AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ಯ ಏನಿದ್ರೂ ಪರವಾಗಿಲ್ಲ, ತಾಜ್​ಮಹಲ್​ನ 22 ಕೊಠಡಿಗಳ ಬೀಗ ತೆರೆಸಿ: ಹೈಕೋರ್ಟ್​ಗೆ​ ಅರ್ಜಿ ಸಲ್ಲಿಸಿದ ಬಿಜೆಪಿ ನಾಯಕ

ಲಖನೌ: ತಾಜ್​ಮಹಲ್​ ಕುರಿತ ಸತ್ಯ ಎಲ್ಲರಿಗೂ ಅರ್ಥವಾಗಬೇಕು. ತಾಜ್​ಮಹಲ್​ನ ಯಥಾರ್ಥ ಇತಿಹಾಸವನ್ನು ಜನರ ಎದುರು ತೆರೆದಿಡಲು ಸತ್ಯಶೋಧನ ಸಮಿತಿ ರಚಿಸಬೇಕು. ಸದಾ ಬೀಗ ಹಾಕಿರುವ 22 ಕೊಠಡಿಗಳ ಬೀಗಗಳನ್ನು ತೆರೆಯಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಬಿಜೆಪಿ ಅಯೋಧ್ಯೆ ಘಟಕದ ಮಾಧ್ಯಮ ಪ್ರಮುಖ್ ರಜನೀಶ್ ಸಿಂಗ್ ಈ ಸಂಬಂಧ ಅಲಹಾಬಾದ್ ಹೈಕೋರ್ಟ್​ನ ಲಖನೌ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಾಥಮಿಕ ಪರಿಶೀಲನೆಯ ನಂತರ ಈ ಅರ್ಜಿಯು ವಿಚಾರಣೆಗೆ ಬರಲಿದೆ. ‘ಸತ್ಯ ಏನಿದ್ದರೂ ಸರಿ, ಅದು ಜನರಿಗೆ […]

ಸತ್ಯ ಏನಿದ್ರೂ ಪರವಾಗಿಲ್ಲ, ತಾಜ್​ಮಹಲ್​ನ 22 ಕೊಠಡಿಗಳ ಬೀಗ ತೆರೆಸಿ: ಹೈಕೋರ್ಟ್​ಗೆ​ ಅರ್ಜಿ ಸಲ್ಲಿಸಿದ ಬಿಜೆಪಿ ನಾಯಕ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: May 09, 2022 | 3:47 PM

Share

ಲಖನೌ: ತಾಜ್​ಮಹಲ್​ ಕುರಿತ ಸತ್ಯ ಎಲ್ಲರಿಗೂ ಅರ್ಥವಾಗಬೇಕು. ತಾಜ್​ಮಹಲ್​ನ ಯಥಾರ್ಥ ಇತಿಹಾಸವನ್ನು ಜನರ ಎದುರು ತೆರೆದಿಡಲು ಸತ್ಯಶೋಧನ ಸಮಿತಿ ರಚಿಸಬೇಕು. ಸದಾ ಬೀಗ ಹಾಕಿರುವ 22 ಕೊಠಡಿಗಳ ಬೀಗಗಳನ್ನು ತೆರೆಯಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಬಿಜೆಪಿ ಅಯೋಧ್ಯೆ ಘಟಕದ ಮಾಧ್ಯಮ ಪ್ರಮುಖ್ ರಜನೀಶ್ ಸಿಂಗ್ ಈ ಸಂಬಂಧ ಅಲಹಾಬಾದ್ ಹೈಕೋರ್ಟ್​ನ ಲಖನೌ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಾಥಮಿಕ ಪರಿಶೀಲನೆಯ ನಂತರ ಈ ಅರ್ಜಿಯು ವಿಚಾರಣೆಗೆ ಬರಲಿದೆ. ‘ಸತ್ಯ ಏನಿದ್ದರೂ ಸರಿ, ಅದು ಜನರಿಗೆ ತಿಳಿಯಬೇಕಿದೆ. ಹೀಗಾಗಿಯೇ ತಾಜ್​ ಮಹಲ್​ನ 22 ಕೊಠಡಿಗಳ ಬೀಗ ತೆರೆಯಬೇಕು ಎಂದು ಅರ್ಜಿ ಸಲ್ಲಿಸಿದ್ದೇನೆ’ ಎಂದು ರಜನೀಶ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪುರಾತತ್ವ ಮತ್ತು ಐತಿಹಾಸಿಕ ಸ್ಮಾರಕಗಳ ಕಾಯ್ದೆ (1951) ಹಾಗೂ ಪುರಾತತ್ವ ಮತ್ತು ಪ್ರಾಚೀನ ಸ್ಮಾರಕಗಳ ಕಾಯ್ದೆಯ (1958) ಕೆಲ ಅಂಶಗಳನ್ನು ತಾಜ್ ಮಹಲ್ ವಿಚಾರದಲ್ಲಿ ಕೈಬಿಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಈ ಕಾಯ್ದೆಗಳ ಅನ್ವಯವೇ ತಾಜ್​ಮಹಲ್, ಫತೇಪುರ್ ಸಿಕ್ರಿ, ಆಗ್ರಾ ಕೋಟೆ, ಇತಿಮದ್-ಉದ್-ದೌಲಾ ಸಮಾಧಿ ಇರುವ ಸ್ಥಳಗಳನ್ನು ಐತಿಹಾಸಿಕ ಸ್ಮಾರಕಗಳು ಎಂದು ಘೋಷಿಸಲಾಗಿದೆ.

ತಾಜ್​ ಮಹಲ್ ಸ್ಮಾರಕವಿರುವ ಸ್ಥಳದಲ್ಲಿ ಪ್ರಾಚೀನ ಶಿವ ದೇವಾಲಯವಿತ್ತು ಎಂದು ಹಲವು ಬಲಪಂಥೀಯ ಸಂಘಟನೆಗಳು ಪ್ರತಿಪಾದಿಸುತ್ತಿವೆ. ಇದೇ ಅಂಶವನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯೂ ಪ್ರಸ್ತಾಪಿಸಿದೆ. ವಕೀಲರಾದ ರಾಮ್ ಪ್ರಕಾಶ್ ಶುಕ್ಲ ಮತ್ತು ರುದ್ರ ವಿಕ್ರಮ್ ಸಿಂಗ್ ಅರ್ಜಿದಾರರ ಪರವಾಗಿ ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Taj Mahal: ವಿಶ್ವವಿಖ್ಯಾತ ತಾಜ್ ಮಹಲ್ ಪ್ರವಾಸಿಗರಿಗೆ ಓಪನ್; ಒಮ್ಮೆಗೆ 650 ಜನರ ಭೇಟಿಗೆ ಮಾತ್ರ ಅವಕಾಶ

ಇದನ್ನೂ ಓದಿ: ತಾಜ್​ ಮಹಲ್ ಜಗತ್ತಿಗೇ ಅದ್ಭುತ! ಆದರೆ ಅದರ ಪ್ರತಿಮೆಯನ್ನು ಮನೆಯಲ್ಲಿ ಇಟ್ಟುಕೊಳ್ಳುವಂತಿಲ್ಲ, ಯಾಕೆ?

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್