AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರ!

ದೆಹಲಿ: ನೆರೆಯ ಚೀನಾ ಹುಟ್ಟುಹಾಕಿರುವ ಡ್ರ್ಯಾಗನ್ ವೈರಸ್​ ಇಡೀ ಜಗತ್ತಿನಲ್ಲೇ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ಆದ್ರೆ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಲಾಕ್​ಡೌನ್​​ ಮಾರ್ಗಸೂಚಿಗಳು ಇತರೆ ದೇಶಗಳಿಗೂ ದಾರಿದೀಪವಾಗಿ ಗೋಚರಿಸಿದೆ. ಹಾಗಾಗಿ ಲಾಕ್​ಡೌ​ನ್ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ, ಲಾಕ್​ಡೌನ್​ನಿಂದ ತಕ್ಷಣಕ್ಕೆ ಜನಜೀವನ ಏರುಪೇರಾಗಿದೆ. ಜನಕ್ಕೂ ಈ ಲಾಕ್​ಡೌನ್​ ಸಾಕಪ್ಪಾ ಅನಿಸಿದೆ. ಆದ್ರೆ ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ […]

ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 27, 2020 | 1:53 PM

Share

ದೆಹಲಿ: ನೆರೆಯ ಚೀನಾ ಹುಟ್ಟುಹಾಕಿರುವ ಡ್ರ್ಯಾಗನ್ ವೈರಸ್​ ಇಡೀ ಜಗತ್ತಿನಲ್ಲೇ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ಆದ್ರೆ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಲಾಕ್​ಡೌನ್​​ ಮಾರ್ಗಸೂಚಿಗಳು ಇತರೆ ದೇಶಗಳಿಗೂ ದಾರಿದೀಪವಾಗಿ ಗೋಚರಿಸಿದೆ.

ಹಾಗಾಗಿ ಲಾಕ್​ಡೌ​ನ್ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ, ಲಾಕ್​ಡೌನ್​ನಿಂದ ತಕ್ಷಣಕ್ಕೆ ಜನಜೀವನ ಏರುಪೇರಾಗಿದೆ. ಜನಕ್ಕೂ ಈ ಲಾಕ್​ಡೌನ್​ ಸಾಕಪ್ಪಾ ಅನಿಸಿದೆ. ಆದ್ರೆ ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರವಾಗಲಿದೆ.

ಈ ಬಗ್ಗೆ ಇಂದು ನಡೆದ ಪ್ರಧಾನಿ ಮೋದಿ ವಿಡಿಯೋ ಸಂವಾದ ಸುಳಿವು ನೀಡಿದೆ. ದೇಶದಲ್ಲಿ 300 ಜಿಲ್ಲೆ ಕೊರೊನಾ ಮುಕ್ತವಾಗಿವೆ‌. ಹಾಗಾಗಿ 300 ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ಸಿಗಲಿದೆ. ಇನ್ನು, 127 ಜಿಲ್ಲೆಗಳು ರೆಡ್ ಜೋನ್​ನಲ್ಲಿವೆ‌. 127 ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ಸಿಗಲ್ಲ‌. 297 ಜಿಲ್ಲೆಗಳಲ್ಲಿ ಐದಕ್ಕಿಂತ ಹೆಚ್ಚಿನ ಕೊರೊನಾ ಪಾಸಿಟಿವ್ ಪ್ರಕರಣಗಳಿವೆ‌. ಅಲ್ಲಿ ಬಿಲ್ಕುಲ್ ಲಾಕ್​ಡೌನ್​ಗೆ ವಿನಾಯ್ತಿ ಇಲ್ಲವೇ ಇಲ್ಲ.

ಆಯಾ ರಾಜ್ಯಗಳು ತಮ್ಮ ರಾಜ್ಯದಲ್ಲಿನ ಕೊರೊನಾ ಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ವಿನಾಯಿತಿ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು . ಹೀಗಾಗಿ ಕೊರೊನಾ ಪಾಸಿಟಿವ್ ಪ್ರಕರಣ ಕಡಿಮೆ ಇರುವ ಜಿಲ್ಲೆಯಲ್ಲಿ ಲಾಕ್ ಡೌನ್ ವಿನಾಯಿತಿ ನೀಡುವುದು ರಾಜ್ಯದ ವಿವೇಚನೆಗೆ ಬಿಟ್ಟ ವಿಚಾರ ಎಂದು ತಿಳಿದುಬಂದಿದೆ.

Published On - 1:45 pm, Mon, 27 April 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ