AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ಯ ಏನಿದ್ರೂ ಪರವಾಗಿಲ್ಲ, ತಾಜ್​ಮಹಲ್​ನ 22 ಕೊಠಡಿಗಳ ಬೀಗ ತೆರೆಸಿ: ಹೈಕೋರ್ಟ್​ಗೆ​ ಅರ್ಜಿ ಸಲ್ಲಿಸಿದ ಬಿಜೆಪಿ ನಾಯಕ

ಲಖನೌ: ತಾಜ್​ಮಹಲ್​ ಕುರಿತ ಸತ್ಯ ಎಲ್ಲರಿಗೂ ಅರ್ಥವಾಗಬೇಕು. ತಾಜ್​ಮಹಲ್​ನ ಯಥಾರ್ಥ ಇತಿಹಾಸವನ್ನು ಜನರ ಎದುರು ತೆರೆದಿಡಲು ಸತ್ಯಶೋಧನ ಸಮಿತಿ ರಚಿಸಬೇಕು. ಸದಾ ಬೀಗ ಹಾಕಿರುವ 22 ಕೊಠಡಿಗಳ ಬೀಗಗಳನ್ನು ತೆರೆಯಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಬಿಜೆಪಿ ಅಯೋಧ್ಯೆ ಘಟಕದ ಮಾಧ್ಯಮ ಪ್ರಮುಖ್ ರಜನೀಶ್ ಸಿಂಗ್ ಈ ಸಂಬಂಧ ಅಲಹಾಬಾದ್ ಹೈಕೋರ್ಟ್​ನ ಲಖನೌ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಾಥಮಿಕ ಪರಿಶೀಲನೆಯ ನಂತರ ಈ ಅರ್ಜಿಯು ವಿಚಾರಣೆಗೆ ಬರಲಿದೆ. ‘ಸತ್ಯ ಏನಿದ್ದರೂ ಸರಿ, ಅದು ಜನರಿಗೆ […]

ಸತ್ಯ ಏನಿದ್ರೂ ಪರವಾಗಿಲ್ಲ, ತಾಜ್​ಮಹಲ್​ನ 22 ಕೊಠಡಿಗಳ ಬೀಗ ತೆರೆಸಿ: ಹೈಕೋರ್ಟ್​ಗೆ​ ಅರ್ಜಿ ಸಲ್ಲಿಸಿದ ಬಿಜೆಪಿ ನಾಯಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 09, 2022 | 3:47 PM

Share

ಲಖನೌ: ತಾಜ್​ಮಹಲ್​ ಕುರಿತ ಸತ್ಯ ಎಲ್ಲರಿಗೂ ಅರ್ಥವಾಗಬೇಕು. ತಾಜ್​ಮಹಲ್​ನ ಯಥಾರ್ಥ ಇತಿಹಾಸವನ್ನು ಜನರ ಎದುರು ತೆರೆದಿಡಲು ಸತ್ಯಶೋಧನ ಸಮಿತಿ ರಚಿಸಬೇಕು. ಸದಾ ಬೀಗ ಹಾಕಿರುವ 22 ಕೊಠಡಿಗಳ ಬೀಗಗಳನ್ನು ತೆರೆಯಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಬಿಜೆಪಿ ಅಯೋಧ್ಯೆ ಘಟಕದ ಮಾಧ್ಯಮ ಪ್ರಮುಖ್ ರಜನೀಶ್ ಸಿಂಗ್ ಈ ಸಂಬಂಧ ಅಲಹಾಬಾದ್ ಹೈಕೋರ್ಟ್​ನ ಲಖನೌ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಾಥಮಿಕ ಪರಿಶೀಲನೆಯ ನಂತರ ಈ ಅರ್ಜಿಯು ವಿಚಾರಣೆಗೆ ಬರಲಿದೆ. ‘ಸತ್ಯ ಏನಿದ್ದರೂ ಸರಿ, ಅದು ಜನರಿಗೆ ತಿಳಿಯಬೇಕಿದೆ. ಹೀಗಾಗಿಯೇ ತಾಜ್​ ಮಹಲ್​ನ 22 ಕೊಠಡಿಗಳ ಬೀಗ ತೆರೆಯಬೇಕು ಎಂದು ಅರ್ಜಿ ಸಲ್ಲಿಸಿದ್ದೇನೆ’ ಎಂದು ರಜನೀಶ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪುರಾತತ್ವ ಮತ್ತು ಐತಿಹಾಸಿಕ ಸ್ಮಾರಕಗಳ ಕಾಯ್ದೆ (1951) ಹಾಗೂ ಪುರಾತತ್ವ ಮತ್ತು ಪ್ರಾಚೀನ ಸ್ಮಾರಕಗಳ ಕಾಯ್ದೆಯ (1958) ಕೆಲ ಅಂಶಗಳನ್ನು ತಾಜ್ ಮಹಲ್ ವಿಚಾರದಲ್ಲಿ ಕೈಬಿಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಈ ಕಾಯ್ದೆಗಳ ಅನ್ವಯವೇ ತಾಜ್​ಮಹಲ್, ಫತೇಪುರ್ ಸಿಕ್ರಿ, ಆಗ್ರಾ ಕೋಟೆ, ಇತಿಮದ್-ಉದ್-ದೌಲಾ ಸಮಾಧಿ ಇರುವ ಸ್ಥಳಗಳನ್ನು ಐತಿಹಾಸಿಕ ಸ್ಮಾರಕಗಳು ಎಂದು ಘೋಷಿಸಲಾಗಿದೆ.

ತಾಜ್​ ಮಹಲ್ ಸ್ಮಾರಕವಿರುವ ಸ್ಥಳದಲ್ಲಿ ಪ್ರಾಚೀನ ಶಿವ ದೇವಾಲಯವಿತ್ತು ಎಂದು ಹಲವು ಬಲಪಂಥೀಯ ಸಂಘಟನೆಗಳು ಪ್ರತಿಪಾದಿಸುತ್ತಿವೆ. ಇದೇ ಅಂಶವನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯೂ ಪ್ರಸ್ತಾಪಿಸಿದೆ. ವಕೀಲರಾದ ರಾಮ್ ಪ್ರಕಾಶ್ ಶುಕ್ಲ ಮತ್ತು ರುದ್ರ ವಿಕ್ರಮ್ ಸಿಂಗ್ ಅರ್ಜಿದಾರರ ಪರವಾಗಿ ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Taj Mahal: ವಿಶ್ವವಿಖ್ಯಾತ ತಾಜ್ ಮಹಲ್ ಪ್ರವಾಸಿಗರಿಗೆ ಓಪನ್; ಒಮ್ಮೆಗೆ 650 ಜನರ ಭೇಟಿಗೆ ಮಾತ್ರ ಅವಕಾಶ

ಇದನ್ನೂ ಓದಿ: ತಾಜ್​ ಮಹಲ್ ಜಗತ್ತಿಗೇ ಅದ್ಭುತ! ಆದರೆ ಅದರ ಪ್ರತಿಮೆಯನ್ನು ಮನೆಯಲ್ಲಿ ಇಟ್ಟುಕೊಳ್ಳುವಂತಿಲ್ಲ, ಯಾಕೆ?

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?