AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕಾಗಿ ಆನ್​​ಲೈನ್ ಬುಕಿಂಗ್ ಆರಂಭ

Sabarimala ಶಬರಿಮಲೆಯಲ್ಲಿ ಯಾತ್ರಾರ್ಥಿಗಳ ದಟ್ಟಣೆಯನ್ನು ನಿಯಂತ್ರಿಸುವ ಇತರ ಮಾರ್ಗಸೂಚಿಗಳು, ಸಭೆಯಲ್ಲಿ ರೂಪಿಸಲಾದ ವರ್ಚುವಲ್ ಕ್ಯೂ ವ್ಯವಸ್ಥೆ ಮುಂದುವರಿಯುತ್ತದೆ.ಎರಡು ಲಸಿಕೆ ಡೋಸ್ ತೆಗೆದುಕೊಂಡವರು ಅಥವಾ ಋಣಾತ್ಮಕ ಆರ್‌ಟಿ-ಪಿಸಿಆರ್ ವರದಿಯನ್ನು ಹೊಂದಿರುವವರಿಗೆ ಮಾತ್ರ ದೇಗುಲ ಪ್ರವೇಶಕ್ಕೆ ಅನುಮತಿ ನೀಡಲಾಗುವುದು.

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕಾಗಿ ಆನ್​​ಲೈನ್ ಬುಕಿಂಗ್ ಆರಂಭ
ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರು (ಶಬರಿಮಲೆ ಯ ವೆಬ್​​ಸೈಟ್)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 12, 2021 | 1:16 PM

ಪತ್ತನಂತಿಟ್ಟ: ಕೇರಳದ ಪ್ರಸಿದ್ಧ ಶಬರಿಮಲೆ ದೇಗುಲದಲ್ಲಿ(Sabarimala shrine) ಮಂಡಲ-ಮಕರವಿಳಕ್ಕು (Mandala-Makaravilakku) ಆನ್​​ಲೈನ್ ಬುಕಿಂಗ್ ಆರಂಭವಾಗಿದೆ. ಸೋಮವಾರದಿಂದ ಬುಕಿಂಗ್ ಆರಂಭವಾಗಿದೆ ಎಂದು ದಿನಮಲರ್ ಮತ್ತು ಇತರ ಸ್ಥಳೀಯ ಪ್ರಕಟಣೆಗಳು ವರದಿ ಮಾಡಿವೆ. ಮಂಡಲ-ಮಕರವಿಳಕ್ಕಿನ ಯಾತ್ರಾ ಕಾಲವು ನವೆಂಬರ್ 16 ರಿಂದ ಆರಂಭವಾಗುತ್ತದೆ ಮತ್ತು ಆರಂಭಿಕ ದಿನಗಳಲ್ಲಿ ಕೇವಲ 25,000 ಭಕ್ತರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗುತ್ತದೆ. ಭಕ್ತರ ಸಂಬಂಧಿತ ವಿವರಗಳು ಮತ್ತು ಫೋಟೊಗಳನ್ನು ಅಪ್‌ಲೋಡ್ ಮಾಡುವ ಮೂಲಕ ಶಬರಿಮಲೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬುಕಿಂಗ್ ಮಾಡಬಹುದು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ರಾಜ್ಯದ ಕೊವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಈ ತಿಂಗಳ ಆರಂಭದಲ್ಲಿ ನಡೆದ ಸಭೆಯ ನಂತರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತೀರ್ಥಯಾತ್ರೆಯ ಸಮಯದಲ್ಲಿ ಭಕ್ತರ ಪ್ರವೇಶದ ಬಗ್ಗೆ ನಿರ್ಧಾರ ಕೈಗೊಂಡರು. ಇದರಲ್ಲಿ ದೇವಸ್ವಂ, ಸಾರಿಗೆ, ಅರಣ್ಯ, ಆರೋಗ್ಯ ಮತ್ತು ಜಲ ಸಂಪನ್ಮೂಲಗಳ ರಾಜ್ಯ ಮಂತ್ರಿಗಳು ಹಾಗೂ ರಾಜ್ಯ ಪೊಲೀಸ್ ಮುಖ್ಯಸ್ಥರು ಭಾಗವಹಿಸಿದ್ದರು.

ಶಬರಿಮಲೆಯಲ್ಲಿ ಯಾತ್ರಾರ್ಥಿಗಳ ದಟ್ಟಣೆಯನ್ನು ನಿಯಂತ್ರಿಸುವ ಇತರ ಮಾರ್ಗಸೂಚಿಗಳು, ಸಭೆಯಲ್ಲಿ ರೂಪಿಸಲಾದ ವರ್ಚುವಲ್ ಕ್ಯೂ ವ್ಯವಸ್ಥೆ ಮುಂದುವರಿಯುತ್ತದೆ.ಎರಡು ಲಸಿಕೆ ಡೋಸ್ ತೆಗೆದುಕೊಂಡವರು ಅಥವಾ ಋಣಾತ್ಮಕ ಆರ್‌ಟಿ-ಪಿಸಿಆರ್ ವರದಿಯನ್ನು ಹೊಂದಿರುವವರಿಗೆ ಮಾತ್ರ ದೇಗುಲ ಪ್ರವೇಶಕ್ಕೆ ಅನುಮತಿ ನೀಡಲಾಗುವುದು.

ಸಭೆಯಲ್ಲಿ ದೇವಸ್ವಂ ಬೋರ್ಡ್ ಎಲ್ಲರಿಗೂ ‘ನೆಯ್ಯಭಿಷೇಕ’ (ತುಪ್ಪದ ಅಭಿಷೇಕ) ನೀಡಲು ವ್ಯವಸ್ಥೆ ಮಾಡಬೇಕು ಮತ್ತು ದರ್ಶನದ ನಂತರ ಭಕ್ತರನ್ನು ಸನ್ನಿಧಾನದಲ್ಲಿ ಉಳಿಯಲು ಅನುಮತಿಸಲಾಗುವುದಿಲ್ಲ ಎಂಬ ತೀರ್ಮಾನ ಕೈಗೊಳ್ಳಲಾಗಿದೆ.

ಈ ನಿರ್ಬಂಧಗಳ ಹೊರತಾಗಿ ವಾಹನಗಳನ್ನು ನಿಲಕಲ್​​ವರೆಗೆ ಮಾತ್ರ ಅನುಮತಿಸಲಾಗುತ್ತದೆ ಮತ್ತು ಅಲ್ಲಿಂದ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಪಂಪಾ ನದಿಗೆ ತಲುಪಲು ಬಳಸಬೇಕು.ಅಲ್ಲಿ ಸ್ನಾನಕ್ಕೆ ಅನುಮತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಕೊವಿಡ್ -19 ಪಾಸಿಟಿವ್ ಅಲ್ಲದ, ಆದರೆ ಇತರ ರೋಗಗಳಿಂದ ಬಳಲುತ್ತಿದ್ದರೆ ಭಕ್ತರು ಆರೋಗ್ಯ ತಪಾಸಣೆಯ ನಂತರವೇ ಯಾತ್ರೆಗೆ ಬರಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಕಳೆದ 24 ಗಂಟೆಗಳಲ್ಲಿ ಕೇರಳವು 6,996 ಹೊಸ ಕೊವಿಡ್ -19 ಪ್ರಕರಣಗಳನ್ನು ದಾಖಲಿಸಿದೆ ಎಂದು ರಾಜ್ಯ ಸರ್ಕಾರದ ಆರೋಗ್ಯ ಬುಲೆಟಿನ್ ಸೋಮವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 84 ಕೊವಿಡ್ ಸಂಬಂಧಿತ ಸಾವುಗಳು ಮತ್ತು 16,576 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ 1,01,419 ಸಕ್ರಿಯ ಕೊವಿಡ್ -19 ಪ್ರಕರಣಗಳಿವೆ. ಆಗಸ್ಟ್‌ನಲ್ಲಿ ಓಣಂ ಹಬ್ಬದ ನಂತರದ 30,000 ಪ್ರಕರಣಗಳನ್ನು ದಾಟಿದ ನಂತರ ರಾಜ್ಯವು ದಿನನಿತ್ಯದ ಹೊಸ ಪ್ರಕರಣಗಳಲ್ಲಿ ಇಳಿಕೆಯನ್ನು ತೋರಿಸುತ್ತಿದೆ.

ಏತನ್ಮಧ್ಯೆ, ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು, ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಶೇಕಡಾ 80 ಕ್ಕಿಂತಲೂ ಹೆಚ್ಚು ಜನರು ಕೊವಿಡ್ -19 ಪ್ರತಿಕಾಯಗಳನ್ನು ಹೊಂದಿದ್ದಾರೆ ಎಂದು ಎಲ್‌ಡಿಎಫ್ ಸರ್ಕಾರ ನಡೆಸಿದ ಇತ್ತೀಚಿನ ಸೆರೋ ಅಧ್ಯಯನದ ವರದಿ ಹೇಳಿದೆ ಎಂದಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಸಮೀಕ್ಷೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸುತ್ತಿದ್ದರು.

ಲಾಗಿನ್​ ಆಗಿ ದರ್ಶನ ಟಿಕೆಟ್​ ಕಾಯ್ದಿರಿಸಲು ಲಿಂಕ್ : https://sabarimalaonline.org/#/login

ಇದನ್ನೂ ಓದಿ: ‘ಕಾಶ್ಮೀರ ನಮ್ಮದು..’-ಅಲೈ-ಖೈದಾ ಹೆಸರಲ್ಲಿ ಫೇಕ್​ ವಿಡಿಯೋಗಳನ್ನು ಬಿಡುಗಡೆ ಮಾಡುತ್ತಿದ್ದಾರೆ ಪಾಕ್​ ಉಗ್ರರು !

Published On - 1:00 pm, Tue, 12 October 21

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು