AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ದಿನ ಕೆಲಸ 6 ದಿನ ವಿಶ್ರಾಂತಿ, ವಿಮಾನದಲ್ಲಿ 1,500 ಕಿ.ಮೀ ದೂರ ಪ್ರಯಾಣಿಸಿ ದರೋಡೆ ಮಾಡ್ತಿದ್ದ ಗ್ಯಾಂಗ್​ ಸೆರೆ

ವಿಮಾನದಲ್ಲಿ 1,500 ಕಿ.ಮೀ ದೂರ ಪ್ರಯಾಣಿಸಿ ದರೋಡೆ ನಡೆಸುತ್ತಿದ್ದ ಗ್ಯಾಂಗ್​ನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಉತ್ತರ ಪ್ರದೇಶದಿಂದ ಮುಂಬೈಗೆ ತೆರಳಿ ಈ ಗ್ಯಾಂಗ್ ವಾರಕ್ಕೊಂದು ದರೋಡೆ ನಡೆಸುತ್ತಿತ್ತು.

ಒಂದು ದಿನ ಕೆಲಸ 6 ದಿನ ವಿಶ್ರಾಂತಿ, ವಿಮಾನದಲ್ಲಿ 1,500 ಕಿ.ಮೀ ದೂರ ಪ್ರಯಾಣಿಸಿ ದರೋಡೆ ಮಾಡ್ತಿದ್ದ ಗ್ಯಾಂಗ್​ ಸೆರೆ
ವಿಮಾನ
ನಯನಾ ರಾಜೀವ್
|

Updated on: Jul 12, 2024 | 9:13 AM

Share

ಕಳ್ಳ ಎಷ್ಟೇ ಬುದ್ಧಿವಂತನಾಗಿದ್ದರೂ ಒಂದಲ್ಲಾ ಒಂದು ದಿನ ಸಿಕ್ಕಿ ಬೀಳಲೇಬೇಕು, ವಿಮಾನದಲ್ಲಿ 1,500 ಕಿ.ಮೀ ದೂರ ಪ್ರಯಾಣಿಸಿ ದರೋಡೆ ಮಾಡುತ್ತಿದ್ದ ಗ್ಯಾಂಗ್​ನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್​ ವಾರಕ್ಕೆ ಒಂದು ದಿನ ಮಾತ್ರ ಕೆಲಸ ಮಾಡುತ್ತಿತ್ತು, ಬಳಿಕ ಗ್ಯಾಂಗ್​ನಲ್ಲಿದ್ದ ಜನರು ಆರು ದಿನಗಳ ಕಾಲ ವಿಶ್ರಾಂತಿ ಪಡೆಯುತ್ತಿದ್ದರು. ಉತ್ತರ ಪ್ರದೇಶದ ಮೀರತ್​ನಿಂದ ವಿಮಾನದಲ್ಲಿ 1500 ಕಿ.ಮೀ ದೂರದಲ್ಲಿರುವ ಮುಂಬೈಗೆ ತೆರಳಿ ಲೂಟಿ ಮಾಡುತ್ತಿದ್ದರು.

ಈ ಗ್ಯಾಂಗ್​ನ ವಿಶೇಷವೆಂದರೆ ಬೆಳಗ್ಗೆ ವಿಮಾನದಲ್ಲಿ ಹೋಗಿ ಲೂಟಿ ಮಾಡುತ್ತಿತ್ತು ಸಂಜೆ ವಿಮಾನದಲ್ಲಿ ವಾಪಸಾಗುತ್ತಿತ್ತು. ಮುಂಬೈನ ಮಾಟುಂಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಬಲ್ ಡೆಕ್ಕರ್ ಬಸ್‌ನಲ್ಲಿ ಮಹಿಳೆಯ ಚಿನ್ನಾಭರಣ ಲೂಟಿ ಮಾಡಿರುವ ಘಟನೆ ವರದಿಯಾಗಿತ್ತು.

ಗ್ಯಾಂಗ್​ನ ಸದಸ್ಯರು ಮಹಿಳೆಗೆ ಕಾಫಿ ಕುಡಿದಿ ಪ್ರಜ್ಞೆ ತಪ್ಪಿಸಿ ಸರ ಹಾಗೂ ಇತರೆ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಈ ಹಿಂದೆಯೂ ಇಂಥಾ ಕೆಲವು ಘಟನೆಗಳು ವರದಿಯಾಗಿದ್ದವು. ಮಾಟುಂಗಾ ಪೊಲೀಸರು ತನಿಖೆ ಆರಂಭಿಸಿದಾಗ ಆಘಾತಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: ಪತಿಯ ಹಣಕ್ಕಿಂತ ಸ್ನೇಹ ಮುಖ್ಯ: ಸಾಲ ತೀರಿಸಲಾಗದೆ ಪರದಾಡುತ್ತಿದ್ದ ಸ್ನೇಹಿತೆಗಾಗಿ ದರೋಡೆ ನಾಟಕವಾಡಿದ ಗೆಳತಿ

ಈ ದುಷ್ಕರ್ಮಿಗಳು ಒಂದೇ ಗ್ಯಾಂಗ್‌ಗೆ ಸೇರಿದವರು ಎಂದು ತಿಳಿದುಬಂದಿದೆ. ವಾರಕ್ಕೊಮ್ಮೆ ಮಾತ್ರ ದರೋಡೆ ಮಾಡುತ್ತಾರೆ. ಇದಕ್ಕಾಗಿ ಅವರು ಮೀರತ್‌ನಿಂದ ಮುಂಬೈಗೆ ಬಂದು ಅದೇ ಸಂಜೆ ಹಿಂತಿರುಗುತ್ತಾರೆ. ಪೊಲೀಸರು ಆರೋಪಿಯ ಸ್ಥಳವನ್ನು ಪತ್ತೆ ಮಾಡಿದರು ಮತ್ತು ಮೀರತ್‌ನ ಕೊತ್ವಾಲಿ ಪ್ರದೇಶದಲ್ಲಿ ದಾಳಿ ನಡೆಸಿದರು.

ಮುಂಬೈ ಪೊಲೀಸರು ಮೀರತ್‌ನ ಶಹನಾಥನ್‌ನಿಂದ ಯೂನಸ್ ಎಂಬ ಕ್ರಿಮಿನಲ್ ಅನ್ನು ಹಿಡಿದಿದ್ದಾರೆ. ಆತನನ್ನು ವಿಚಾರಣೆಗೊಳಪಡಿಸಿದ ನಂತರ, ಪೊಲೀಸರು ಬ್ರಹ್ಮಪುರಿಯಲ್ಲಿ ಮತ್ತೊಬ್ಬ ಕ್ರಿಮಿನಲ್ ಹುಡುಕಲು ದಾಳಿ ನಡೆಸಿದರು ಆದರೆ ಆರೋಪಿಗಳು ಪರಾರಿಯಾಗಿದ್ದ.

ಮಾಟುಂಗಾ ಠಾಣೆಯಿಂದ ಬಂದ ಎಸ್‌ಐ ಸಂತೋಷ್ ಮಲಿಕ್ ಮಾತನಾಡಿ, ಈ ಇಬ್ಬರೂ ದುಷ್ಕರ್ಮಿಗಳು ಬಹಳ ದಿನಗಳಿಂದ ಅಪರಾಧ ಎಸಗುತ್ತಿದ್ದಾರೆ. ಅವರ ಗ್ಯಾಂಗ್‌ನಲ್ಲಿ ಇನ್ನೂ ಅನೇಕ ಜನರು ಸೇರಿದ್ದಾರೆ. ಅವರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?