Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ನಾಗ್​ನಲ್ಲಿ ಮುಂದುವರೆದ ಎನ್​ಕೌಂಟರ್​ನಲ್ಲಿ ಮತ್ತೋರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್(Anantnag) ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್​ಕೌಂಟರ್​(Encounter)ನಲ್ಲಿ ಶುಕ್ರವಾರ ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆ. ಯೋಧರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅನಂತ್​ನಾಗ್​ನಲ್ಲಿ ಮುಂದುವರೆದ ಎನ್​ಕೌಂಟರ್​ನಲ್ಲಿ ಮತ್ತೋರ್ವ ಯೋಧ ಹುತಾತ್ಮ
ಭಾರತೀಯ ಸೇನೆ-ಸಾಂದರ್ಭಿಕ ಚಿತ್ರImage Credit source: IndiaToday
Follow us
ನಯನಾ ರಾಜೀವ್
|

Updated on:Sep 15, 2023 | 8:03 AM

ಶ್ರೀನಗರ, ಸೆಪ್ಟೆಂಬರ್ 15:   ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್(Anantnag) ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್​ಕೌಂಟರ್​(Encounter)ನಲ್ಲಿ ಶುಕ್ರವಾರ ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆ. ಯೋಧರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ಅನಂತ್‌ನಾಗ್‌ನ ಕೋಕರ್‌ನಾಗ್ ಪ್ರದೇಶದಲ್ಲಿ ಅಡಗಿರುವ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯ ನಂತರ ಈ ಎನ್‌ಕೌಂಟರ್ ನಡೆದಿದೆ. ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕದ ಕಮಾಂಡಿಂಗ್ ಆಫೀಸರ್ (ಕರ್ನಲ್), ಕಂಪನಿಯ ಕಮಾಂಡರ್ (ಮೇಜರ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಡಿಎಸ್‌ಪಿ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದರು.

ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಮತ್ತು ಡಿಎಸ್‌ಪಿ ಹುಮಾಯೂನ್ ಭಟ್ ಸೇರಿದಂತೆ ನಾಲ್ವರು ಅಧಿಕಾರಿಗಳು ಹುತಾತ್ಮರಾಗಿದ್ದಾರೆ, ಇಂದು ಪ್ರಾಣ ಕಳೆದುಕೊಂಡ ನಾಲ್ಕನೇ ಯೋಧರ ಗುರುತು ಇನ್ನೂ ಬಹಿರಂಗವಾಗಿಲ್ಲ.

ಕರ್ನಲ್ ಮನ್‌ಪ್ರೀತ್ ಸಿಂಗ್ ಮತ್ತು ಮೇಜರ್ ಆಶಿಶ್ ಧೋನ್‌ಚಾಕ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಗ್ಗೆ ಪಾಣಿಪತ್‌ನಲ್ಲಿರುವ ಅವರ ನಿವಾಸಕ್ಕೆ ತರಲಾಯಿತು.

ಮತ್ತಷ್ಟು ಓದಿ: ಅನಂತನಾಗ್‌ನಲ್ಲಿ ಯೋಧರ ಮೇಲೆ ದಾಳಿ ಮಾಡಿದ್ದು ಟಿಆರ್​​ಎಫ್ ಉಗ್ರ ಸಂಘಟನೆ; ಇದಕ್ಕೂ ಎಲ್ಇಟಿಗೂ ಏನು ಸಂಬಂಧ?

ಉಪ ಅಧೀಕ್ಷಕ ಹುಮಾಯೂನ್ ಭಟ್ ಅವರ ಅಂತ್ಯಕ್ರಿಯೆ ಗುರುವಾರ ಬದ್ಗಾಮ್‌ನಲ್ಲಿರುವ ಅವರ ನಿವಾಸದಲ್ಲಿ ನೆರವೇರಿತು. ಎನ್‌ಕೌಂಟರ್ ನಂತರ ಭಾರತೀಯ ಸೇನೆ ಗುರುವಾರ ಮೃತದೇಹಗಳನ್ನು ಶ್ರೀನಗರಕ್ಕೆ ರವಾನಿಸಿತ್ತು . ಗುರುವಾರ ಸಂಜೆ ಅವರ ಪಾರ್ಥಿವ ಶರೀರಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಸೇನೆಯು ಪಡೆಗಳನ್ನು ಮುನ್ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿ ನಡೆಯುವ ಸಂದರ್ಭದಲ್ಲಿ ಅಡಗುತಾಣದಲ್ಲಿ ಭಯೋತ್ಪಾದಕರನ್ನು ಹುಡುಕಲಾಗುತ್ತಿತ್ತು. ತಕ್ಷಣವೇ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಕರ್ನಲ್ ತಕ್ಷಣ ಮೃತಪಟ್ಟರು ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದರು. ಭಯೋತ್ಪಾದಕರನ್ನು ಲಷ್ಕರ್ ಎ ತೊಯ್ಬಾದ ದಿ ರೆಸಿಸ್ಟೆನ್ಸ್​ ಫ್ರಂಟ್​ನವರು ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:00 am, Fri, 15 September 23

ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ