AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನ್​​ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಒಬ್ಬ ಭಯೋತ್ಪಾದಕನ ಹತ್ಯೆ ಮಾಡಿದ ಭದ್ರತಾ ಪಡೆ

ಜಮ್ಮು-ಕಾಶ್ಮೀರದಾದ್ಯಂತ ಉಗ್ರ ಚಟುವಟಿಕೆಗಳನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿವೆ. 2022ರ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 15 ಎನ್​ಕೌಂಟರ್​ಗಳು ನಡೆದಿದ್ದು, 25 ಉಗ್ರರನ್ನು ಹತ್ಯೆ ಮಾಡಲಾಗಿದೆ.

ಶೋಪಿಯಾನ್​​ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಒಬ್ಬ ಭಯೋತ್ಪಾದಕನ ಹತ್ಯೆ ಮಾಡಿದ ಭದ್ರತಾ ಪಡೆ
ಎನ್​​ಕೌಂಟರ್​ ನಡೆಯುತ್ತಿರುವ ಸ್ಥಳ
TV9 Web
| Updated By: Lakshmi Hegde|

Updated on:Feb 19, 2022 | 1:22 PM

Share

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ (Shopian In Jammu Kashmir)​ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೂ  ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ (Encounter Between Terrorists and Security Force) ನಡೆಯುತ್ತಿದ್ದು, ಒಬ್ಬ ಉಗ್ರನನ್ನು ಭದ್ರತಾ ಪಡೆ ಸಿಬ್ಬಂದಿ ಹತ್ಯೆಗೈದಿದ್ದಾರೆ.  ಶೋಪಿಯಾನ್​​ದ ಝೇನಾಪೋರಾ ಎಂಬ ಏರಿಯಾದಲ್ಲಿರುವ ಚೆರ್ಮಾರ್ಗ್​ ಎಂಬಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಪಡೆದ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದರು. ಹಾಗೇ, ಉಗ್ರರಿಗಾಗಿ ಹುಡುಕಾಟವೂ ಶುರುವಾಗಿತ್ತು. ಅಡಗಿದ್ದ ಉಗ್ರರೂ ಕೂಡ ಗುಂಡಿನ ದಾಳಿ ಶುರು ಮಾಡಿದರು. ಹೀಗಾಗಿ ಭದ್ರತಾ ಪಡೆಗಳೂ ಪ್ರತಿಯಾಗಿ ದಾಳಿ ಶುರುಮಾಡಬೇಕಾಯಿತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಾದ್ಯಂತ ಉಗ್ರ ಚಟುವಟಿಕೆಗಳನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿವೆ. 2022ರ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 15 ಎನ್​ಕೌಂಟರ್​ಗಳು ನಡೆದಿದ್ದು, 25 ಉಗ್ರರನ್ನು ಹತ್ಯೆ ಮಾಡಲಾಗಿದೆ. ಅದರಲ್ಲಿ ಮೂವರು ಉಗ್ರ ಸಂಘಟನೆಗಳ ಉನ್ನತ ಕಮಾಂಡರ್​ಗಳಾಗಿದ್ದು, ಎಂಟು ಪಾಕಿಸ್ತಾನಿ ಉಗ್ರರಾಗಿದ್ದಾರೆ. ಹಾಗೇ, 13 ಭಯೋತ್ಪಾದಕರನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದ್ದು, 23 ಮಂದಿ, ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ್ದವರನ್ನೂ ಬಂಧಿಸಲಾಗಿದೆ. ಹಾಗೇ, ಸೆರೆ ಹಿಡಿದ ಮತ್ತು ಕೊಲ್ಲಲ್ಪಟ್ಟ ಭಯೋತ್ಪಾದಕರಿಂದ ಭರ್ಜರಿ ಪ್ರಮಾಣದ ಮಾರಕಾಸ್ತ್ರಗಳನ್ನೂ ಸೇನೆ ವಶಪಡಿಸಿಕೊಂಡಿದೆ ಎಂದೂ ಸೇನಾ ಮೂಲಗಳು ತಿಳಿಸಿವೆ.

ಲಷ್ಕರ್ ಇ ತೊಯ್ಬಾದ ಅಂಗಸಂಸ್ಥೆ ದಿ ರೆಸಿಸ್ಟೆನ್ಸ್​ ಫ್ರಂಟ್​ಗೆ ನೆರವು ನೀಡುತ್ತಿದ್ದ ನಾಲ್ವರು ಉಗ್ರರನ್ನು ಕಳೆದವಾರ ಶ್ರೀನಗರದಿಂದ ಪೊಲೀಸರು ಬಂಧಿಸಿದ್ದಾರೆ. ಇವರು ಕಾಶ್ಮೀರ ಕಣಿವೆಯಲ್ಲಿ ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿದ್ದರು. ಭಯೋತ್ಪಾದಕರ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಜತೆ ಇನ್ನಿತರ ಸಹಾಯ ಮಾಡುತ್ತಿದ್ದರು.  ಪಾಕಿಸ್ತಾನಿ ಭಯೋತ್ಪಾದಕರ ಮೇಲುಸ್ತುವಾರಿಯಲ್ಲಿ ಇಲ್ಲಿ ಕೆಲಸ ನಡೆಯುತ್ತಿತ್ತು ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮಸಾಲಾ ಮಜ್ಜಿಗೆಯ ಸಿಂಪಲ್​ ರೆಸಿಪಿ ಇಲ್ಲಿದೆ

Published On - 1:14 pm, Sat, 19 February 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?