AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ‘ಅಜಯ್’: 2ನೇ ಹಂತದಲ್ಲಿ ಇಸ್ರೇಲ್​​ನಿಂದ ಭಾರತಕ್ಕೆ ಬಂದ 235 ಭಾರತೀಯರು

Operation Ajay: ಭಾರತ ಸರ್ಕಾರ ಇಸ್ರೇಲ್​​ನಲ್ಲಿರುವ ಭಾರತೀಯರನ್ನು ತವರು ದೇಶಕ್ಕೆ ಕರೆಸಿಕೊಳ್ಳುವ ಕೆಲಸ ಮಾಡುತ್ತಿದೆ. ಆಪರೇಷನ್ ಅಜಯ್​​​  (Operation Ajay) ಮೂಲಕ ಭಾರತೀಯ ನಾಗರಿಕರನ್ನು ಭಾರತಕ್ಕೆ ಕರೆಸಿಕೊಳ್ಳುತ್ತಿದೆ. ಈಗಾಗಲೇ ಆಪರೇಷನ್ ಅಜಯ್ ಮೂಲಕ ಮೊದಲ ಹಂತದಲ್ಲಿ 212 ನಾಗರಿಕರು ಭಾರತಕ್ಕೆ ಬಂದಿದ್ದಾರೆ. ಇದೀಗ ಎರಡನೇ ಹಂತದ ಏರ್​​​ಲಿಫ್ಟ್​​ನಲ್ಲಿ 235 ಭಾರತೀಯರು ಭಾರತಕ್ಕೆ ತಲುಪಿದ್ದಾರೆ. ಇದರಲ್ಲಿ 9 ಕನ್ನಡಿಗರು ಸೇರಿದ್ದಾರೆ.

ಆಪರೇಷನ್ 'ಅಜಯ್': 2ನೇ ಹಂತದಲ್ಲಿ ಇಸ್ರೇಲ್​​ನಿಂದ ಭಾರತಕ್ಕೆ ಬಂದ 235 ಭಾರತೀಯರು
ಅಕ್ಷಯ್​ ಪಲ್ಲಮಜಲು​​
|

Updated on: Oct 14, 2023 | 9:41 AM

Share

ದೆಹಲಿ, ಅ.14: ಇಸ್ರೇಲ್ (Israel)​​​ ಮತ್ತು ಹಮಾಸ್ (Hamas)​​ ಭಯೋತ್ಪಾದಕ ನಡುವೆ ಭೀಕರ ಯುದ್ಧಗಳು ನಡೆಯುತ್ತಿದೆ. ಈಗಾಗಲೇ ಇಸ್ರೇಲ್​​ ಹಮಾಸ್​​ ಉಗ್ರರನ್ನು ನಾಶ ಮಾಡಲು ಗಾಜಾ ಪಟ್ಟಿಯ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದರ ಮಧ್ಯೆ ಭಾರತ ಸರ್ಕಾರ ಇಸ್ರೇಲ್​​ನಲ್ಲಿರುವ ಭಾರತೀಯರನ್ನು ತವರು ದೇಶಕ್ಕೆ ಕರೆಸಿಕೊಳ್ಳುವ ಕೆಲಸ ಮಾಡುತ್ತಿದೆ. ಆಪರೇಷನ್ ಅಜಯ್​​​  (Operation Ajay) ಮೂಲಕ ಭಾರತೀಯ ನಾಗರಿಕರನ್ನು ಭಾರತಕ್ಕೆ ಕರೆಸಿಕೊಳ್ಳುತ್ತಿದೆ. ಈಗಾಗಲೇ ಆಪರೇಷನ್ ಅಜಯ್ ಮೂಲಕ ಮೊದಲ ಹಂತದಲ್ಲಿ 212 ನಾಗರಿಕರು ಭಾರತಕ್ಕೆ ಬಂದಿದ್ದಾರೆ. ಇದೀಗ ಎರಡನೇ ಹಂತದ ಏರ್​​​ಲಿಫ್ಟ್​​ನಲ್ಲಿ 235 ಭಾರತೀಯರು ಭಾರತಕ್ಕೆ ತಲುಪಿದ್ದಾರೆ. ಇದರಲ್ಲಿ 9 ಕನ್ನಡಿಗರು ಸೇರಿದ್ದಾರೆ.

235 ಭಾರತೀಯರು ಹೊತ್ತ AI 506 ವಿಮಾನವು ದೆಹಲಿಗೆ ತಲುಪಿದೆ. 9 ಕನ್ನಡಿಗರು ದೆಹಲಿಯಿಂದ 10 ಗಂಟೆಗೆ ಬೆಂಗಳೂರಿಗೆ ಬರಲಿದ್ದಾರೆ ಎಂದು ಹೇಳಲಾಗಿದೆ. ಮೈಸೂರಿನ ಐವರು, ಬೆಂಗಳೂರಿನ ಬಸವನಗುಡಿಯ ನಾಲ್ವರು ನಿವಾಸಿ ಎಂದು ಗುರುತಿಸಲಾಗಿದೆ. ಈ ಬಗ್ಗೆ ವಿದೇಶಾಂಗ ಸಚಿವ ಎಸ್​​​. ಜೈಶಂಕರ್​​ Xನಲ್ಲಿ (ಈ ಹಿಂದಿನ ಟ್ವಿಟರ್​​) ತಿಳಿಸಿದ್ದಾರೆ. ಈಗಾಗಲೇ ಮೊದಲ ಹಂತ ಏರ್​​​ಲಿಫ್ಟ್​​ನಲ್ಲಿ 212 ಮಂದಿ ಭಾರತೀಯರನ್ನು ನಮ್ಮ ದೇಶಕ್ಕೆ ಕರೆಸಿಕೊಳ್ಳಲಾಗಿದೆ. ಗುರುವಾರ ಸಂಜೆ ಇಸ್ರೇಲ್‌ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಹೊರಟು ಶುಕ್ರವಾರ ಬೆಳಿಗ್ಗೆ ನವದೆಹಲಿ ತಲುಪಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್​​ನಲ್ಲಿ ಸಿಲುಕಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ‘ಆಪರೇಷನ್ ಅಜಯ್’, ಹೇಗಿದೆ ಕಾರ್ಯಾಚರಣೆ?

ಇಸ್ರೇಲ್​​ನಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಭಾರತಕ್ಕೆ ಕರೆಸಿಕೊಳ್ಳಲು ಭಾರತ ಸರ್ಕಾರ ಅಕ್ಟೋಬರ್​​ 7ರಂದು ಆಪರೇಷನ್ ಅಜಯ್ ಆರಂಭಿಸಿಲಾಗಿತ್ತು. ಇದರ ಜತೆಗೆ ಇಸ್ರೇಲ್​​ ಪರಿಸ್ಥಿತಿ ಬಗ್ಗೆ ಮತ್ತು ಅಲ್ಲಿರುವ ಭಾರತೀಯರ ಸುರಕ್ಷತೆ ಬಗ್ಗೆ ಮೇಲ್ವಿಚಾರಣೆ ಮಾಡಲು ದೆಹಲಿಯಲ್ಲಿ 24 ಗಂಟೆಗಳ ಕಂಟ್ರೋಲ್​​ ರೂಮ್​​ನ್ನು (ನಿಯಂತ್ರಣ ಕೊಠಡಿ) ಸ್ಥಾಪಿಸಲಾಗಿದೆ. ಯಾವುದೇ ರೀತಿಯ ತೊಂದರೆಯಾದರೂ ಅಥವಾ ಸಹಾಯಕ್ಕಾಗಿ ಈ ನಂಬರ್​​ಗಳಿಗೆ ಫೋನ್​​ ಅಥವಾ ಮೆಸೇಜ್​​ ಮಾಡಬಹುದು, 1800118797 (ಟೋಲ್ ಫ್ರೀ), +91-11 23012113, +91-11-23014104, +91-11-23017905 ಮತ್ತು +919968291988, ಇದರ ಜತೆಗೆ ಭಾರತೀಯ ರಾಯಭಾರಿ ಕಚೇರಿಯ 24-ಗಂಟೆಗಳ ತುರ್ತು ಸಹಾಯವಾಣಿಯನ್ನು ನೀಡಿದೆ. +972-35226748 ಮತ್ತು +972-543278392, ಮತ್ತು ಇಮೇಲ್ ಮೂಲಕವು ತಿಳಿಸಬಹುದು cons1.telaviv@mea.gov.in.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​