AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra 2021: ಅಮರನಾಥ ದೇಗುಲದಲ್ಲಿ ವರ್ಚ್ಯುವಲ್ ದರ್ಶನ, ಆರತಿ ಇಂದಿನಿಂದ ಪ್ರಾರಂಭ..

ಪ್ರಸಕ್ತ ವರ್ಷ ಮೊದಲು ಒಂದು ಬಾರಿ ಅಮರನಾಥ ಯಾತ್ರೆ ಮುಂದೂಡಲ್ಪಟ್ಟಿತ್ತು. ಆದರೆ ಬಳಿಕ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಅಮರನಾಥ ದೇವಸ್ಥಾನದ ಮಂಡಳಿಯೊಂದಿಗೆ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.

Amarnath Yatra 2021: ಅಮರನಾಥ ದೇಗುಲದಲ್ಲಿ ವರ್ಚ್ಯುವಲ್ ದರ್ಶನ, ಆರತಿ ಇಂದಿನಿಂದ ಪ್ರಾರಂಭ..
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 28, 2021 | 1:32 PM

Share

ಶ್ರೀನಗರ: ಈ ವರ್ಷ ಕೊವಿಡ್​ 19 ಕಾರಣದಿಂದಾಗಿ ಅಮರನಾಥ ಯಾತ್ರೆ ರದ್ದುಗೊಂಡಿದ್ದು, ಆನ್​ಲೈನ್​ನಲ್ಲಿ ದೇವರ ದರ್ಶನ ಪಡೆದು, ಆರತಿ ನೆರವೇರಿಸಲು ಅವಕಾಶ ಮಾಡಿಕೊಡಲಾಗಿದೆ. ಅಮರನಾಥ ಯಾತ್ರೆ ಹಿಂದುಗಳ ಪವಿತ್ರ ಯಾತ್ರೆಯಲ್ಲೊಂದಾಗಿದೆ. ಕೊವಿಡ್​ 19 ಸೋಂಕಿನ ಕಾರಣದಿಂದ ಕಳೆದ ವರ್ಷವೂ ಅಮರನಾಥ ಯಾತ್ರೆ ರದ್ದಾಗುತ್ತಿದೆ. ಆದರೆ ಭಕ್ತರಿಗೆ ನಿರಾಸೆ ಆಗದಿರಲೆಂದು ಇಂದಿನಿಂದಲೇ ವರ್ಚ್ಯುವಲ್​ ಆರತಿ ಮತ್ತು ದರ್ಶನ ವ್ಯವಸ್ಥೆ ಮಾಡಲಾಗಿದೆ.

ಈ ವರ್ಷ ಅಮರನಾಥ ಯಾತ್ರೆ ಸಾಂಕೇತಿಕವಾಗಿ ನಡೆಯಲಿದೆ. ಇಲ್ಲಿನ ಗುಹೆಗೆ ಸಂಬಂಧಪಟ್ಟ ಎಲ್ಲ ಧಾರ್ಮಿಕ ಕಾರ್ಯಕ್ರಮಗಳೂ ವರ್ಚ್ಯುವಲ್​ ಆಗಿಯೇ ನೆರವೇರಲಿದೆ ಎಂದು ಜೂನ್​ 21ರಂದು ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ಹೇಳಿದ್ದರು.

ಆನ್​ಲೈನ್ ಆರತಿ ಜೂ.28ರಿಂದ ಆಗಸ್ಟ್​ 22ರವರೆಗೆ ದಿನದಲ್ಲಿ ಒಂದು ತಾಸು ನಡೆಯಲಿದೆ. ಮುಂಜಾನೆ 6ರಿಂದ 6.30ರವರೆಗೆ ಮತ್ತು ಸಂಜೆ 5.30ರವರೆಗೆ ಕಾಲಾವಕಾಶ ಕೊಡಲಾಗಿದೆ. ಇದು ಶ್ರೀ ಅಮರನಾಥ್​ ಜಿ ವೆಬ್​ಸೈಟ್​, ಆ್ಯಪ್​ ಮತ್ತು ಎಂಎಚ್​ 1 ಪ್ರೈಮ್​​ನಲ್ಲಿ ನೇರಪ್ರಸಾರ ಆಗಲಿದೆ.

ಪ್ರಸಕ್ತ ವರ್ಷ ಮೊದಲು ಒಂದು ಬಾರಿ ಅಮರನಾಥ ಯಾತ್ರೆ ಮುಂದೂಡಲ್ಪಟ್ಟಿತ್ತು. ಆದರೆ ಬಳಿಕ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಅಮರನಾಥ ದೇವಸ್ಥಾನದ ಮಂಡಳಿಯೊಂದಿಗೆ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮನೋಜ್​ ಸಿನ್ಹಾ ಟ್ವೀಟ್ ಮಾಡಿದ್ದರು. ಹಿಮಾಲಯದ ಮೇಲಿರುವ ಅಮರನಾಥ ದೇಗುಲಕ್ಕೆ ಯಾತ್ರೆ ಈ ಬಾರಿ ಜೂನ್​ 28ರಿಂದ ಪಹಲ್ಗಾಮ್​ ಮತ್ತು ಬಲ್ಟಾಲ್​ ಮಾರ್ಗದಲ್ಲಿ ಪ್ರಾರಂಭವಾಗಲಿತ್ತು. ಹಾಗೇ ಆಗಸ್ಟ್​22ರಂದು ಮುಕ್ತಾಯಗೊಳ್ಳಬೇಕಿತ್ತು.

ಇದನ್ನೂ ಓದಿ:ಲಾಕ್‌ಡೌನ್‌ ತೆರವಾದರೂ ಸುಧಾರಿಸಿಲ್ಲ ನೇಕಾರರ ಬದುಕು; ಬಾಗಲಕೋಟೆಯಲ್ಲಿ ನೇಯ್ದ ಬಟ್ಟೆ ಮನೆಯಲ್ಲೇ ರಾಶಿ 

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ