AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ‘ಅಜಯ್’: 2ನೇ ಹಂತದಲ್ಲಿ ಇಸ್ರೇಲ್​​ನಿಂದ ಭಾರತಕ್ಕೆ ಬಂದ 235 ಭಾರತೀಯರು

Operation Ajay: ಭಾರತ ಸರ್ಕಾರ ಇಸ್ರೇಲ್​​ನಲ್ಲಿರುವ ಭಾರತೀಯರನ್ನು ತವರು ದೇಶಕ್ಕೆ ಕರೆಸಿಕೊಳ್ಳುವ ಕೆಲಸ ಮಾಡುತ್ತಿದೆ. ಆಪರೇಷನ್ ಅಜಯ್​​​  (Operation Ajay) ಮೂಲಕ ಭಾರತೀಯ ನಾಗರಿಕರನ್ನು ಭಾರತಕ್ಕೆ ಕರೆಸಿಕೊಳ್ಳುತ್ತಿದೆ. ಈಗಾಗಲೇ ಆಪರೇಷನ್ ಅಜಯ್ ಮೂಲಕ ಮೊದಲ ಹಂತದಲ್ಲಿ 212 ನಾಗರಿಕರು ಭಾರತಕ್ಕೆ ಬಂದಿದ್ದಾರೆ. ಇದೀಗ ಎರಡನೇ ಹಂತದ ಏರ್​​​ಲಿಫ್ಟ್​​ನಲ್ಲಿ 235 ಭಾರತೀಯರು ಭಾರತಕ್ಕೆ ತಲುಪಿದ್ದಾರೆ. ಇದರಲ್ಲಿ 9 ಕನ್ನಡಿಗರು ಸೇರಿದ್ದಾರೆ.

ಆಪರೇಷನ್ 'ಅಜಯ್': 2ನೇ ಹಂತದಲ್ಲಿ ಇಸ್ರೇಲ್​​ನಿಂದ ಭಾರತಕ್ಕೆ ಬಂದ 235 ಭಾರತೀಯರು
ಅಕ್ಷಯ್​ ಪಲ್ಲಮಜಲು​​
|

Updated on: Oct 14, 2023 | 9:41 AM

Share

ದೆಹಲಿ, ಅ.14: ಇಸ್ರೇಲ್ (Israel)​​​ ಮತ್ತು ಹಮಾಸ್ (Hamas)​​ ಭಯೋತ್ಪಾದಕ ನಡುವೆ ಭೀಕರ ಯುದ್ಧಗಳು ನಡೆಯುತ್ತಿದೆ. ಈಗಾಗಲೇ ಇಸ್ರೇಲ್​​ ಹಮಾಸ್​​ ಉಗ್ರರನ್ನು ನಾಶ ಮಾಡಲು ಗಾಜಾ ಪಟ್ಟಿಯ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದರ ಮಧ್ಯೆ ಭಾರತ ಸರ್ಕಾರ ಇಸ್ರೇಲ್​​ನಲ್ಲಿರುವ ಭಾರತೀಯರನ್ನು ತವರು ದೇಶಕ್ಕೆ ಕರೆಸಿಕೊಳ್ಳುವ ಕೆಲಸ ಮಾಡುತ್ತಿದೆ. ಆಪರೇಷನ್ ಅಜಯ್​​​  (Operation Ajay) ಮೂಲಕ ಭಾರತೀಯ ನಾಗರಿಕರನ್ನು ಭಾರತಕ್ಕೆ ಕರೆಸಿಕೊಳ್ಳುತ್ತಿದೆ. ಈಗಾಗಲೇ ಆಪರೇಷನ್ ಅಜಯ್ ಮೂಲಕ ಮೊದಲ ಹಂತದಲ್ಲಿ 212 ನಾಗರಿಕರು ಭಾರತಕ್ಕೆ ಬಂದಿದ್ದಾರೆ. ಇದೀಗ ಎರಡನೇ ಹಂತದ ಏರ್​​​ಲಿಫ್ಟ್​​ನಲ್ಲಿ 235 ಭಾರತೀಯರು ಭಾರತಕ್ಕೆ ತಲುಪಿದ್ದಾರೆ. ಇದರಲ್ಲಿ 9 ಕನ್ನಡಿಗರು ಸೇರಿದ್ದಾರೆ.

235 ಭಾರತೀಯರು ಹೊತ್ತ AI 506 ವಿಮಾನವು ದೆಹಲಿಗೆ ತಲುಪಿದೆ. 9 ಕನ್ನಡಿಗರು ದೆಹಲಿಯಿಂದ 10 ಗಂಟೆಗೆ ಬೆಂಗಳೂರಿಗೆ ಬರಲಿದ್ದಾರೆ ಎಂದು ಹೇಳಲಾಗಿದೆ. ಮೈಸೂರಿನ ಐವರು, ಬೆಂಗಳೂರಿನ ಬಸವನಗುಡಿಯ ನಾಲ್ವರು ನಿವಾಸಿ ಎಂದು ಗುರುತಿಸಲಾಗಿದೆ. ಈ ಬಗ್ಗೆ ವಿದೇಶಾಂಗ ಸಚಿವ ಎಸ್​​​. ಜೈಶಂಕರ್​​ Xನಲ್ಲಿ (ಈ ಹಿಂದಿನ ಟ್ವಿಟರ್​​) ತಿಳಿಸಿದ್ದಾರೆ. ಈಗಾಗಲೇ ಮೊದಲ ಹಂತ ಏರ್​​​ಲಿಫ್ಟ್​​ನಲ್ಲಿ 212 ಮಂದಿ ಭಾರತೀಯರನ್ನು ನಮ್ಮ ದೇಶಕ್ಕೆ ಕರೆಸಿಕೊಳ್ಳಲಾಗಿದೆ. ಗುರುವಾರ ಸಂಜೆ ಇಸ್ರೇಲ್‌ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಹೊರಟು ಶುಕ್ರವಾರ ಬೆಳಿಗ್ಗೆ ನವದೆಹಲಿ ತಲುಪಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್​​ನಲ್ಲಿ ಸಿಲುಕಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ‘ಆಪರೇಷನ್ ಅಜಯ್’, ಹೇಗಿದೆ ಕಾರ್ಯಾಚರಣೆ?

ಇಸ್ರೇಲ್​​ನಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಭಾರತಕ್ಕೆ ಕರೆಸಿಕೊಳ್ಳಲು ಭಾರತ ಸರ್ಕಾರ ಅಕ್ಟೋಬರ್​​ 7ರಂದು ಆಪರೇಷನ್ ಅಜಯ್ ಆರಂಭಿಸಿಲಾಗಿತ್ತು. ಇದರ ಜತೆಗೆ ಇಸ್ರೇಲ್​​ ಪರಿಸ್ಥಿತಿ ಬಗ್ಗೆ ಮತ್ತು ಅಲ್ಲಿರುವ ಭಾರತೀಯರ ಸುರಕ್ಷತೆ ಬಗ್ಗೆ ಮೇಲ್ವಿಚಾರಣೆ ಮಾಡಲು ದೆಹಲಿಯಲ್ಲಿ 24 ಗಂಟೆಗಳ ಕಂಟ್ರೋಲ್​​ ರೂಮ್​​ನ್ನು (ನಿಯಂತ್ರಣ ಕೊಠಡಿ) ಸ್ಥಾಪಿಸಲಾಗಿದೆ. ಯಾವುದೇ ರೀತಿಯ ತೊಂದರೆಯಾದರೂ ಅಥವಾ ಸಹಾಯಕ್ಕಾಗಿ ಈ ನಂಬರ್​​ಗಳಿಗೆ ಫೋನ್​​ ಅಥವಾ ಮೆಸೇಜ್​​ ಮಾಡಬಹುದು, 1800118797 (ಟೋಲ್ ಫ್ರೀ), +91-11 23012113, +91-11-23014104, +91-11-23017905 ಮತ್ತು +919968291988, ಇದರ ಜತೆಗೆ ಭಾರತೀಯ ರಾಯಭಾರಿ ಕಚೇರಿಯ 24-ಗಂಟೆಗಳ ತುರ್ತು ಸಹಾಯವಾಣಿಯನ್ನು ನೀಡಿದೆ. +972-35226748 ಮತ್ತು +972-543278392, ಮತ್ತು ಇಮೇಲ್ ಮೂಲಕವು ತಿಳಿಸಬಹುದು cons1.telaviv@mea.gov.in.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ