AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

One Nation, One Election: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಪ್ರತಿಪಕ್ಷಗಳ ವಿರೋಧವೇಕೆ?

'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಯನ್ನು ಪ್ರತಿಪಕ್ಷಗಳ ನಾಯಕರು ಬಲವಾಗಿ ಟೀಕಿಸಿದ್ದಾರೆ, ಇದು ಆದ್ಯತೆಗಳನ್ನು ತಪ್ಪಾಗಿ ಇರಿಸುತ್ತದೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ ಎಂದು ವಾದಿಸಿದ್ದಾರೆ. ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯನ್ನು ಬಿಜೆಪಿ ಹಾಗೂ ಮಿತ್ರಪಕ್ಷಗಳು ಎಷ್ಟು ಸಮರ್ಥನೆ ಮಾಡಿಕೊಳ್ಳುತ್ತಿದೆಯೋ ವಿರೋಧ ಪಕ್ಷಗಳಿಂದ ಅಷ್ಟೇ ಖಂಡನೆಯೂ ವ್ಯಕ್ತವಾಗಿದೆ.

One Nation, One Election: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಪ್ರತಿಪಕ್ಷಗಳ ವಿರೋಧವೇಕೆ?
ಕಾಂಗ್ರೆಸ್ ನಾಯಕರು
ಸುಷ್ಮಾ ಚಕ್ರೆ
|

Updated on: Dec 12, 2024 | 8:45 PM

Share

ನವದೆಹಲಿ: ಭಾರತದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಉದ್ದೇಶದಿಂದ ಮಹತ್ವದ ಕ್ರಮವಾದ “ಒಂದು ರಾಷ್ಟ್ರ, ಒಂದು ಚುನಾವಣೆ” ಮಸೂದೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಈ ನಿರ್ಧಾರವನ್ನು ಅನುಸರಿಸಿ ಸಮಗ್ರ ಮಸೂದೆಯು ರಾಷ್ಟ್ರದಾದ್ಯಂತ ಏಕೀಕೃತ ಚುನಾವಣೆಗಳಿಗೆ ದಾರಿ ಮಾಡಿಕೊಡುವ ನಿರೀಕ್ಷೆಯಿದೆ. ಕಳೆದ ಬುಧವಾರ ಭಾರತದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಉಪಕ್ರಮದ ಕುರಿತು ಒಮ್ಮತವನ್ನು ನಿರ್ಮಿಸಬೇಕು, ಈ ವಿಷಯವು ರಾಜಕೀಯ ಹಿತಾಸಕ್ತಿಗಳನ್ನು ಮೀರಿದೆ ಮತ್ತು ಇಡೀ ರಾಷ್ಟ್ರಕ್ಕೆ ಇದರಿಂದ ಉಪಯೋಗವಾಗುತ್ತದೆ ಎಂದು ಒತ್ತಿ ಹೇಳಿದ್ದರು.

ಆದರೆ, ಅತಿದೊಡ್ಡ ವಿರೋಧ ಪಕ್ಷವಾದ ಕಾಂಗ್ರೆಸ್ ಈ ಪರಿಕಲ್ಪನೆಯನ್ನು ತಿರಸ್ಕರಿಸಿದೆ. ಕಾಂಗ್ರೆಸ್ ಮಾತ್ರವಲ್ಲ ಇತರ ವಿರೋಧ ಪಕ್ಷಗಳಾದ ಟಿಎಂಸಿ, ಡಿಎಂಕೆ ಮತ್ತು ಎಎಪಿ ಕೂಡ ಈ ಕಲ್ಪನೆಯನ್ನು ತೀವ್ರವಾಗಿ ವಿರೋಧಿಸಿವೆ. ಇದಕ್ಕೆ ಕಾರಣವೇನು? ಎಂಬ ಕುರಿತು ಮಾಹಿತಿ ಇಲ್ಲಿದೆ.

ಲೋಕಸಭೆ ಮತ್ತು ರಾಜ್ಯ ಅಸೆಂಬ್ಲಿಗಳಿಗೆ 1951ರಿಂದ 1967ರವರೆಗೆ ಪ್ರತಿ ಐದು ವರ್ಷಗಳಿಗೊಮ್ಮೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲಾಯಿತು. ದೇಶಾದ್ಯಂತ ಮತದಾರರು 1952, 1957, 1962 ಮತ್ತು 1967ರಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಸರ್ಕಾರಗಳಿಗೆ ಮತ ಚಲಾಯಿಸಿದರು. ಆದರೆ, ರಾಜ್ಯಗಳ ಮರುಸಂಘಟನೆ ಮತ್ತು ಹೊಸ ರಾಜ್ಯಗಳ ರಚನೆಯಿಂದಾಗಿ ಈ ವ್ಯವಸ್ಥೆಯು 1967ರ ನಂತರ ಕೊನೆಗೊಂಡಿತು. 1968-69ರ ಹೊತ್ತಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಪ್ರತ್ಯೇಕವಾಗಿ ಚುನಾವಣೆಗಳು ನಡೆದವು.

ಒಂದು ರಾಷ್ಟ್ರ, ಒಂದು ಚುನಾವಣೆ ಪರ ವಾದ:

ಏಕಕಾಲಿಕ ಚುನಾವಣೆಗಳ ಮುಖ್ಯ ವಾದವೆಂದರೆ ಪ್ರಸ್ತುತ ವ್ಯವಸ್ಥೆಯು ದೇಶವನ್ನು ನಿರಂತರ ಚುನಾವಣಾ ಮೋಡ್‌ನಲ್ಲಿ ಇರಿಸುತ್ತದೆ. ಕೆಲವು ರಾಜ್ಯಗಳಲ್ಲಿ, ಪಂಚಾಯತ್‌ಗಳು, ಸ್ಥಳೀಯ ಸಂಸ್ಥೆಗಳು, ರಾಜ್ಯ ವಿಧಾನಸಭೆಗಳು ಮತ್ತು ಸಾರ್ವತ್ರಿಕ ಚುನಾವಣೆಗಳಿಗೆ ವಾರ್ಷಿಕವಾಗಿ 200-300 ದಿನಗಳು ತೆಗೆದುಕೊಳ್ಳುತ್ತದೆ. ಈ ನಿರಂತರ ಚುನಾವಣಾ ಚಕ್ರವು ಸಾರ್ವಜನಿಕ ಭಾಷಣದಲ್ಲಿ ಪ್ರಾಬಲ್ಯ ಸಾಧಿಸುತ್ತದೆ, ಇದು ಸಾಮಾನ್ಯವಾಗಿ ಧ್ರುವೀಕರಣದ ಸಮಸ್ಯೆಗಳು, ದ್ವೇಷ ಭಾಷಣ ಮತ್ತು ರಾಜಕೀಯ ಪೈಪೋಟಿಗೆ ಕಾರಣವಾಗುತ್ತದೆ. ಇದು ಮಾದರಿ ನೀತಿ ಸಂಹಿತೆಯ ದೀರ್ಘಾವಧಿಯ ಹೇರಿಕೆಗೆ ಕಾರಣವಾಗುತ್ತದೆ. ಇದರಿಂದಾಗಿ ಸರ್ಕಾರಿ ಕಾರ್ಯಗಳನ್ನು ಸ್ಥಗಿತಗೊಳಿಸಬೇಕಾಗುತ್ತದೆ. ಆಗಾಗ ನಡೆಯುವ ಚುನಾವಣೆಗಳು ರಾಜಕಾರಣಿಗಳನ್ನು ದೀರ್ಘಾವಧಿಯ ಯೋಜನೆಯಿಂದ ದೂರವಿಡುತ್ತವೆ. ಸರ್ಕಾರಿ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗಳು ತಮ್ಮ ನಿಯಮಿತ ಜವಾಬ್ದಾರಿಗಳಿಗಿಂತ ಚುನಾವಣಾ ಕರ್ತವ್ಯಗಳ ಮೇಲೆ ಹೆಚ್ಚು ಗಮನಹರಿಸುವಂತೆ ಮಾಡುತ್ತದೆ.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ ಎಂದರೇನು?; ಈ ಹಿಂದೆ ಏಕಕಾಲಿಕ ಮತದಾನ ನಡೆದಿತ್ತಾ?

ಮತ್ತೊಂದು ಪ್ರಮುಖ ವಾದವೆಂದರೆ, ಚುನಾವಣೆಗೆ ಹೆಚ್ಚಿನ ಖರ್ಚು ಮಾಡುವುದು ವ್ಯಾಪಕ ಭ್ರಷ್ಟಾಚಾರಕ್ಕೂ ಕಾರಣವಾಗುತ್ತದೆ. ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಗೆ ನೀಡಿದ ತನ್ನ ಪ್ರಸ್ತುತಿಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ಬಲವಾಗಿ ಬೆಂಬಲಿಸಿದೆ. ಸ್ಥಳೀಯ ಸಂಸ್ಥೆಗಳು, ರಾಜ್ಯ ಮತ್ತು ಸಂಸತ್ತಿಗೆ ಸಿಂಕ್ರೊನೈಸ್ ಮಾಡಿದ ಚುನಾವಣೆಗಳು ಸವಾಲಾಗಿದ್ದರೂ, ಇದು ವೆಚ್ಚವನ್ನು ಉಳಿಸಲು ಮತ್ತು ಆರ್ಥಿಕತೆಗೆ ಲಾಭವನ್ನು ನೀಡುತ್ತದೆ ಎಂದು ಅದು ಹೇಳಿದೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧದ ವಾದ:

ಅತಿದೊಡ್ಡ ವಿರೋಧ ಪಕ್ಷವಾದ ಕಾಂಗ್ರೆಸ್ ಈ ಕಲ್ಪನೆಯನ್ನು ತಿರಸ್ಕರಿಸಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿದ್ದ ಅಧೀರ್ ರಂಜನ್ ಚೌಧರಿ ಅವರು ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಗೆ ರಾಜೀನಾಮೆ ನೀಡಿದ್ದರು. ಏಕೆಂದರೆ ಅದರ ಆದೇಶವು ಸಮಸ್ಯೆಯ ಸಾಧಕ-ಬಾಧಕಗಳನ್ನು ಕಂಡುಹಿಡಿಯುವುದಲ್ಲ. ಅದರ ಬದಲಾಗಿ ಏಕಕಾಲದಲ್ಲಿ ಚುನಾವಣೆಗಳನ್ನು ಜಾರಿಗೊಳಿಸುವ ಮಾರ್ಗಗಳನ್ನು ಸೂಚಿಸುವುದು ಎಂಬುದು ಅವರ ವಾದವಾಗಿತ್ತು.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ; ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ 11 ಪ್ರಸ್ತಾವನೆಗಳಿವು

ಈ ಮಸೂದೆಯ ವಿರುದ್ಧದ ಮುಖ್ಯ ವಾದವೆಂದರೆ, ಅದು ಪ್ರಾದೇಶಿಕ ಮತ್ತು ಸ್ಥಳೀಯ ಕಾಳಜಿಗಳನ್ನು ಅಂಚಿನಲ್ಲಿಡುತ್ತದೆ. ಏಕಕಾಲಿಕ ಮತದಾನಗಳಲ್ಲಿ ದೊಡ್ಡ ರಾಷ್ಟ್ರೀಯ ಮಟ್ಟದ ಸಮಸ್ಯೆಗಳಿಂದ ಸ್ಥಳೀಯ ಮತ್ತು ಪ್ರಾದೇಶಿಕ ಸಮಸ್ಯೆಗಳು ಮುನ್ನಲೆಗೆ ಬರುವುದೇ ಇಲ್ಲ. ಇದರಿಂದ ಸಣ್ಣ ಪಕ್ಷಗಳು ಮತ್ತು ರಾಜ್ಯಗಳಿಗೆ ತಮ್ಮ ಆಲೋಚನೆಗಳನ್ನು ರಾಷ್ಟ್ರದ ಮುಂದೆ ಇಡಲು ಕಷ್ಟವಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ