Coronavirus India Update: ಭಾರತದಲ್ಲಿ ಒಂದೇ ದಿನ 1.26 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ

Covid-19 Cases In India: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1,26,789 ಹೊಸ ಕೊವಿಡ್ ಪ್ರಕರಣಗಳು ವರದಿಯಾಗಿದ್ದು, 59,258 ಮಂದಿ ಚೇತರಿಸಿಕೊಂಡಿದ್ದಾರೆ. 685 ಮಂದಿ ಮೃತ ಪಟ್ಟಿದ್ದು ಮೃತರ ಸಂಖ್ಯೆ 1,66,862ಕ್ಕೇರಿದೆ.

Coronavirus India Update: ಭಾರತದಲ್ಲಿ ಒಂದೇ ದಿನ 1.26 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ
ಪಟ್ನಾದಲ್ಲಿ ರೈಲು ಪ್ರಯಾಣಿಕರ ಸ್ವಾಬ್ ಟೆಸ್ಟಿಂಗ್ ಮಾಡುತ್ತಿರುವ ಆರೋ ಗ್ಯ ಕಾರ್ಯಕರ್ತ
Follow us
|

Updated on:Apr 08, 2021 | 11:21 AM

ದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1,26,789 ಹೊಸ ಕೊವಿಡ್ ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕಿತರಿದ್ದು, ಛತ್ತೀಸಗಡದಲ್ಲಿ ಇದೇ ಮೊದಲ ಬಾರಿ ಸೋಂಕಿತರ ಸಂಖ್ಯೆ 10,000 ಗಡಿದಾಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ 1,29,28,574ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಹೇಳಿವೆ. ಈ ಪೈಕಿ 8,43,473 ಸಕ್ರಿಯ ಪ್ರಕರಣಗಳಿದ್ದು 1,18,51,393 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 1,66,862 ಮಂದಿ ಸಾವಿಗೀಡಾಗಿದ್ದಾರೆ. 9,01,98,673 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.  ಕಳೆದ 24 ಗಂಟೆಗಳಲ್ಲಿ 59,258 ಮಂದಿ ಚೇತರಿಸಿಕೊಂಡಿದ್ದು 685 ಮಂದಿ ಮೃತಪಟ್ಟಿದ್ದಾರೆ.

ನಾಲ್ಕು ದಿನಗಳ ಅವಧಿಯಲ್ಲಿ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ ಮೂರು ಬಾರಿ 1ಲಕ್ಷದ ಗಡಿದಾಟಿದೆ. ಫೆಬ್ರವರಿ 12ರಂದು ಅತೀ ಕಡಿಮೆ ಸಕ್ರಿಯ ಪ್ರಕರಣಗಳು ಅಂದರೆ 1,35,926ಪ್ರಕರಣಗಳು ವರದಿಯಾಗಿತ್ತು.

ಮಹಾರಾಷ್ಟ್ರದಲ್ಲಿ 59,907 ಹೊಸ ಕೊವಿಡ್ ಪ್ರಕರಣ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 59,907 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿನ ಥಾಣೆ ಜಿಲ್ಲೆಯಲ್ಲಿ 6,290 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 3,56,267ಕ್ಕೇರಿದೆ. 21ಮಂದಿ ಸೋಂಕಿತರು ಮೃತಪಟ್ಟಿದ್ದರು, ಮೃತರ ಸಂಖ್ಯೆ 6,620ಕ್ಕೇರಿದೆ. ಥಾಣೆಯಲ್ಲಿ ಮೃತರ ಸಾವಿನ ಸಂಖ್ಯೆಯ ಪ್ರಮಾಣ ಶೇಕಡಾ1.86ಆಗಿದೆ. ಇಲ್ಲಿಯವರೆಗೆ 3,02,521ಮಂದಿ ಚೇತರಿಸಿಕೊಂಡಿದ್ದು ಚೇತರಿಕೆಯ ಪ್ರಮಾಣ ಶೇಕಡಾ 84.91ಆಗಿದೆ. ಪಲ್ಘಾರ್ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54,813ಕ್ಕೇರಿದ್ದು 1,247 ಮಂದಿ ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ 12 ಲಕ್ಷ ಮಂದಿಗೆ ಕೊವಿಡ್ ಪರೀಕ್ಷೆ ಏಪ್ರಿಲ್ 7ರವರೆಗೆ 25,26,77,379 ಮಾದರಿಗಳನ್ನು ಕೊವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಈ ಪೈಕಿ ಬುಧವಾರ 12,37,781 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಹೇಳಿದೆ.

9 ಕೋಟಿಗಿಂತಲೂ ಹೆಚ್ಚು ಮಂದಿಗೆ ಲಸಿಕೆ ಇಲ್ಲಿಯವರೆಗೆ 9 ಕೋಟಿಗಿಂತಲೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಎಲ್ಲರಿಗೂ ಲಸಿಕೆ ನೀಡಿ: ಪಿ.ಚಿದಂಬರಂ ಟ್ವೀಟ್ ಭಾರತೀಯ ವೈದ್ಯಕೀಯ ಸಂಘಟನೆ (IMA) ಸಾರ್ವತ್ರಿಕ ಲಸಿಕೆ ವಿತರಣೆಗೆ ಕರೆ ನೀಡಿದೆ. ಹಲವಾರು ಮುಖ್ಯಮಂತ್ರಿಗಳು  ಸಾರ್ವತ್ರಿಕ ಲಸಿಕೆ ನೀಡುವಂತೆ ಒತ್ತಾಯಿಸಿದ್ದಾರೆ. ಇನ್ನೂ ಸಾರ್ವತ್ರಿಕ ವ್ಯಾಕ್ಸಿನೇಷನ್ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತದೆ. ಯಾವುದೇ ಪೂರ್ವ-ನೋಂದಣಿ ಇಲ್ಲದೆ ಎಲ್ಲಾ ವಯಸ್ಸಿನವರಿಗೆ ವಾಕ್-ಇನ್ ಲಸಿಕೆ ನೀಡುವುದು ಈ ಸಮಯದ ತುರ್ತು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಕೊವಿಡ್ ಲಸಿಕೆಯ 2ನೇ ಡೋಸ್ ಪಡೆದ ಪ್ರಧಾನಿ ನರೇಂದ್ರ ಮೋದಿ

(One day High India records 126789 New cases of the Coronavirus 685 deaths in the last 24 hours)

Published On - 10:50 am, Thu, 8 April 21

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?