AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಗುರುತಿನ ಚೀಟಿ, ಸ್ವಂತ ಮೊಬೈಲ್​ ನಂಬರ್ ಇಲ್ಲದವರು ಕೊರೊನಾ ಲಸಿಕೆ ಪಡೆಯಲು ಹೀಗೆ ಮಾಡಿ: ಆರೋಗ್ಯ ಸಚಿವಾಲಯ ಸ್ಪಷ್ಟನೆ

Covid Vaccination: ಲಸಿಕೆ ಪಡೆಯಲು ತಾಂತ್ರಿಕ ಜ್ಞಾನವಿಲ್ಲದವರಿಗೆ ಸಾಧ್ಯವಾಗುತ್ತಿಲ್ಲ ಎನ್ನುವುದು ನಿರಾಧಾರ ವರದಿಗಳಾಗಿದ್ದು, ಕೊರೊನಾ ಲಸಿಕೆ ತೆಗೆದುಕೊಳ್ಳಲು ಸ್ಮಾರ್ಟ್​ಫೋನ್​ ಇರಬೇಕು ಎನ್ನುವುದಾಗಲಿ ಅಥವಾ ವಿಳಾಸದ ದಾಖಲೆ ಸಲ್ಲಿಸಬೇಕೆಂಬುದಾಗಲಿ ಕಡ್ಡಾಯವಲ್ಲ.

ಯಾವುದೇ ಗುರುತಿನ ಚೀಟಿ, ಸ್ವಂತ ಮೊಬೈಲ್​ ನಂಬರ್ ಇಲ್ಲದವರು ಕೊರೊನಾ ಲಸಿಕೆ ಪಡೆಯಲು ಹೀಗೆ ಮಾಡಿ: ಆರೋಗ್ಯ ಸಚಿವಾಲಯ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
TV9 Web
| Updated By: Skanda|

Updated on: Jun 24, 2021 | 9:13 AM

Share

ದೆಹಲಿ: ಭಾರತದಲ್ಲಿ ಎರಡನೇ ಅಲೆ ಕ್ಷೀಣಿಸುತ್ತಿದೆ. ಆದರೆ, ಸೆಪ್ಟೆಂಬರ್​-ಅಕ್ಟೋಬರ್​ ತಿಂಗಳ ಅವಧಿಯಲ್ಲಿ ಮೂರನೇ ಅಲೆ ಅಪ್ಪಳಿಸುವುದು ನಿಶ್ಚಿತ ಎಂದು ತಜ್ಞರು ಎಚ್ಚರಿಸಿರುವ ಕಾರಣ ಆರೋಗ್ಯ ಸಚಿವಾಲಯ ದೇಶದ ಎಲ್ಲಾ ನಾಗರೀಕರಿಗೂ ಅಷ್ಟರೊಳಗೆ ಮೊದಲ ಡೋಸ್ ಕೊರೊನಾ ಲಸಿಕೆಯನ್ನಾದರೂ ನೀಡಿ ಅಪಾಯದ ದವಡೆಯಿಂದ ಪಾರಾಗಬೇಕೆಂದು ಶತಾಯುಗತಾಯ ಪ್ರಯತ್ನಿಸುತ್ತಿದೆ. ಆದ್ದರಿಂದ ಲಸಿಕೆ ವಿತರಣೆಯನ್ನು ಮತ್ತಷ್ಟು ಸುಗಮಗೊಳಿಸಲಾಗುತ್ತಿದ್ದು, ಜನರಲ್ಲಿ ಆ ಕುರಿತಾಗಿ ಎದ್ದಿರುವ ಗೊಂದಲಗಳನ್ನು ಶಮನಗೊಳಿಸಲು ಸರ್ಕಾರ ಮುಂದಾಗಿದೆ. ನಿನ್ನೆ (ಜೂನ್ 23) ಕೊರೊನಾ ಲಸಿಕೆ ನೋಂದಾವಣಿ ಕುರಿತು ಮಾತನಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ನಿರ್ಗತಿಕರು ಹಾಗೂ ದಾಖಲೆಗಳಿಲ್ಲದವರು ಲಸಿಕೆ ಪಡೆಯುವುದು ಸಾಧ್ಯವಿಲ್ಲ. ತಂತ್ರಜ್ಞಾನ ಬಳಕೆ ಬಗ್ಗೆ ಅರಿವಿಲ್ಲದವರೂ ಲಸಿಕೆಯಿಂದ ವಂಚಿತರಾಗುತ್ತಿದ್ದಾರೆ ಎಂಬ ಕೆಲ ಮಾಧ್ಯಮಗಳ ವರದಿಗಳನ್ನು ತಳ್ಳಿಹಾಕಿದೆ.

ಕೊರೊನಾ ಲಸಿಕೆ ಪಡೆಯಲು ಆನ್​ಲೈನ್ ಮೂಲಕ ಅಥವಾ ಡಿಜಿಟಲ್ ವಿಧಾನದಲ್ಲಿ ನೋಂದಾವಣಿ ಮಾಡಿಸಿಕೊಳ್ಳಬೇಕಿದ್ದು, ಆಂಗ್ಲಭಾಷೆ ಗೊತ್ತಿಲ್ಲದೇ ಇರುವುದು, ಸ್ಮಾರ್ಟ್​ಫೋನ್ ಅಥವಾ ಕಂಪ್ಯೂಟರ್ ಬಳಕೆಯ ಅರಿವಿಲ್ಲದೇ ಇರುವುದು, ಇಂಟರ್ನೆಟ್ ಸೌಲಭ್ಯವಿಲದಿರುವುದು ಲಸಿಕೆ ಪಡೆಯಲು ಹಿನ್ನೆಡೆ ಉಂಟುಮಾಡುವ ಅಂಶಗಳಾಗಿವೆ ಎಂದು ಕೆಲ ವರದಿಗಳಲ್ಲಿ ಉಲ್ಲೇಖಿಸಲಾಗಿತ್ತು. ಆದರೆ, ಇದನ್ನು ಸ್ಪಷ್ಟವಾಗಿ ನಿರಾಕರಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ ‘ಲಸಿಕೆ ಪಡೆಯಲು ಆನ್​ಲೈನ್​ನಲ್ಲಿ ಕೊವಿನ್​ ಪೋರ್ಟಲ್​ ಮೂಲಕ ಮುಂಚಿತವಾಗಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಲ್ಲ’ ಎಂದು ತಿಳಿಸಿದೆ.

ಲಸಿಕೆ ಪಡೆಯಲು ತಾಂತ್ರಿಕ ಜ್ಞಾನವಿಲ್ಲದವರಿಗೆ ಸಾಧ್ಯವಾಗುತ್ತಿಲ್ಲ ಎನ್ನುವುದು ನಿರಾಧಾರ ವರದಿಗಳಾಗಿದ್ದು, ಕೊರೊನಾ ಲಸಿಕೆ ತೆಗೆದುಕೊಳ್ಳಲು ಸ್ಮಾರ್ಟ್​ಫೋನ್​ ಇರಬೇಕು ಎನ್ನುವುದಾಗಲಿ ಅಥವಾ ವಿಳಾಸದ ದಾಖಲೆ ಸಲ್ಲಿಸಬೇಕೆಂಬುದಾಗಲಿ ಕಡ್ಡಾಯವಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಹೀಗಾಗಿ ಯಾವುದೇ ವ್ಯಕ್ತಿ ಆನ್​ಲೈನ್​ ಮೂಲಕ ನೋಂದಾಯಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕಾಗಲೀ ಅಥವಾ ಸೂಕ್ತ ದಾಖಲೆಗಳಿಲ್ಲ ಎಂಬ ಕಾರಣಕ್ಕಾಗಲೀ ಲಸಿಕೆಯಿಂದ ದೂರ ಉಳಿಯಬಾರದು ಎನ್ನುವುದನ್ನು ತಿಳಿಸಲಾಗಿದೆ.

ಇನ್ನು ಆಂಗ್ಲಭಾಷೆ ಅರ್ಥ ಮಾಡಿಕೊಳ್ಳುವುದು ಕಷ್ಟವಾದ ಕಾರಣಕ್ಕೆ ಲಸಿಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವಾಲಯ, ಕೊವಿನ್​ ಪೋರ್ಟಲ್​ ಭಾರತೀಯ ಭಾಷೆಗಳಲ್ಲೂ ಲಭ್ಯವಿದೆ. ಒಟ್ಟು 12 ಭಾಷೆಗಳು ಪೋರ್ಟಲ್​ನಲ್ಲಿ ಲಭ್ಯವಿದ್ದು ಕನ್ನಡ, ಮಲಯಾಳಂ, ತಮಿಳು, ತೆಲುಗು, ಮರಾಠಿ, ಬೆಂಗಾಳಿ, ಅಸ್ಸಾಮಿ, ಪಂಜಾಬಿ, ಒಡಿಯಾ, ಗುಜರಾತಿ, ಹಿಂದಿ, ಇಂಗ್ಲಿಷ್ ಮೂಲಕ ಮಾಹಿತಿ ನೀಡಲಾಗುತ್ತಿದೆ ಎಂದು ಸ್ಪಷ್ಟೀಕರಿಸಿದೆ. ಕೊರೊನಾ ಲಸಿಕೆ ಪಡೆಯಲು ಆಧಾರ್ ಚೀಟಿ, ಮತದಾರರ ಚೀಟಿ, ಫೋಟೋ ಹೊಂದಿದ ಪಡಿತರ ಚೀಟಿ, ವಿಶೇಷ ಚೇತನರ ಗುರುತಿನ ಚೀಟಿ ಸೇರಿದಂತೆ ಒಟ್ಟು ಒಂಬತ್ತು ಬಗೆಯ ದಾಖಲಾತಿಗಳಲ್ಲಿ ಯಾವುದಾದರೂ ಒಂದನ್ನು ತೋರಿಸಬಹುದು. ಒಂದುವೇಳೆ ಒಂಬತ್ತರಲ್ಲಿ ಯಾವುದೂ ಇಲ್ಲವೆಂದಾದರೂ ಅಂತಹವರಿಗೆ ಲಸಿಕೆ ನೀಡಲು ಸರ್ಕಾರ ವಿಶೇಷ ಅಭಿಯಾನವನ್ನೇ ಮಾಡುತ್ತಿದೆ. ಸ್ವಂತ ಮೊಬೈಲ್​ ಫೋನ್ ಇಲ್ಲವೆನ್ನುವವರಿಗೂ ಲಸಿಕೆ ನೀಡುವ ವ್ಯವಸ್ಥೆ ಇದೆ. ದಾಖಲೆಗಳಿದ್ದೂ ಆನ್​ಲೈನ್​ ನೋಂದಣಿ ಮಾಡಿಸಿಕೊಳ್ಳದಿದ್ದವರು ಸಹ ಲಸಿಕೆ ಪಡೆಯಲು ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳಬಹುದು ಎಂದು ಇದೇ ವೇಳೆ ಸಚಿವಾಲಯದಿಂದ ಹೇಳಿಕೆ ನೀಡಲಾಗಿದೆ.

ಇದನ್ನೂ ಓದಿ: ಸೆಪ್ಟೆಂಬರ್​ ಹೊತ್ತಿಗೆ ಮಕ್ಕಳಿಗೂ ಕೊರೊನಾ ಲಸಿಕೆ ಲಭ್ಯವಾಗಲಿದೆ: ಡಾ.ರಣದೀಪ್​ ಗುಲೇರಿಯಾ 

ದೇಶದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಕೊಟ್ಟು ಮುಗಿಯಲು ಎಷ್ಟು ದಿನ ಬೇಕು?-ಇಲ್ಲಿದೆ ನೋಡಿ ಒಂದು ಲೆಕ್ಕಾಚಾರ

Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ