AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ಯ ಏನಿದ್ರೂ ಪರವಾಗಿಲ್ಲ, ತಾಜ್​ಮಹಲ್​ನ 22 ಕೊಠಡಿಗಳ ಬೀಗ ತೆರೆಸಿ: ಹೈಕೋರ್ಟ್​ಗೆ​ ಅರ್ಜಿ ಸಲ್ಲಿಸಿದ ಬಿಜೆಪಿ ನಾಯಕ

ಲಖನೌ: ತಾಜ್​ಮಹಲ್​ ಕುರಿತ ಸತ್ಯ ಎಲ್ಲರಿಗೂ ಅರ್ಥವಾಗಬೇಕು. ತಾಜ್​ಮಹಲ್​ನ ಯಥಾರ್ಥ ಇತಿಹಾಸವನ್ನು ಜನರ ಎದುರು ತೆರೆದಿಡಲು ಸತ್ಯಶೋಧನ ಸಮಿತಿ ರಚಿಸಬೇಕು. ಸದಾ ಬೀಗ ಹಾಕಿರುವ 22 ಕೊಠಡಿಗಳ ಬೀಗಗಳನ್ನು ತೆರೆಯಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಬಿಜೆಪಿ ಅಯೋಧ್ಯೆ ಘಟಕದ ಮಾಧ್ಯಮ ಪ್ರಮುಖ್ ರಜನೀಶ್ ಸಿಂಗ್ ಈ ಸಂಬಂಧ ಅಲಹಾಬಾದ್ ಹೈಕೋರ್ಟ್​ನ ಲಖನೌ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಾಥಮಿಕ ಪರಿಶೀಲನೆಯ ನಂತರ ಈ ಅರ್ಜಿಯು ವಿಚಾರಣೆಗೆ ಬರಲಿದೆ. ‘ಸತ್ಯ ಏನಿದ್ದರೂ ಸರಿ, ಅದು ಜನರಿಗೆ […]

ಸತ್ಯ ಏನಿದ್ರೂ ಪರವಾಗಿಲ್ಲ, ತಾಜ್​ಮಹಲ್​ನ 22 ಕೊಠಡಿಗಳ ಬೀಗ ತೆರೆಸಿ: ಹೈಕೋರ್ಟ್​ಗೆ​ ಅರ್ಜಿ ಸಲ್ಲಿಸಿದ ಬಿಜೆಪಿ ನಾಯಕ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: May 09, 2022 | 3:47 PM

ಲಖನೌ: ತಾಜ್​ಮಹಲ್​ ಕುರಿತ ಸತ್ಯ ಎಲ್ಲರಿಗೂ ಅರ್ಥವಾಗಬೇಕು. ತಾಜ್​ಮಹಲ್​ನ ಯಥಾರ್ಥ ಇತಿಹಾಸವನ್ನು ಜನರ ಎದುರು ತೆರೆದಿಡಲು ಸತ್ಯಶೋಧನ ಸಮಿತಿ ರಚಿಸಬೇಕು. ಸದಾ ಬೀಗ ಹಾಕಿರುವ 22 ಕೊಠಡಿಗಳ ಬೀಗಗಳನ್ನು ತೆರೆಯಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಬಿಜೆಪಿ ಅಯೋಧ್ಯೆ ಘಟಕದ ಮಾಧ್ಯಮ ಪ್ರಮುಖ್ ರಜನೀಶ್ ಸಿಂಗ್ ಈ ಸಂಬಂಧ ಅಲಹಾಬಾದ್ ಹೈಕೋರ್ಟ್​ನ ಲಖನೌ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಾಥಮಿಕ ಪರಿಶೀಲನೆಯ ನಂತರ ಈ ಅರ್ಜಿಯು ವಿಚಾರಣೆಗೆ ಬರಲಿದೆ. ‘ಸತ್ಯ ಏನಿದ್ದರೂ ಸರಿ, ಅದು ಜನರಿಗೆ ತಿಳಿಯಬೇಕಿದೆ. ಹೀಗಾಗಿಯೇ ತಾಜ್​ ಮಹಲ್​ನ 22 ಕೊಠಡಿಗಳ ಬೀಗ ತೆರೆಯಬೇಕು ಎಂದು ಅರ್ಜಿ ಸಲ್ಲಿಸಿದ್ದೇನೆ’ ಎಂದು ರಜನೀಶ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪುರಾತತ್ವ ಮತ್ತು ಐತಿಹಾಸಿಕ ಸ್ಮಾರಕಗಳ ಕಾಯ್ದೆ (1951) ಹಾಗೂ ಪುರಾತತ್ವ ಮತ್ತು ಪ್ರಾಚೀನ ಸ್ಮಾರಕಗಳ ಕಾಯ್ದೆಯ (1958) ಕೆಲ ಅಂಶಗಳನ್ನು ತಾಜ್ ಮಹಲ್ ವಿಚಾರದಲ್ಲಿ ಕೈಬಿಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಈ ಕಾಯ್ದೆಗಳ ಅನ್ವಯವೇ ತಾಜ್​ಮಹಲ್, ಫತೇಪುರ್ ಸಿಕ್ರಿ, ಆಗ್ರಾ ಕೋಟೆ, ಇತಿಮದ್-ಉದ್-ದೌಲಾ ಸಮಾಧಿ ಇರುವ ಸ್ಥಳಗಳನ್ನು ಐತಿಹಾಸಿಕ ಸ್ಮಾರಕಗಳು ಎಂದು ಘೋಷಿಸಲಾಗಿದೆ.

ತಾಜ್​ ಮಹಲ್ ಸ್ಮಾರಕವಿರುವ ಸ್ಥಳದಲ್ಲಿ ಪ್ರಾಚೀನ ಶಿವ ದೇವಾಲಯವಿತ್ತು ಎಂದು ಹಲವು ಬಲಪಂಥೀಯ ಸಂಘಟನೆಗಳು ಪ್ರತಿಪಾದಿಸುತ್ತಿವೆ. ಇದೇ ಅಂಶವನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯೂ ಪ್ರಸ್ತಾಪಿಸಿದೆ. ವಕೀಲರಾದ ರಾಮ್ ಪ್ರಕಾಶ್ ಶುಕ್ಲ ಮತ್ತು ರುದ್ರ ವಿಕ್ರಮ್ ಸಿಂಗ್ ಅರ್ಜಿದಾರರ ಪರವಾಗಿ ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Taj Mahal: ವಿಶ್ವವಿಖ್ಯಾತ ತಾಜ್ ಮಹಲ್ ಪ್ರವಾಸಿಗರಿಗೆ ಓಪನ್; ಒಮ್ಮೆಗೆ 650 ಜನರ ಭೇಟಿಗೆ ಮಾತ್ರ ಅವಕಾಶ

ಇದನ್ನೂ ಓದಿ: ತಾಜ್​ ಮಹಲ್ ಜಗತ್ತಿಗೇ ಅದ್ಭುತ! ಆದರೆ ಅದರ ಪ್ರತಿಮೆಯನ್ನು ಮನೆಯಲ್ಲಿ ಇಟ್ಟುಕೊಳ್ಳುವಂತಿಲ್ಲ, ಯಾಕೆ?

Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ