AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಭವಿಷ್ಯ, ಒಂದು ಕುಟುಂಬ, ಒಂದು ಭೂಮಿ; ಜಿ20 ಶೃಂಗಸಭೆ ಗೋಷ್ಠಿ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದು…

ಜಿ20 ಶೃಂಗಸಭೆಯ ಸಮಯದಲ್ಲಿ, ವಿಶ್ವ ಸಮುದಾಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ವ್ಯಾಪ್ತಿಯನ್ನು ಒಳಗೊಂಡಿರುವ ‘ಒಂದು ಭೂಮಿ', ‘ಒಂದು ಕುಟುಂಬ' ಮತ್ತು ‘ಒಂದು ಭವಿಷ್ಯ' ಕುರಿತು ಅಧಿವೇಶನಗಳ ಅಧ್ಯಕ್ಷತೆ ವಹಿಸಲಿದ್ದೇನೆ. ಇವುಗಳಲ್ಲಿ ಬಲವಾದ, ಸಮರ್ಥನೀಯ, ಅಂತರ್ಗತ ಮತ್ತು ಸಮತೋಲಿತ ಬೆಳವಣಿಗೆಯನ್ನು ಮುಂದುವರಿಸುವುದೂ ಕೂಡ ಸೇರಿದೆ ಎಂದು ಮೋದಿ ಹೇಳಿದ್ದಾರೆ.

ಒಂದು ಭವಿಷ್ಯ, ಒಂದು ಕುಟುಂಬ, ಒಂದು ಭೂಮಿ; ಜಿ20 ಶೃಂಗಸಭೆ ಗೋಷ್ಠಿ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದು...
ಪ್ರಧಾನಿ ಮೋದಿ
ಗಣಪತಿ ಶರ್ಮಾ
|

Updated on: Sep 08, 2023 | 5:34 PM

Share

ನವದೆಹಲಿ, ಸೆಪ್ಟೆಂಬರ್ 8: ‘ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ 18 ನೇ ಜಿ20 ಶೃಂಗಸಭೆಯನ್ನು (G20 Summit) ಆಯೋಜಿಸಲು ಭಾರತವು ಉತ್ಸುಕವಾಗಿದೆ. ಇದು ಭಾರತ ಆಯೋಜಿಸುತ್ತಿರುವ ಮೊದಲ ಜಿ20 ಶೃಂಗಸಭೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ವಿಶ್ವ ನಾಯಕರೊಂದಿಗೆ ಫಲಪ್ರದ ಚರ್ಚೆಗಳನ್ನು ಎದುರು ನೋಡುತ್ತಿದ್ದೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ಜತೆಗೆ, ಜಿ 20 ನಾಯಕರು ‘ಸುಸ್ಥಿರ ಮತ್ತು ಸಮಾನತೆಯಿಂದ ಕೂಡಿದ ಒಂದು ಭವಿಷ್ಯ, ಜತೆಯಾಗಿ ಒಂದು ಕುಟುಂಬ ಹಾಗೂ ಆರೋಗ್ಯಕರ ಒಂದು ಭೂಮಿ’ ಎಂಬ ವಿಷಯದ ಮೇಲೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳಲಿದ್ದಾರೆ ಎಂದು ಮೋದಿ ಉಲ್ಲೇಖಿಸಿದ್ದಾರೆ.

ನವದೆಹಲಿಯ ಜಿ20 ಶೃಂಗಸಭೆಯು ಮಾನವ ಕೇಂದ್ರಿತ ಮತ್ತು ಅಂತರ್ಗತ ಅಭಿವೃದ್ಧಿಯಲ್ಲಿ ಹೊಸ ಹಾದಿಯನ್ನು ರೂಪಿಸಲಿದೆ ಎಂಬ ದೃಢವಾದ ನಂಬಿಕೆ ನನ್ನದು ಎಂದು ಮೋದಿ ಹೇಳಿದ್ದಾರೆ.

ಜಿ20 ಶೃಂಗಸಭೆಯ ಸಮಯದಲ್ಲಿ, ವಿಶ್ವ ಸಮುದಾಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ವ್ಯಾಪ್ತಿಯನ್ನು ಒಳಗೊಂಡಿರುವ ‘ಒಂದು ಭೂಮಿ’, ‘ಒಂದು ಕುಟುಂಬ’ ಮತ್ತು ‘ಒಂದು ಭವಿಷ್ಯ’ ಕುರಿತು ಅಧಿವೇಶನಗಳ ಅಧ್ಯಕ್ಷತೆ ವಹಿಸಲಿದ್ದೇನೆ. ಇವುಗಳಲ್ಲಿ ಬಲವಾದ, ಸಮರ್ಥನೀಯ, ಅಂತರ್ಗತ ಮತ್ತು ಸಮತೋಲಿತ ಬೆಳವಣಿಗೆಯನ್ನು ಮುಂದುವರಿಸುವುದೂ ಕೂಡ ಸೇರಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸುಸ್ಥಿರ ಅಭಿವೃದ್ಧಿ ಗುರಿ (SDG) ಗೆ ಸಂಬಂಧಿತ ಪ್ರಗತಿಯನ್ನು ಚುರುಕುಗೊಳಿಸಲು ನಾವು ಬಯಸುತ್ತೇವೆ. ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ಅಭಿವೃದ್ಧಿ ಒಪ್ಪಂದ ಮತ್ತು 21 ನೇ ಶತಮಾನಕ್ಕೆ ಬಹುಪಕ್ಷೀಯ ಸಂಸ್ಥೆಗಳನ್ನು ಬಲಪಡಿಸಲಿದ್ದೇವೆ ಎಂದು ಮೋದಿ ಉಲ್ಲೇಖಿಸಿದ್ದಾರೆ.

ತಾಂತ್ರಿಕ ರೂಪಾಂತರ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯಗಳಂತಹ ಭವಿಷ್ಯದ ಕ್ಷೇತ್ರಗಳಿಗೆ ನಾವು ಅಪಾರ ಆದ್ಯತೆಯನ್ನು ನೀಡುತ್ತಿದ್ದೇವೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಮತ್ತು ವಿಶ್ವ ಶಾಂತಿಯನ್ನು ಖಚಿತಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Fact Check: ಅದಾನಿ, ಅಂಬಾನಿ, ಟಾಟಾ, ಬಿರ್ಲಾ ಮೊದಲಾದವರಿಗೆ ಜಿ20 ಔತಣಕೂಟಕ್ಕೆ ಆಹ್ವಾನಿಸಲಾಗಿಲ್ಲ; ಪಿಐಬಿ ಫ್ಯಾಕ್ಟ್ ಚೆಕ್

ಸ್ನೇಹ ಮತ್ತು ಸಹಕಾರದ ಬಂಧಗಳನ್ನು ಇನ್ನಷ್ಟು ಗಾಢಗೊಳಿಸಲು ನಾನು ಹಲವಾರು ನಾಯಕರು ಮತ್ತು ನಿಯೋಗದ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುತ್ತೇನೆ. ನಮ್ಮ ಅತಿಥಿಗಳು ಭಾರತೀಯ ಶ್ರೇಷ್ಠ ಆತಿಥ್ಯವನ್ನು ಆನಂದಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ರಾಷ್ಟ್ರಪತಿಗಳು ಸೆಪ್ಟೆಂಬರ್ 9 ರಂದು ಔತಣಕೂಟವನ್ನು ಆಯೋಜಿಸಲಿದ್ದಾರೆ. 10ರಂದು ರಾಜ್‌ಘಾಟ್‌ನಲ್ಲಿ ನಾಯಕರು ಗಾಂಧೀಜಿ ಅವರಿಗೆ ನಮನ ಸಲ್ಲಿಸಲಿದ್ದಾರೆ. ಅದೇ ದಿನ ಸಮಾರೋಪ ಸಮಾರಂಭದಲ್ಲಿ, ‘ಒಂದು ಭೂಮಿ’, ‘ಒಂದು ಕುಟುಂಬ’ ಮತ್ತು ‘ಒಂದು ಭವಿಷ್ಯ’ದ ಕುರಿತ ದೃಷ್ಟಿಕೋನವನ್ನು ಜಿ 20 ನಾಯಕರು ಹಂಚಿಕೊಳ್ಳಲಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!