AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra 2021: ಅಮರನಾಥ ದೇಗುಲದಲ್ಲಿ ವರ್ಚ್ಯುವಲ್ ದರ್ಶನ, ಆರತಿ ಇಂದಿನಿಂದ ಪ್ರಾರಂಭ..

ಪ್ರಸಕ್ತ ವರ್ಷ ಮೊದಲು ಒಂದು ಬಾರಿ ಅಮರನಾಥ ಯಾತ್ರೆ ಮುಂದೂಡಲ್ಪಟ್ಟಿತ್ತು. ಆದರೆ ಬಳಿಕ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಅಮರನಾಥ ದೇವಸ್ಥಾನದ ಮಂಡಳಿಯೊಂದಿಗೆ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.

Amarnath Yatra 2021: ಅಮರನಾಥ ದೇಗುಲದಲ್ಲಿ ವರ್ಚ್ಯುವಲ್ ದರ್ಶನ, ಆರತಿ ಇಂದಿನಿಂದ ಪ್ರಾರಂಭ..
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Jun 28, 2021 | 1:32 PM

Share

ಶ್ರೀನಗರ: ಈ ವರ್ಷ ಕೊವಿಡ್​ 19 ಕಾರಣದಿಂದಾಗಿ ಅಮರನಾಥ ಯಾತ್ರೆ ರದ್ದುಗೊಂಡಿದ್ದು, ಆನ್​ಲೈನ್​ನಲ್ಲಿ ದೇವರ ದರ್ಶನ ಪಡೆದು, ಆರತಿ ನೆರವೇರಿಸಲು ಅವಕಾಶ ಮಾಡಿಕೊಡಲಾಗಿದೆ. ಅಮರನಾಥ ಯಾತ್ರೆ ಹಿಂದುಗಳ ಪವಿತ್ರ ಯಾತ್ರೆಯಲ್ಲೊಂದಾಗಿದೆ. ಕೊವಿಡ್​ 19 ಸೋಂಕಿನ ಕಾರಣದಿಂದ ಕಳೆದ ವರ್ಷವೂ ಅಮರನಾಥ ಯಾತ್ರೆ ರದ್ದಾಗುತ್ತಿದೆ. ಆದರೆ ಭಕ್ತರಿಗೆ ನಿರಾಸೆ ಆಗದಿರಲೆಂದು ಇಂದಿನಿಂದಲೇ ವರ್ಚ್ಯುವಲ್​ ಆರತಿ ಮತ್ತು ದರ್ಶನ ವ್ಯವಸ್ಥೆ ಮಾಡಲಾಗಿದೆ.

ಈ ವರ್ಷ ಅಮರನಾಥ ಯಾತ್ರೆ ಸಾಂಕೇತಿಕವಾಗಿ ನಡೆಯಲಿದೆ. ಇಲ್ಲಿನ ಗುಹೆಗೆ ಸಂಬಂಧಪಟ್ಟ ಎಲ್ಲ ಧಾರ್ಮಿಕ ಕಾರ್ಯಕ್ರಮಗಳೂ ವರ್ಚ್ಯುವಲ್​ ಆಗಿಯೇ ನೆರವೇರಲಿದೆ ಎಂದು ಜೂನ್​ 21ರಂದು ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ಹೇಳಿದ್ದರು.

ಆನ್​ಲೈನ್ ಆರತಿ ಜೂ.28ರಿಂದ ಆಗಸ್ಟ್​ 22ರವರೆಗೆ ದಿನದಲ್ಲಿ ಒಂದು ತಾಸು ನಡೆಯಲಿದೆ. ಮುಂಜಾನೆ 6ರಿಂದ 6.30ರವರೆಗೆ ಮತ್ತು ಸಂಜೆ 5.30ರವರೆಗೆ ಕಾಲಾವಕಾಶ ಕೊಡಲಾಗಿದೆ. ಇದು ಶ್ರೀ ಅಮರನಾಥ್​ ಜಿ ವೆಬ್​ಸೈಟ್​, ಆ್ಯಪ್​ ಮತ್ತು ಎಂಎಚ್​ 1 ಪ್ರೈಮ್​​ನಲ್ಲಿ ನೇರಪ್ರಸಾರ ಆಗಲಿದೆ.

ಪ್ರಸಕ್ತ ವರ್ಷ ಮೊದಲು ಒಂದು ಬಾರಿ ಅಮರನಾಥ ಯಾತ್ರೆ ಮುಂದೂಡಲ್ಪಟ್ಟಿತ್ತು. ಆದರೆ ಬಳಿಕ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಅಮರನಾಥ ದೇವಸ್ಥಾನದ ಮಂಡಳಿಯೊಂದಿಗೆ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮನೋಜ್​ ಸಿನ್ಹಾ ಟ್ವೀಟ್ ಮಾಡಿದ್ದರು. ಹಿಮಾಲಯದ ಮೇಲಿರುವ ಅಮರನಾಥ ದೇಗುಲಕ್ಕೆ ಯಾತ್ರೆ ಈ ಬಾರಿ ಜೂನ್​ 28ರಿಂದ ಪಹಲ್ಗಾಮ್​ ಮತ್ತು ಬಲ್ಟಾಲ್​ ಮಾರ್ಗದಲ್ಲಿ ಪ್ರಾರಂಭವಾಗಲಿತ್ತು. ಹಾಗೇ ಆಗಸ್ಟ್​22ರಂದು ಮುಕ್ತಾಯಗೊಳ್ಳಬೇಕಿತ್ತು.

ಇದನ್ನೂ ಓದಿ:ಲಾಕ್‌ಡೌನ್‌ ತೆರವಾದರೂ ಸುಧಾರಿಸಿಲ್ಲ ನೇಕಾರರ ಬದುಕು; ಬಾಗಲಕೋಟೆಯಲ್ಲಿ ನೇಯ್ದ ಬಟ್ಟೆ ಮನೆಯಲ್ಲೇ ರಾಶಿ 

ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ