AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nipah Virus: ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6ಕ್ಕೆ ಏರಿದೆ.ಸೋಂಕಿಗೆ ಒಳಗಾಗಿರುವ 39 ವರ್ಷದ ವ್ಯಕ್ತಿ ಕೋಯಿಕ್ಕೋಡ್​ನ ಆಸ್ಪತ್ರೆಯ ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಸಚಿವರ ಕಚೇರಿ ಮಾಹಿತಿ ನೀಡಿದೆ. ಇದೀಗ ಒಟ್ಟು ಸೋಂಕಿತರ ಸಂಖ್ಯೆ 6ಕ್ಕೆ ಏರಿದೆ. ಈಗಾಗಲೇ ನಿಫಾ ವೈರಸ್​ಗೆ ಇಬ್ಬರು ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರಲ್ಲಿ 9 ವರ್ಷದ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

Nipah Virus: ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ
ಕಂಟೈನ್ಮೆಂಟ್ ಝೋನ್Image Credit source: Mint
ನಯನಾ ರಾಜೀವ್
|

Updated on:Sep 15, 2023 | 9:37 AM

Share

ಕೇರಳದಲ್ಲಿ ಮತ್ತೊಂದು ನಿಫಾ ವೈರಸ್(Nipah Virus) ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6ಕ್ಕೆ ಏರಿದೆ.ಸೋಂಕಿಗೆ ಒಳಗಾಗಿರುವ 39 ವರ್ಷದ ವ್ಯಕ್ತಿ ಕೋಯಿಕ್ಕೋಡ್​ನ ಆಸ್ಪತ್ರೆಯ ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಸಚಿವರ ಕಚೇರಿ ಮಾಹಿತಿ ನೀಡಿದೆ. ಇದೀಗ ಒಟ್ಟು ಸೋಂಕಿತರ ಸಂಖ್ಯೆ 6ಕ್ಕೆ ಏರಿದೆ. ಈಗಾಗಲೇ ನಿಫಾ ವೈರಸ್​ಗೆ ಇಬ್ಬರು ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರಲ್ಲಿ 9 ವರ್ಷದ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಈ ವಾರದ ಆರಂಭದಲ್ಲಿ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಇದು ಬಾಂಗ್ಲಾದೇಶದ ರೂಪಾಂತರಿಯಾಗಿದ್ದು, ಸೋಂಕು ತಗುಲುವ ವೇಗ ಕಡಿಮೆ ಇರುತ್ತದೆ, ಹಾಗೆಯೇ ಸಾವಿನ ಪ್ರಮಾಣ ಹೆಚ್ಚಾಗಿರುತ್ತದೆ. ಕೋಯಿಕ್ಕೋಡ್​ನಲ್ಲಿ ಸೋಂಕು ಹರಡಿದ ಕಾರಣ, ಜಿಲ್ಲೆಯ ಸುಮಾರು 11 ವಾರ್ಡ್​ಗಳನ್ನು ಕಂಟೈನ್ಮೆಂಟ್​ ವಲಯ ಎಂದು ಘೋಷಿಸಲಾಗಿದೆ. ಜಿಲ್ಲಾಡಳಿತ ಶನಿವಾರ ಸೆಪ್ಟೆಂಬರ್ 16ರವರೆಗೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.

ಆದಾಗ್ಯೂ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್ ಅಧ್ಯಯನಗಳು ಕೋಯಿಕ್ಕೋಡ್ ಮಾತ್ರವಲ್ಲದೆ ಇಡೀ ರಾಜ್ಯವು ಇಂತಹ ಸೋಂಕುಗಳಿಗೆ ಗುರಿಯಾಗುತ್ತಿದೆ ಎಂದು ಕಂಡುಹಿಡಿದಿದೆ. ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಜನರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಅದು ಹೇಳಿದೆ.

ಮತ್ತಷ್ಟು ಓದಿ: ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ: ಮೈಸೂರಿನಲ್ಲಿ ಆರಂಭವಾಗದ ತಪಾಸಣೆ, ಚಾಮರಾಜನಗರದಲ್ಲಿ ಕಟ್ಟೆಚ್ಚರ

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾತನಾಡಿ, ರಾಜ್ಯವು ಜಾಗರೂಕವಾಗಿದೆ ಮತ್ತು ಕೋಯಿಕ್ಕೋಡ್‌ನ ನೆರೆಯ ಜಿಲ್ಲೆಗಳಾದ ಕಣ್ಣೂರು, ವಯನಾಡ್ ಮತ್ತು ಮಲಪ್ಪುರಂ ಕೂಡ ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.

ನಿಫಾ ಸಾಂಕ್ರಾಮಿಕ ರೋಗದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು ಆದರೆ ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.ಯಾವುದೇ ಆತಂಕದ ಅಗತ್ಯವಿಲ್ಲ, ನಾವೆಲ್ಲರೂ ಒಟ್ಟಾಗಿ ಸಮಸ್ಯೆಯನ್ನು ಎಚ್ಚರಿಕೆಯಿಂದ ನಿಭಾಯಿಸಬಹುದು ಎಂದರು.

ರಾಜ್ಯದಲ್ಲಿ ನಾಲ್ಕನೇ ಬಾರಿಗೆ ವೈರಲ್ ಸೋಂಕು ದೃಢಪಟ್ಟಿದೆ. ಇದು 2018 ಮತ್ತು 2021 ರಲ್ಲಿ ಕೋಯಿಕೋಡ್‌ನಲ್ಲಿ ಮತ್ತು 2019 ರಲ್ಲಿ ಎರ್ನಾಕುಲಂನಲ್ಲಿ ಪತ್ತೆಯಾಗಿತ್ತು.

Published On - 9:36 am, Fri, 15 September 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ