AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ವಾಹನದಿಂದ ಪಟಾಕಿ ಇಳಿಸುವಾಗ ಸ್ಫೋಟ, ಓರ್ವ ಸಾವು, ಹಲವು ಜನರಿಗೆ ಗಾಯ

ಕೇರಳದಲ್ಲಿ ವಾಹನದಿಂದ ಪಟಾಕಿಯನ್ನು ಇಳಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿ ಓರ್ವ ಮೃತಪಟ್ಟು, 16ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ಸ್ಫೋಟ ಸಂಭವಿಸಿದೆ, ಮನೆಯೊಂದರಲ್ಲೇ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಸಂಗ್ರಹಗಾರದ ಬಳಿ ಈ ಸ್ಫೋಟ ನಡೆದಿದೆ.

ಕೇರಳ: ವಾಹನದಿಂದ ಪಟಾಕಿ ಇಳಿಸುವಾಗ ಸ್ಫೋಟ, ಓರ್ವ ಸಾವು, ಹಲವು ಜನರಿಗೆ ಗಾಯ
ಸ್ಫೋಟImage Credit source: Indian Express
ನಯನಾ ರಾಜೀವ್
|

Updated on: Feb 12, 2024 | 1:02 PM

Share

ವಾಹನದಿಂದ ಪಟಾಕಿಗಳನ್ನು(Firecrackers) ಇಳಿಸುವಾಗ ಸ್ಫೋಟ ಸಂಭವಿಸಿ ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ಸ್ಫೋಟ ಸಂಭವಿಸಿದೆ, ಮನೆಯೊಂದರಲ್ಲೇ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಸಂಗ್ರಹಗಾರದ ಬಳಿ ಈ ಸ್ಫೋಟ ನಡೆದಿದೆ. ಸುಮಾರು 16 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದಿಂದ ಸಮೀಪದ ಮನೆಗಳು ಹಾಗೂ ಇತರೆ ಕಟ್ಟಡಗಳಿಗೆ ಹಾನಿಯುಂಟಾಗಿದೆ.

ಮೃತರನ್ನು ಉಳೂರು ಮೂಲದ ಅಶೋಕನ್ ಅವರ ಪುತ್ರ ವಿಷ್ಣು ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ಕೂಡಲೇ ಅವರನ್ನು ಸಮೀಪದ ತ್ರಿಪುಣಿತುರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ ಆಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು.

ಸ್ಫೋಟದಲ್ಲಿ ಗಾಯಗೊಂಡ 12 ಮಂದಿ ವೈದ್ಯಕೀಯ ಆರೈಕೆಯಲ್ಲಿದ್ದಾರೆ. ಇವರಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಓರ್ವನನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರನ್ನು ಕಲಮೆಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಈ ನಡುವೆ ಪೊಲೀಸರ ಅನುಮತಿ ಪಡೆಯದೇ ಪಟಾಕಿಗಳನ್ನು ಜನವಸತಿ ಪ್ರದೇಶಕ್ಕೆ ಕೊಂಡೊಯ್ಯಲಾಗಿದೆ ಎಂದು ಹೇಳಲಾಗಿದೆ. ವಾಹನದಿಂದ ಇಳಿಸುವಾಗ ಪಟಾಕಿ ಸಿಡಿದಿದೆ ಎಂದು ಹೇಳಲಾಗಿದೆ. ಪಟಾಕಿ ಕೊಂಡೊಯ್ಯುವ ವಾಹನವೂ ಬೆಂಕಿಗಾಹುತಿಯಾಗಿದೆ. ಅಕ್ಕಪಕ್ಕದಲ್ಲಿದ್ದ ವೃದ್ಧರು, ಮಕ್ಕಳು ಗಾಯಗೊಂಡಿದ್ದಾರೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಫೋಟದಲ್ಲಿ 30 ಮನೆಗಳಿಗೆ ಹಾನಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ