AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ನಾಗ್​ನಲ್ಲಿ ಮುಂದುವರೆದ ಎನ್​ಕೌಂಟರ್​ನಲ್ಲಿ ಮತ್ತೋರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್(Anantnag) ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್​ಕೌಂಟರ್​(Encounter)ನಲ್ಲಿ ಶುಕ್ರವಾರ ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆ. ಯೋಧರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅನಂತ್​ನಾಗ್​ನಲ್ಲಿ ಮುಂದುವರೆದ ಎನ್​ಕೌಂಟರ್​ನಲ್ಲಿ ಮತ್ತೋರ್ವ ಯೋಧ ಹುತಾತ್ಮ
ಭಾರತೀಯ ಸೇನೆ-ಸಾಂದರ್ಭಿಕ ಚಿತ್ರImage Credit source: IndiaToday
ನಯನಾ ರಾಜೀವ್
|

Updated on:Sep 15, 2023 | 8:03 AM

Share

ಶ್ರೀನಗರ, ಸೆಪ್ಟೆಂಬರ್ 15:   ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್(Anantnag) ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್​ಕೌಂಟರ್​(Encounter)ನಲ್ಲಿ ಶುಕ್ರವಾರ ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆ. ಯೋಧರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ಅನಂತ್‌ನಾಗ್‌ನ ಕೋಕರ್‌ನಾಗ್ ಪ್ರದೇಶದಲ್ಲಿ ಅಡಗಿರುವ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯ ನಂತರ ಈ ಎನ್‌ಕೌಂಟರ್ ನಡೆದಿದೆ. ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕದ ಕಮಾಂಡಿಂಗ್ ಆಫೀಸರ್ (ಕರ್ನಲ್), ಕಂಪನಿಯ ಕಮಾಂಡರ್ (ಮೇಜರ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಡಿಎಸ್‌ಪಿ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದರು.

ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಮತ್ತು ಡಿಎಸ್‌ಪಿ ಹುಮಾಯೂನ್ ಭಟ್ ಸೇರಿದಂತೆ ನಾಲ್ವರು ಅಧಿಕಾರಿಗಳು ಹುತಾತ್ಮರಾಗಿದ್ದಾರೆ, ಇಂದು ಪ್ರಾಣ ಕಳೆದುಕೊಂಡ ನಾಲ್ಕನೇ ಯೋಧರ ಗುರುತು ಇನ್ನೂ ಬಹಿರಂಗವಾಗಿಲ್ಲ.

ಕರ್ನಲ್ ಮನ್‌ಪ್ರೀತ್ ಸಿಂಗ್ ಮತ್ತು ಮೇಜರ್ ಆಶಿಶ್ ಧೋನ್‌ಚಾಕ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಗ್ಗೆ ಪಾಣಿಪತ್‌ನಲ್ಲಿರುವ ಅವರ ನಿವಾಸಕ್ಕೆ ತರಲಾಯಿತು.

ಮತ್ತಷ್ಟು ಓದಿ: ಅನಂತನಾಗ್‌ನಲ್ಲಿ ಯೋಧರ ಮೇಲೆ ದಾಳಿ ಮಾಡಿದ್ದು ಟಿಆರ್​​ಎಫ್ ಉಗ್ರ ಸಂಘಟನೆ; ಇದಕ್ಕೂ ಎಲ್ಇಟಿಗೂ ಏನು ಸಂಬಂಧ?

ಉಪ ಅಧೀಕ್ಷಕ ಹುಮಾಯೂನ್ ಭಟ್ ಅವರ ಅಂತ್ಯಕ್ರಿಯೆ ಗುರುವಾರ ಬದ್ಗಾಮ್‌ನಲ್ಲಿರುವ ಅವರ ನಿವಾಸದಲ್ಲಿ ನೆರವೇರಿತು. ಎನ್‌ಕೌಂಟರ್ ನಂತರ ಭಾರತೀಯ ಸೇನೆ ಗುರುವಾರ ಮೃತದೇಹಗಳನ್ನು ಶ್ರೀನಗರಕ್ಕೆ ರವಾನಿಸಿತ್ತು . ಗುರುವಾರ ಸಂಜೆ ಅವರ ಪಾರ್ಥಿವ ಶರೀರಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಸೇನೆಯು ಪಡೆಗಳನ್ನು ಮುನ್ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿ ನಡೆಯುವ ಸಂದರ್ಭದಲ್ಲಿ ಅಡಗುತಾಣದಲ್ಲಿ ಭಯೋತ್ಪಾದಕರನ್ನು ಹುಡುಕಲಾಗುತ್ತಿತ್ತು. ತಕ್ಷಣವೇ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಕರ್ನಲ್ ತಕ್ಷಣ ಮೃತಪಟ್ಟರು ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದರು. ಭಯೋತ್ಪಾದಕರನ್ನು ಲಷ್ಕರ್ ಎ ತೊಯ್ಬಾದ ದಿ ರೆಸಿಸ್ಟೆನ್ಸ್​ ಫ್ರಂಟ್​ನವರು ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:00 am, Fri, 15 September 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ