AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಭವಿಷ್ಯ, ಒಂದು ಕುಟುಂಬ, ಒಂದು ಭೂಮಿ; ಜಿ20 ಶೃಂಗಸಭೆ ಗೋಷ್ಠಿ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದು…

ಜಿ20 ಶೃಂಗಸಭೆಯ ಸಮಯದಲ್ಲಿ, ವಿಶ್ವ ಸಮುದಾಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ವ್ಯಾಪ್ತಿಯನ್ನು ಒಳಗೊಂಡಿರುವ ‘ಒಂದು ಭೂಮಿ', ‘ಒಂದು ಕುಟುಂಬ' ಮತ್ತು ‘ಒಂದು ಭವಿಷ್ಯ' ಕುರಿತು ಅಧಿವೇಶನಗಳ ಅಧ್ಯಕ್ಷತೆ ವಹಿಸಲಿದ್ದೇನೆ. ಇವುಗಳಲ್ಲಿ ಬಲವಾದ, ಸಮರ್ಥನೀಯ, ಅಂತರ್ಗತ ಮತ್ತು ಸಮತೋಲಿತ ಬೆಳವಣಿಗೆಯನ್ನು ಮುಂದುವರಿಸುವುದೂ ಕೂಡ ಸೇರಿದೆ ಎಂದು ಮೋದಿ ಹೇಳಿದ್ದಾರೆ.

ಒಂದು ಭವಿಷ್ಯ, ಒಂದು ಕುಟುಂಬ, ಒಂದು ಭೂಮಿ; ಜಿ20 ಶೃಂಗಸಭೆ ಗೋಷ್ಠಿ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದು...
ಪ್ರಧಾನಿ ಮೋದಿ
Ganapathi Sharma
|

Updated on: Sep 08, 2023 | 5:34 PM

Share

ನವದೆಹಲಿ, ಸೆಪ್ಟೆಂಬರ್ 8: ‘ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ 18 ನೇ ಜಿ20 ಶೃಂಗಸಭೆಯನ್ನು (G20 Summit) ಆಯೋಜಿಸಲು ಭಾರತವು ಉತ್ಸುಕವಾಗಿದೆ. ಇದು ಭಾರತ ಆಯೋಜಿಸುತ್ತಿರುವ ಮೊದಲ ಜಿ20 ಶೃಂಗಸಭೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ವಿಶ್ವ ನಾಯಕರೊಂದಿಗೆ ಫಲಪ್ರದ ಚರ್ಚೆಗಳನ್ನು ಎದುರು ನೋಡುತ್ತಿದ್ದೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ಜತೆಗೆ, ಜಿ 20 ನಾಯಕರು ‘ಸುಸ್ಥಿರ ಮತ್ತು ಸಮಾನತೆಯಿಂದ ಕೂಡಿದ ಒಂದು ಭವಿಷ್ಯ, ಜತೆಯಾಗಿ ಒಂದು ಕುಟುಂಬ ಹಾಗೂ ಆರೋಗ್ಯಕರ ಒಂದು ಭೂಮಿ’ ಎಂಬ ವಿಷಯದ ಮೇಲೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳಲಿದ್ದಾರೆ ಎಂದು ಮೋದಿ ಉಲ್ಲೇಖಿಸಿದ್ದಾರೆ.

ನವದೆಹಲಿಯ ಜಿ20 ಶೃಂಗಸಭೆಯು ಮಾನವ ಕೇಂದ್ರಿತ ಮತ್ತು ಅಂತರ್ಗತ ಅಭಿವೃದ್ಧಿಯಲ್ಲಿ ಹೊಸ ಹಾದಿಯನ್ನು ರೂಪಿಸಲಿದೆ ಎಂಬ ದೃಢವಾದ ನಂಬಿಕೆ ನನ್ನದು ಎಂದು ಮೋದಿ ಹೇಳಿದ್ದಾರೆ.

ಜಿ20 ಶೃಂಗಸಭೆಯ ಸಮಯದಲ್ಲಿ, ವಿಶ್ವ ಸಮುದಾಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ವ್ಯಾಪ್ತಿಯನ್ನು ಒಳಗೊಂಡಿರುವ ‘ಒಂದು ಭೂಮಿ’, ‘ಒಂದು ಕುಟುಂಬ’ ಮತ್ತು ‘ಒಂದು ಭವಿಷ್ಯ’ ಕುರಿತು ಅಧಿವೇಶನಗಳ ಅಧ್ಯಕ್ಷತೆ ವಹಿಸಲಿದ್ದೇನೆ. ಇವುಗಳಲ್ಲಿ ಬಲವಾದ, ಸಮರ್ಥನೀಯ, ಅಂತರ್ಗತ ಮತ್ತು ಸಮತೋಲಿತ ಬೆಳವಣಿಗೆಯನ್ನು ಮುಂದುವರಿಸುವುದೂ ಕೂಡ ಸೇರಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸುಸ್ಥಿರ ಅಭಿವೃದ್ಧಿ ಗುರಿ (SDG) ಗೆ ಸಂಬಂಧಿತ ಪ್ರಗತಿಯನ್ನು ಚುರುಕುಗೊಳಿಸಲು ನಾವು ಬಯಸುತ್ತೇವೆ. ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ಅಭಿವೃದ್ಧಿ ಒಪ್ಪಂದ ಮತ್ತು 21 ನೇ ಶತಮಾನಕ್ಕೆ ಬಹುಪಕ್ಷೀಯ ಸಂಸ್ಥೆಗಳನ್ನು ಬಲಪಡಿಸಲಿದ್ದೇವೆ ಎಂದು ಮೋದಿ ಉಲ್ಲೇಖಿಸಿದ್ದಾರೆ.

ತಾಂತ್ರಿಕ ರೂಪಾಂತರ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯಗಳಂತಹ ಭವಿಷ್ಯದ ಕ್ಷೇತ್ರಗಳಿಗೆ ನಾವು ಅಪಾರ ಆದ್ಯತೆಯನ್ನು ನೀಡುತ್ತಿದ್ದೇವೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಮತ್ತು ವಿಶ್ವ ಶಾಂತಿಯನ್ನು ಖಚಿತಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Fact Check: ಅದಾನಿ, ಅಂಬಾನಿ, ಟಾಟಾ, ಬಿರ್ಲಾ ಮೊದಲಾದವರಿಗೆ ಜಿ20 ಔತಣಕೂಟಕ್ಕೆ ಆಹ್ವಾನಿಸಲಾಗಿಲ್ಲ; ಪಿಐಬಿ ಫ್ಯಾಕ್ಟ್ ಚೆಕ್

ಸ್ನೇಹ ಮತ್ತು ಸಹಕಾರದ ಬಂಧಗಳನ್ನು ಇನ್ನಷ್ಟು ಗಾಢಗೊಳಿಸಲು ನಾನು ಹಲವಾರು ನಾಯಕರು ಮತ್ತು ನಿಯೋಗದ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುತ್ತೇನೆ. ನಮ್ಮ ಅತಿಥಿಗಳು ಭಾರತೀಯ ಶ್ರೇಷ್ಠ ಆತಿಥ್ಯವನ್ನು ಆನಂದಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ರಾಷ್ಟ್ರಪತಿಗಳು ಸೆಪ್ಟೆಂಬರ್ 9 ರಂದು ಔತಣಕೂಟವನ್ನು ಆಯೋಜಿಸಲಿದ್ದಾರೆ. 10ರಂದು ರಾಜ್‌ಘಾಟ್‌ನಲ್ಲಿ ನಾಯಕರು ಗಾಂಧೀಜಿ ಅವರಿಗೆ ನಮನ ಸಲ್ಲಿಸಲಿದ್ದಾರೆ. ಅದೇ ದಿನ ಸಮಾರೋಪ ಸಮಾರಂಭದಲ್ಲಿ, ‘ಒಂದು ಭೂಮಿ’, ‘ಒಂದು ಕುಟುಂಬ’ ಮತ್ತು ‘ಒಂದು ಭವಿಷ್ಯ’ದ ಕುರಿತ ದೃಷ್ಟಿಕೋನವನ್ನು ಜಿ 20 ನಾಯಕರು ಹಂಚಿಕೊಳ್ಳಲಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್