AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir Inauguration: ರಾಮಲಲ್ಲಾ ಪ್ರಾಣಪ್ರತಿಷ್ಠೆ ದಿನ ಒಪಿಡಿ ಸೇವೆಗಳು ಮುಂದುವರೆಯುತ್ತೆ, ರಜೆ ಆದೇಶ ಹಿಂಪಡೆದ ಏಮ್ಸ್​

ಅಯೋಧ್ಯೆ(Ayodhya)ಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರ(Ram Mandir)ದ ಪ್ರಾಣಪ್ರತಿಷ್ಠೆಯಂದು ಆಸ್ಪತ್ರೆಯ ಒಪಿಡಿಗಳು ತೆರೆದಿರಲಿವೆ ಎಂದು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(AIIMS)ಹೇಳಿದ್ದು, ರಜೆ ಆದೇಶವನ್ನು ಹಿಂಪಡೆದಿದೆ. ರಾಮಲಲ್ಲಾ ಅವರ ಪಟ್ಟಾಭಿಷೇಕ ಸಮಾರಂಭವು ಪ್ರಧಾನಿಯವರ ಸಮ್ಮುಖದಲ್ಲಿ ಜನವರಿ 22ರಂದು ನಡೆಯಲಿದ್ದು, ಆಸ್ಪತ್ರೆಯು ಈ ಹಿಂದೆ ಮಧ್ಯಾಹ್ನ 2.30 ರವರೆಗೆ ಒಪಿಡಿ ಸೇವೆಯನ್ನು ನಿಲ್ಲಿಸಲು ನಿರ್ಧರಿಸಿತ್ತು, ಆದರೆ ಈಗ ಆಸ್ಪತ್ರೆ ತನ್ನ ಆದೇಶವನ್ನು ಹಿಂಪಡೆದಿದೆ.

Ram Mandir Inauguration: ರಾಮಲಲ್ಲಾ ಪ್ರಾಣಪ್ರತಿಷ್ಠೆ ದಿನ ಒಪಿಡಿ ಸೇವೆಗಳು ಮುಂದುವರೆಯುತ್ತೆ, ರಜೆ ಆದೇಶ ಹಿಂಪಡೆದ ಏಮ್ಸ್​
ಏಮ್ಸ್​Image Credit source: India Today
ನಯನಾ ರಾಜೀವ್
| Updated By: Digi Tech Desk|

Updated on:Jan 22, 2024 | 11:28 AM

Share

ಅಯೋಧ್ಯೆ(Ayodhya)ಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರ(Ram Mandir)ದ ಪ್ರಾಣಪ್ರತಿಷ್ಠೆಯಂದು ಆಸ್ಪತ್ರೆಯ ಒಪಿಡಿಗಳು ತೆರೆದಿರಲಿವೆ ಎಂದು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(AIIMS)ಹೇಳಿದ್ದು, ರಜೆ ಆದೇಶವನ್ನು ಹಿಂಪಡೆದಿದೆ. ರಾಮಲಲ್ಲಾ ಅವರ ಪಟ್ಟಾಭಿಷೇಕ ಸಮಾರಂಭವು ಪ್ರಧಾನಿಯವರ ಸಮ್ಮುಖದಲ್ಲಿ ಜನವರಿ 22ರಂದು ನಡೆಯಲಿದ್ದು, ಆಸ್ಪತ್ರೆಯು ಈ ಹಿಂದೆ ಮಧ್ಯಾಹ್ನ 2.30 ರವರೆಗೆ ಒಪಿಡಿ ಸೇವೆಯನ್ನು ನಿಲ್ಲಿಸಲು ನಿರ್ಧರಿಸಿತ್ತು, ಆದರೆ ಈಗ ಆಸ್ಪತ್ರೆ ತನ್ನ ಆದೇಶವನ್ನು ಹಿಂಪಡೆದಿದೆ.

ಇದರಿಂದ ನಾಳೆಯೂ ರೋಗಿಗಳು ಒಪಿಡಿ ಸೇವೆ ಪಡೆಯಬಹುದು ಎಂಬುದು ಸ್ಪಷ್ಟವಾಗಿದೆ. ಹೊಸ ಆದೇಶದಲ್ಲಿ, ರೋಗಿಗಳು ಮತ್ತು ಅವರ ಕುಟುಂಬಗಳಿಗೆ ಯಾವುದೇ ರೀತಿಯ ಅನಾನುಕೂಲತೆ ಉಂಟಾಗದಂತೆ ರೋಗಿಗಳ ಆರೈಕೆಗಾಗಿ ಜನವರಿ 22 ರಂದು ಏಮ್ಸ್ ದಿನವಿಡೀ ತೆರೆದಿರುತ್ತದೆ ಎಂದು ಆಸ್ಪತ್ರೆ ತಿಳಿಸಿದೆ.

ಈ ಮೂಲಕ ನಾಳೆ ಸೋಮವಾರವೂ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯ ಹಾಗೂ ಚಿಕಿತ್ಸೆ ನೀಡಲಾಗುವುದು. ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ಅರ್ಧ ದಿನ ರಜೆ ನೀಡಲಾಗುವುದು ಎಂದು ಆಸ್ಪತ್ರೆ ತನ್ನ ಹಿಂದಿನ ಆದೇಶದಲ್ಲಿ ತಿಳಿಸಿತ್ತು. ಆದರೆ ಈಗ ಈ ನಿರ್ಧಾರವನ್ನು ಹಿಂಪಡೆಯಲಾಗಿದೆ.

ಮತ್ತಷ್ಟು ಓದಿ: ರಾಮಸೇತು ನಿರ್ಮಾಣವಾದ ರಾಮೇಶ್ವರಂನಲ್ಲಿ ಶ್ರೀರಾಮನ ಪಾದದ ಗುರುತುಗಳಿಗೆ ಮೋದಿ ಪೂಜೆ

ಏಮ್ಸ್ ಹೊರತಾಗಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಕೂಡ ಇದೇ ನಿರ್ಧಾರ ಕೈಗೊಂಡಿತ್ತು. ದೆಹಲಿಯ ಲೋಹಿಯಾ ಆಸ್ಪತ್ರೆ ಈ ನಿರ್ಧಾರವನ್ನು ಹಿಂತೆಗೆದುಕೊಂಡಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಖಚಿತವಾದ ಮಾಹಿತಿ ಇನ್ನೂ ಹೊರಹೊಮ್ಮಿಲ್ಲ.

ಆದಾಗ್ಯೂ, ಎರಡೂ ಆಸ್ಪತ್ರೆಗಳು ಹಿಂದಿನ ನಿರ್ಧಾರದಲ್ಲೂ ತುರ್ತು ಸೇವೆಗಳನ್ನು ಒದಗಿಸುವ ಬಗ್ಗೆ ಮಾತನಾಡಿದ್ದವು. ರಾಮ ಮಂದಿರದ ಆಚರಣೆಯ ವಿಚಾರಕ್ಕೆ ಬಂದರೆ, ಮೈಸೂರಿನಿಂದ ಬಂದಿರುವ ಅರುಣ್ ಯೋಗಿರಾಜ್ ಅವರು ರಾಮಲಲ್ಲಾ ವಿಗ್ರಹವನ್ನು ಕೆತ್ತಿದ್ದಾರೆ, ರಾಮಲಲ್ಲಾ ವಿಗ್ರಹವು 51 ಇಂಚು ಎತ್ತರ ಮತ್ತು ಸುಮಾರು ಒಂದೂವರೆ ಟನ್ ತೂಕವಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:31 pm, Sun, 21 January 24

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ