AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ರಾಷ್ಟ್ರ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಇಂದು ಸಭೆ

One Nation One Election: ಒಂದು ರಾಷ್ಟ್ರ ಒಂದು ಚುನಾವಣೆ ಸಮಿತಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಈಗಾಗಲೇ ​​ಕೇಂದ್ರ ಸರ್ಕಾರ ರಚಿಸಿದೆ. ಇದೀಗ ಈ ಸಮಿತಿ ಮೊದಲು ಸಭೆಯನ್ನು ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಇಂದು (ಸೆ.23) ದೆಹಲಿಯಲ್ಲಿ ನಡೆಸಲಿದೆ.

ಒಂದು ರಾಷ್ಟ್ರ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಇಂದು ಸಭೆ
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಅಕ್ಷಯ್​ ಪಲ್ಲಮಜಲು​​
|

Updated on:Sep 23, 2023 | 11:24 AM

Share

ದೆಹಲಿ, ಸೆ.23: ಒಂದು ರಾಷ್ಟ್ರ ಒಂದು ಚುನಾವಣೆ (One Nation One Election) ಸಮಿತಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ನೇತೃತ್ವದಲ್ಲಿ ಈಗಾಗಲೇ ​​ಕೇಂದ್ರ ಸರ್ಕಾರ ರಚಿಸಿದೆ. ಇದೀಗ ಈ ಸಮಿತಿ ಮೊದಲು ಸಭೆಯನ್ನು ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಇಂದು (ಸೆ.23) ದೆಹಲಿಯಲ್ಲಿ ನಡೆಸಲಿದೆ. ಈ ಸಭೆಯಲ್ಲಿ ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಮಾಡುವ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಮತ್ತು ರಾಜಕೀಯ ನಾಯಕರ ಅಭಿಪ್ರಾಯ ಏನು? ಇದರ ಸಾಧಕ-ಭಾದಕಗಳೇನು? ಎಂಬುದರ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದರ ಜತೆಗೆ ಈ ಸಭೆಯಲ್ಲಿ ಸಮಿತಿಯು ಏಕಕಾಲದಲ್ಲಿ ಎಲ್ಲ ಚುನಾವಣೆಗಳನ್ನು ಹೇಗೆ ನಡೆಸುವುದು? ಇದರ ಮುಂದೆ ಇರುವ ಸವಾಲುಗಳೇನು? ಇದರಿಂದ ಎದುರಿಸಬೇಕಾದ ಸನ್ನಿವೇಶಗಳೇನು? ಎಂಬುದರ ಬಗ್ಗೆ ಚರ್ಚಿಸಲಿದೆ. ಹಂಗ್​​ ಅಸೆಂಬ್ಲಿ (ಯಾವುದೇ ರಾಜಕೀಯ ಪಕ್ಷ ಅಥವಾ ಮೈತ್ರಿ ಪಕ್ಷ ಸ್ಪಷ್ಟ ಬಹುಮತ ಪಡೆಯಲು ವಿಫಲವಾಗುವುದು) ಅಥವಾ ಅವಿಶ್ವಾಸ ನಿರ್ಣಯದ ಅಂಗೀಕಾರ ಸಂದರ್ಭಗಳನ್ನು ಹೇಗೆ ನಿಭಾಯಿಸುವುದು ಎಂಬುದರ ಬಗ್ಗೆಯು ಚರ್ಚೆ ನಡೆಸಲಾಗುವುದು.

ಇನ್ನು ಈ ಸಮಿತಿಯು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ನಡೆಸಬೇಕಾದರೆ ಅದರ ಚೌಕಟ್ಟು ಮತ್ತು ಅದರ ಕಾಲಮಿತಿ ಏನು ಎಂಬುದರ ಬಗ್ಗೆಯು ಈ ಸಭೆಯಲ್ಲಿ ಸೂಚಿಸಲಿದೆ. ಏಕಕಾಲದಲ್ಲಿ ನಡೆಸುವ ಚುನಾವಣೆಯ ಬಗ್ಗೆ ಕೆಲವೊಂದು ಅಧ್ಯಯನವನ್ನು ನಡೆಸಬೇಕಿದೆ. ನಂತರ ಈ ಬಗ್ಗೆ ಒಂದು ವರದಿಯನ್ನು ಸಿದ್ಧಪಡಿಸಲಿದೆ ಎಂದು ಖಾಸಗಿ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಸಮಿತಿಯ ಅಧ್ಯಕ್ಷ ರಾಮನಾಥ್ ಕೋವಿಂದ್ ಮಾಧ್ಯಮಗಳಿಗೆ ತಿಳಿಸಿದರು.

ಪ್ರಸ್ತುತ ದೇಶದಲ್ಲಿ ಚುನಾವಣೆ ಆಯೋಗ ರಾಜ್ಯ ವಿಧಾನಸಭೆಗಳಿಗೆ ಮತ್ತು ಲೋಕಸಭೆಗೆ ಪ್ರತ್ಯೇಕ ಚುನಾವಣೆಯನ್ನು ನಡೆಸುತ್ತಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಐದು ವರ್ಷಕ್ಕೊಮ್ಮೆ ನಡೆಸಲಾಗುತ್ತಿದೆ. ಇನ್ನು ರಾಜ್ಯಗಳು ತಮ್ಮ ಸ್ಥಳೀಯ ಆಡಳಿತ ( ನಗರಸಭೆ, ಗ್ರಾಮಪಂಚಾಯತ್​) ಚುನಾವಣೆಗಳನ್ನು ಕಾಲನುಸರವಾಗಿ ನಡೆಸುತ್ತದೆ. ಆದರೆ ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಗೆ ಬಂದರೆ ಲೋಕಸಭೆ, ವಿಧಾನಸಭೆ, ಸ್ಥಳೀಯ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿದೆ.

ಇದನ್ನೂ ಓದಿ:ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ಮೌನಮುರಿದ ರಾಹುಲ್ ಗಾಂಧಿ

ಒಂದು ರಾಷ್ಟ್ರ ಒಂದು ಚುನಾವಣೆ ಸಮಿತಿ ಸದಸ್ಯರು ಯಾರ‍್ಯಾರು?

ಒಂದು ರಾಷ್ಟ್ರ ಒಂದು ಚುನಾವಣೆ ಸಮಿತಿಯಲ್ಲಿ ಕೇಂದ್ರ ಗೃಹಸಚಿವ ಅಮಿತ್​​ ಶಾ, ಕಾಂಗ್ರೆಸ್ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ನಾಯಕ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ, ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಮತ್ತು ರಾಜ್ಯ ಸಚಿವ (ಕಾನೂನು) ಅರ್ಜುನ್ ರಾಮ್ ಮೇಘವಾಲ್ ಅವರನ್ನು ಒಳಗೊಂಡಿರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:19 am, Sat, 23 September 23

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!