AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

One Nation One Election: ಒಂದು ರಾಷ್ಟ್ರ, ಒಂದು ಚುನಾವಣೆ, ಇಂದು ಕೋವಿಂದ್ ನೇತೃತ್ವದ​ ಸಮಿತಿಯ ಎರಡನೇ ಸಭೆ

ದೇಶದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ(One Nation One Election) ಕುರಿತು ದೆಹಲಿಯಲ್ಲಿ ಇಂದು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಮಿತಿಯ ಎರಡನೇ ಸಭೆ ನಡೆಯಲಿದೆ. ಸಮಿತಿಯು ಅಕ್ಟೋಬರ್ 25 ರಂದು ಕಾನೂನು ಆಯೋಗವನ್ನು ಆಹ್ವಾನಿಸಿದ್ದು, ಏಕಕಾಲದಲ್ಲಿ ಚುನಾವಣೆಗಳನ್ನು ಹೇಗೆ ನಡೆಸಬಹುದು ಎಂಬುದರ ಕುರಿತು ಅಭಿಪ್ರಾಯಗಳನ್ನು ಪಡೆಯಲು. ಈ ನಿಟ್ಟಿನಲ್ಲಿ ಕಾನೂನು ಆಯೋಗ ಮಾರ್ಗಸೂಚಿ ಹಂಚಿಕೊಳ್ಳಲಿದೆ.

One Nation One Election: ಒಂದು ರಾಷ್ಟ್ರ, ಒಂದು ಚುನಾವಣೆ, ಇಂದು ಕೋವಿಂದ್ ನೇತೃತ್ವದ​ ಸಮಿತಿಯ ಎರಡನೇ ಸಭೆ
ರಾಮನಾಥ್ ಕೋವಿಂದ್Image Credit source: ABP Live
ನಯನಾ ರಾಜೀವ್
|

Updated on:Oct 25, 2023 | 11:31 AM

Share

ದೇಶದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ(One Nation One Election) ಕುರಿತು ದೆಹಲಿಯಲ್ಲಿ ಇಂದು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಮಿತಿಯ ಎರಡನೇ ಸಭೆ ನಡೆಯಲಿದೆ. ಸಮಿತಿಯು ಅಕ್ಟೋಬರ್ 25 ರಂದು ಕಾನೂನು ಆಯೋಗವನ್ನು ಆಹ್ವಾನಿಸಿದ್ದು, ಏಕಕಾಲದಲ್ಲಿ ಚುನಾವಣೆಗಳನ್ನು ಹೇಗೆ ನಡೆಸಬಹುದು ಎಂಬುದರ ಕುರಿತು ಅಭಿಪ್ರಾಯಗಳನ್ನು ಪಡೆಯಲು. ಈ ನಿಟ್ಟಿನಲ್ಲಿ ಕಾನೂನು ಆಯೋಗ ಮಾರ್ಗಸೂಚಿ ಹಂಚಿಕೊಳ್ಳಲಿದೆ.

ಇದಕ್ಕೂ ಮುನ್ನ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ರಚಿಸಲಾಗಿರುವ ಸಮಿತಿಯ ಸಭೆ ನಡೆಯಲಿದೆ. ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಿಂದ ಈ ವ್ಯವಸ್ಥೆ ಕುರಿತು ಅಭಿಪ್ರಾಯ ಪಡೆಯಲು ನಿರ್ಧರಿಸಲಾಗಿದೆ.

ಮುಂದಿನ ಮೂರು ತಿಂಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಲಿಖಿತವಾಗಿ ನೀಡಲು ಸಮಿತಿಯು ಪಕ್ಷಗಳಿಗೆ ಆಯ್ಕೆಯನ್ನು ನೀಡಿದೆ. ಅದೇ ಸಮಯದಲ್ಲಿ ಕಾನೂನು ಆಯೋಗದ ಅಧ್ಯಕ್ಷ ರಿತುರಾಜ್ ಅವಸ್ತಿ ದೇಶದಲ್ಲಿ ಚುನಾವಣೆ ನಡೆಸಲು ಸರ್ಕಾರವು ಸಂವಿಧಾನದಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಒಂದು ರಾಷ್ಟ್ರ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಇಂದು ಸಭೆ

ಏಕಕಾಲಕ್ಕೆ ಚುನಾವಣೆ ಯಾವಾಗ?

ಒಂದು ದೇಶ, ಒಂದು ಚುನಾವಣೆಗೆ ಸಂಬಂಧಿಸಿದಂತೆ ತೀವ್ರ ಚರ್ಚೆಗಳು ನಡೆಯುತ್ತಿವೆ, ಆದರೆ ಅದು ಯಾವಾಗ ಕಾರ್ಯರೂಪಕ್ಕೆ ಬರುತ್ತದೆ ಎಂದು ಹೇಳುವುದು ಕಷ್ಟ. ಕಾನೂನು ಆಯೋಗದ ಅಧ್ಯಕ್ಷರು ಇನ್ನೂ ಟೈಮ್‌ಲೈನ್ ನೀಡಲು ಸಾಧ್ಯವಿಲ್ಲ ಅಥವಾ ಅದರ ಸಮಯವನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ರುತುರಾಜ್ ಅವಸ್ತಿ ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು 22 ನೇ ಕಾನೂನು ಆಯೋಗದ ಅಧ್ಯಕ್ಷರೂ ಆಗಿದ್ದಾರೆ. ದೇಶದಲ್ಲಿ ನಡೆಯಲಿರುವ ಚುನಾವಣೆಗಳನ್ನು ಸಾಲಿನಲ್ಲಿ ತರಬಹುದಾದ ಪ್ರಕ್ರಿಯೆಯ ಬಗ್ಗೆ ಸರ್ಕಾರಕ್ಕೆ ತಿಳಿಸಲು ಸರ್ಕಾರವು ಕಾನೂನು ಆಯೋಗಕ್ಕೆ ಜವಾಬ್ದಾರಿಯನ್ನು ವಹಿಸಿದೆ.

ಕಾನೂನು ಆಯೋಗದ ವರದಿ ಡಿಸೆಂಬರ್ 2022ರಲ್ಲಿ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾಪದ ಕುರಿತು ರಾಷ್ಟ್ರೀಯ ರಾಜಕೀಯ ಪಕ್ಷಗಳು, ಭಾರತೀಯ ಚುನಾವಣಾ ಆಯೋಗ, ಅಧಿಕಾರಿಗಳು, ಶಿಕ್ಷಣ ತಜ್ಞರು ಸೇರಿದಂತೆ ಮಧ್ಯಸ್ಥಗಾರರ ಅಭಿಪ್ರಾಯವನ್ನು ಪಡೆಯಲು 22 ನೇ ಕಾನೂನು ಆಯೋಗವು ಆರು ಪ್ರಶ್ನೆಗಳನ್ನು ಸಿದ್ಧಪಡಿಸಿದೆ.

ಆಯೋಗದ ವರದಿಯನ್ನು 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರಕಟಿಸುವ ನಿರೀಕ್ಷೆ ಇದ್ದು , ಕೇಂದ್ರ ಕಾನೂನು ಸಚಿವಾಲಯಕ್ಕೆ ಸಲ್ಲಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:30 am, Wed, 25 October 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?