AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನ್​​ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಒಬ್ಬ ಭಯೋತ್ಪಾದಕನ ಹತ್ಯೆ ಮಾಡಿದ ಭದ್ರತಾ ಪಡೆ

ಜಮ್ಮು-ಕಾಶ್ಮೀರದಾದ್ಯಂತ ಉಗ್ರ ಚಟುವಟಿಕೆಗಳನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿವೆ. 2022ರ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 15 ಎನ್​ಕೌಂಟರ್​ಗಳು ನಡೆದಿದ್ದು, 25 ಉಗ್ರರನ್ನು ಹತ್ಯೆ ಮಾಡಲಾಗಿದೆ.

ಶೋಪಿಯಾನ್​​ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಒಬ್ಬ ಭಯೋತ್ಪಾದಕನ ಹತ್ಯೆ ಮಾಡಿದ ಭದ್ರತಾ ಪಡೆ
ಎನ್​​ಕೌಂಟರ್​ ನಡೆಯುತ್ತಿರುವ ಸ್ಥಳ
TV9 Web
| Edited By: |

Updated on:Feb 19, 2022 | 1:22 PM

Share

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ (Shopian In Jammu Kashmir)​ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೂ  ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ (Encounter Between Terrorists and Security Force) ನಡೆಯುತ್ತಿದ್ದು, ಒಬ್ಬ ಉಗ್ರನನ್ನು ಭದ್ರತಾ ಪಡೆ ಸಿಬ್ಬಂದಿ ಹತ್ಯೆಗೈದಿದ್ದಾರೆ.  ಶೋಪಿಯಾನ್​​ದ ಝೇನಾಪೋರಾ ಎಂಬ ಏರಿಯಾದಲ್ಲಿರುವ ಚೆರ್ಮಾರ್ಗ್​ ಎಂಬಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಪಡೆದ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದರು. ಹಾಗೇ, ಉಗ್ರರಿಗಾಗಿ ಹುಡುಕಾಟವೂ ಶುರುವಾಗಿತ್ತು. ಅಡಗಿದ್ದ ಉಗ್ರರೂ ಕೂಡ ಗುಂಡಿನ ದಾಳಿ ಶುರು ಮಾಡಿದರು. ಹೀಗಾಗಿ ಭದ್ರತಾ ಪಡೆಗಳೂ ಪ್ರತಿಯಾಗಿ ದಾಳಿ ಶುರುಮಾಡಬೇಕಾಯಿತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಾದ್ಯಂತ ಉಗ್ರ ಚಟುವಟಿಕೆಗಳನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿವೆ. 2022ರ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 15 ಎನ್​ಕೌಂಟರ್​ಗಳು ನಡೆದಿದ್ದು, 25 ಉಗ್ರರನ್ನು ಹತ್ಯೆ ಮಾಡಲಾಗಿದೆ. ಅದರಲ್ಲಿ ಮೂವರು ಉಗ್ರ ಸಂಘಟನೆಗಳ ಉನ್ನತ ಕಮಾಂಡರ್​ಗಳಾಗಿದ್ದು, ಎಂಟು ಪಾಕಿಸ್ತಾನಿ ಉಗ್ರರಾಗಿದ್ದಾರೆ. ಹಾಗೇ, 13 ಭಯೋತ್ಪಾದಕರನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದ್ದು, 23 ಮಂದಿ, ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ್ದವರನ್ನೂ ಬಂಧಿಸಲಾಗಿದೆ. ಹಾಗೇ, ಸೆರೆ ಹಿಡಿದ ಮತ್ತು ಕೊಲ್ಲಲ್ಪಟ್ಟ ಭಯೋತ್ಪಾದಕರಿಂದ ಭರ್ಜರಿ ಪ್ರಮಾಣದ ಮಾರಕಾಸ್ತ್ರಗಳನ್ನೂ ಸೇನೆ ವಶಪಡಿಸಿಕೊಂಡಿದೆ ಎಂದೂ ಸೇನಾ ಮೂಲಗಳು ತಿಳಿಸಿವೆ.

ಲಷ್ಕರ್ ಇ ತೊಯ್ಬಾದ ಅಂಗಸಂಸ್ಥೆ ದಿ ರೆಸಿಸ್ಟೆನ್ಸ್​ ಫ್ರಂಟ್​ಗೆ ನೆರವು ನೀಡುತ್ತಿದ್ದ ನಾಲ್ವರು ಉಗ್ರರನ್ನು ಕಳೆದವಾರ ಶ್ರೀನಗರದಿಂದ ಪೊಲೀಸರು ಬಂಧಿಸಿದ್ದಾರೆ. ಇವರು ಕಾಶ್ಮೀರ ಕಣಿವೆಯಲ್ಲಿ ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿದ್ದರು. ಭಯೋತ್ಪಾದಕರ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಜತೆ ಇನ್ನಿತರ ಸಹಾಯ ಮಾಡುತ್ತಿದ್ದರು.  ಪಾಕಿಸ್ತಾನಿ ಭಯೋತ್ಪಾದಕರ ಮೇಲುಸ್ತುವಾರಿಯಲ್ಲಿ ಇಲ್ಲಿ ಕೆಲಸ ನಡೆಯುತ್ತಿತ್ತು ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮಸಾಲಾ ಮಜ್ಜಿಗೆಯ ಸಿಂಪಲ್​ ರೆಸಿಪಿ ಇಲ್ಲಿದೆ

Published On - 1:14 pm, Sat, 19 February 22

Follow Us
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!