದಾಟಿದೆ. ಫೆಬ್ರವರಿ 12ರಂದು ಅತೀ ಕಡಿಮೆ ಸಕ್ರಿಯ ಪ್ರಕರಣಗಳು ಅಂದರೆ 1,35,926ಪ್ರಕರಣಗಳು ವರದಿಯಾಗಿತ್ತು.

ಮಹಾರಾಷ್ಟ್ರದಲ್ಲಿ 59,907 ಹೊಸ ಕೊವಿಡ್ ಪ್ರಕರಣ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 59,907 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿನ ಥಾಣೆ ಜಿಲ್ಲೆಯಲ್ಲಿ 6,290 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 3,56,267ಕ್ಕೇರಿದೆ. 21ಮಂದಿ ಸೋಂಕಿತರು ಮೃತಪಟ್ಟಿದ್ದರು, ಮೃತರ ಸಂಖ್ಯೆ 6,620ಕ್ಕೇರಿದೆ. ಥಾಣೆಯಲ್ಲಿ ಮೃತರ ಸಾವಿನ ಸಂಖ್ಯೆಯ ಪ್ರಮಾಣ ಶೇಕಡಾ1.86ಆಗಿದೆ. ಇಲ್ಲಿಯವರೆಗೆ 3,02,521ಮಂದಿ ಚೇತರಿಸಿಕೊಂಡಿದ್ದು ಚೇತರಿಕೆಯ ಪ್ರಮಾಣ ಶೇಕಡಾ 84.91ಆಗಿದೆ. ಪಲ್ಘಾರ್ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54,813ಕ್ಕೇರಿದ್ದು 1,247 ಮಂದಿ ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ 12 ಲಕ್ಷ ಮಂದಿಗೆ ಕೊವಿಡ್ ಪರೀಕ್ಷೆ ಏಪ್ರಿಲ್ 7ರವರೆಗೆ 25,26,77,379 ಮಾದರಿಗಳನ್ನು ಕೊವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಈ ಪೈಕಿ ಬುಧವಾರ 12,37,781 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಹೇಳಿದೆ.

9 ಕೋಟಿಗಿಂತಲೂ ಹೆಚ್ಚು ಮಂದಿಗೆ ಲಸಿಕೆ ಇಲ್ಲಿಯವರೆಗೆ 9 ಕೋಟಿಗಿಂತಲೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಎಲ್ಲರಿಗೂ ಲಸಿಕೆ ನೀಡಿ: ಪಿ.ಚಿದಂಬರಂ ಟ್ವೀಟ್ ಭಾರತೀಯ ವೈದ್ಯಕೀಯ ಸಂಘಟನೆ (IMA) ಸಾರ್ವತ್ರಿಕ ಲಸಿಕೆ ವಿತರಣೆಗೆ ಕರೆ ನೀಡಿದೆ. ಹಲವಾರು ಮುಖ್ಯಮಂತ್ರಿಗಳು  ಸಾರ್ವತ್ರಿಕ ಲಸಿಕೆ ನೀಡುವಂತೆ ಒತ್ತಾಯಿಸಿದ್ದಾರೆ. ಇನ್ನೂ ಸಾರ್ವತ್ರಿಕ ವ್ಯಾಕ್ಸಿನೇಷನ್ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತದೆ. ಯಾವುದೇ ಪೂರ್ವ-ನೋಂದಣಿ ಇಲ್ಲದೆ ಎಲ್ಲಾ ವಯಸ್ಸಿನವರಿಗೆ ವಾಕ್-ಇನ್ ಲಸಿಕೆ ನೀಡುವುದು ಈ ಸಮಯದ ತುರ್ತು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಕೊವಿಡ್ ಲಸಿಕೆಯ 2ನೇ ಡೋಸ್ ಪಡೆದ ಪ್ರಧಾನಿ ನರೇಂದ್ರ ಮೋದಿ

(One day High India records 126789 New cases of the Coronavirus 685 deaths in the last 24 hours)

Published On - 10:50 am, Thu, 8 April 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ