AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಜೂಜಿನ ಗೀಳು, ಒಡವೆಗಾಗಿ ವೃದ್ಧೆಯನ್ನು ಕೊಂದು, ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ

ಸಾಲ ತೀರಿಸಲು ದರೋಡೆ ಮಾಡಿ ವೃದ್ಧೆಯನ್ನು ಹತ್ಯೆ ಮಾಡಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 35 ವರ್ಷದ ವ್ಯಕ್ತಿಯೊಬ್ಬ 74 ವರ್ಷದ ಮಹಿಳೆಯನ್ನು ಕೊಂದು ಚಿನ್ನಾಭರಣ ಕದಿಯಲು ಯತ್ನಿಸಿದ ಘಟನೆ ನಡೆದಿದೆ.

ಆನ್​ಲೈನ್​ ಜೂಜಿನ ಗೀಳು, ಒಡವೆಗಾಗಿ ವೃದ್ಧೆಯನ್ನು ಕೊಂದು, ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ
ನಯನಾ ರಾಜೀವ್
|

Updated on: Aug 19, 2024 | 2:00 PM

Share

ಆನ್​ಲೈನ್​ ಜೂಜಿನ ಗೀಳು ಹತ್ತಿಸಿಕೊಂಡಿದ್ದ ವ್ಯಕ್ತಿಯೊಬ್ಬ ಒಡವೆಗಾಗಿ ವೃದ್ಧೆಯನ್ನು ಕೊಂದು, ಮನೆಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 35 ವರ್ಷದ ವ್ಯಕ್ತಿಯೊಬ್ಬ 74 ವರ್ಷದ ಮಹಿಳೆಯನ್ನು ಕೊಂದು ಚಿನ್ನಾಭರಣ ಕದಿಯಲು ಯತ್ನಿಸಿದ ಘಟನೆ ನಡೆದಿದೆ.

ಅಪರಾಧ ಮಾಡಿದ ನಂತರ, ಸಾಕ್ಷ್ಯ ನಾಶಪಡಿಸಲು ಮನೆಗೆ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿಮನ್ಯು ಗುಪ್ತಾ ಒಬ್ಬಂಟಿಯಾಗಿರುವ ಸೇವಾಮೇರಿ ಅಗಸ್ಟಿನ್ ನಡಾರ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಗಸ್ಟ್ 14 ರಂದು ಜಟೆವಾಡದಲ್ಲಿ ಈ ಘಟನೆ ನಡೆದಿದೆ ಎಂದು ಭಿವಂಡಿ ತಾಲೂಕು ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಸೇವಾಮೇರಿ ಅಗಸ್ಟಿನ್ ನಾಡಾರ್ ಒಬ್ಬಳೇ ಇದ್ದಾಗ ಆಕೆಯ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ನಂತರ ಮನೆಯನ್ನು ಲೂಟಿ ಮಾಡಿ ಆಕೆಯ ಚಿನ್ನಾಭರಣಗಳನ್ನು ದೋಚಿದ್ದರು. ಬಳಿಕ ಸಾಕ್ಷ್ಯ ನಾಶಪಡಿಸಲು ಮನೆಗೆ ಬೆಂಕಿ ಹಚ್ಚಿದ್ದರು. ಆದರೆ ಪೊಲೀಸರು ಶನಿವಾರ ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಮತ್ತಷ್ಟು ಓದಿ: ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ

ಆತ ಆನ್​ಲೈನ್ ಜೂಜಿನ ಚಟ ಹೊಂದಿದ್ದು, 2 ಲಕ್ಷ ರೂ. ಸಾಲ ಮಾಡಿದ್ದ ಎಂಬುದು ತಿಳಿದುಬಂದಿದೆ. ಹೇಗಾದರೂ ಹಣ ಗಳಿಸಬೇಕೆಂದು ಮನೆಯನ್ನು ಲೂಟಿ ಮಾಡಿದ್ದಾನೆ. ಆರೋಪಿ ಸೇವಾಮೇರಿ ಅಗಸ್ಟಿನ್ ನಾಡರ್ ಅವರ ಪುತ್ರ ನಡೆಸುತ್ತಿದ್ದ ಡೈರಿಯಲ್ಲಿ ಕೆಲಸ ಮಾಡುತ್ತಿದ್ದ. ಅವರನ್ನು ಆಗಸ್ಟ್ 28ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಇಂಥದ್ದೇ ಮತ್ತೊಂದು ಘಟನೆ ಆನ್​ಲೈನ್ ಗೇಮಿನ ಚಟಕ್ಕೆ ಬಲಿಯಾಗಿದ್ದ ವ್ಯಕ್ತಿ ಉತ್ತರ ಪ್ರದೇಶದಲ್ಲಿ ತನ್ನ ತಾಯಿಯನ್ನು ಹತ್ಯೆ ಮಾಡಿದ್ದ, ತಾಯಿಯ ವಿಮೆಯನ್ನು ಪಡೆದು ಸಾಲವನ್ನು ತೀರಿಸಲು ಹೊಂಚು ಹಾಕಿದ್ದ ಎನ್ನಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್