AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ‘ಅಜಯ್’: 2ನೇ ಹಂತದಲ್ಲಿ ಇಸ್ರೇಲ್​​ನಿಂದ ಭಾರತಕ್ಕೆ ಬಂದ 235 ಭಾರತೀಯರು

Operation Ajay: ಭಾರತ ಸರ್ಕಾರ ಇಸ್ರೇಲ್​​ನಲ್ಲಿರುವ ಭಾರತೀಯರನ್ನು ತವರು ದೇಶಕ್ಕೆ ಕರೆಸಿಕೊಳ್ಳುವ ಕೆಲಸ ಮಾಡುತ್ತಿದೆ. ಆಪರೇಷನ್ ಅಜಯ್​​​  (Operation Ajay) ಮೂಲಕ ಭಾರತೀಯ ನಾಗರಿಕರನ್ನು ಭಾರತಕ್ಕೆ ಕರೆಸಿಕೊಳ್ಳುತ್ತಿದೆ. ಈಗಾಗಲೇ ಆಪರೇಷನ್ ಅಜಯ್ ಮೂಲಕ ಮೊದಲ ಹಂತದಲ್ಲಿ 212 ನಾಗರಿಕರು ಭಾರತಕ್ಕೆ ಬಂದಿದ್ದಾರೆ. ಇದೀಗ ಎರಡನೇ ಹಂತದ ಏರ್​​​ಲಿಫ್ಟ್​​ನಲ್ಲಿ 235 ಭಾರತೀಯರು ಭಾರತಕ್ಕೆ ತಲುಪಿದ್ದಾರೆ. ಇದರಲ್ಲಿ 9 ಕನ್ನಡಿಗರು ಸೇರಿದ್ದಾರೆ.

ಆಪರೇಷನ್ 'ಅಜಯ್': 2ನೇ ಹಂತದಲ್ಲಿ ಇಸ್ರೇಲ್​​ನಿಂದ ಭಾರತಕ್ಕೆ ಬಂದ 235 ಭಾರತೀಯರು
ಅಕ್ಷಯ್​ ಪಲ್ಲಮಜಲು​​
|

Updated on: Oct 14, 2023 | 9:41 AM

Share

ದೆಹಲಿ, ಅ.14: ಇಸ್ರೇಲ್ (Israel)​​​ ಮತ್ತು ಹಮಾಸ್ (Hamas)​​ ಭಯೋತ್ಪಾದಕ ನಡುವೆ ಭೀಕರ ಯುದ್ಧಗಳು ನಡೆಯುತ್ತಿದೆ. ಈಗಾಗಲೇ ಇಸ್ರೇಲ್​​ ಹಮಾಸ್​​ ಉಗ್ರರನ್ನು ನಾಶ ಮಾಡಲು ಗಾಜಾ ಪಟ್ಟಿಯ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದರ ಮಧ್ಯೆ ಭಾರತ ಸರ್ಕಾರ ಇಸ್ರೇಲ್​​ನಲ್ಲಿರುವ ಭಾರತೀಯರನ್ನು ತವರು ದೇಶಕ್ಕೆ ಕರೆಸಿಕೊಳ್ಳುವ ಕೆಲಸ ಮಾಡುತ್ತಿದೆ. ಆಪರೇಷನ್ ಅಜಯ್​​​  (Operation Ajay) ಮೂಲಕ ಭಾರತೀಯ ನಾಗರಿಕರನ್ನು ಭಾರತಕ್ಕೆ ಕರೆಸಿಕೊಳ್ಳುತ್ತಿದೆ. ಈಗಾಗಲೇ ಆಪರೇಷನ್ ಅಜಯ್ ಮೂಲಕ ಮೊದಲ ಹಂತದಲ್ಲಿ 212 ನಾಗರಿಕರು ಭಾರತಕ್ಕೆ ಬಂದಿದ್ದಾರೆ. ಇದೀಗ ಎರಡನೇ ಹಂತದ ಏರ್​​​ಲಿಫ್ಟ್​​ನಲ್ಲಿ 235 ಭಾರತೀಯರು ಭಾರತಕ್ಕೆ ತಲುಪಿದ್ದಾರೆ. ಇದರಲ್ಲಿ 9 ಕನ್ನಡಿಗರು ಸೇರಿದ್ದಾರೆ.

235 ಭಾರತೀಯರು ಹೊತ್ತ AI 506 ವಿಮಾನವು ದೆಹಲಿಗೆ ತಲುಪಿದೆ. 9 ಕನ್ನಡಿಗರು ದೆಹಲಿಯಿಂದ 10 ಗಂಟೆಗೆ ಬೆಂಗಳೂರಿಗೆ ಬರಲಿದ್ದಾರೆ ಎಂದು ಹೇಳಲಾಗಿದೆ. ಮೈಸೂರಿನ ಐವರು, ಬೆಂಗಳೂರಿನ ಬಸವನಗುಡಿಯ ನಾಲ್ವರು ನಿವಾಸಿ ಎಂದು ಗುರುತಿಸಲಾಗಿದೆ. ಈ ಬಗ್ಗೆ ವಿದೇಶಾಂಗ ಸಚಿವ ಎಸ್​​​. ಜೈಶಂಕರ್​​ Xನಲ್ಲಿ (ಈ ಹಿಂದಿನ ಟ್ವಿಟರ್​​) ತಿಳಿಸಿದ್ದಾರೆ. ಈಗಾಗಲೇ ಮೊದಲ ಹಂತ ಏರ್​​​ಲಿಫ್ಟ್​​ನಲ್ಲಿ 212 ಮಂದಿ ಭಾರತೀಯರನ್ನು ನಮ್ಮ ದೇಶಕ್ಕೆ ಕರೆಸಿಕೊಳ್ಳಲಾಗಿದೆ. ಗುರುವಾರ ಸಂಜೆ ಇಸ್ರೇಲ್‌ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಹೊರಟು ಶುಕ್ರವಾರ ಬೆಳಿಗ್ಗೆ ನವದೆಹಲಿ ತಲುಪಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್​​ನಲ್ಲಿ ಸಿಲುಕಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ‘ಆಪರೇಷನ್ ಅಜಯ್’, ಹೇಗಿದೆ ಕಾರ್ಯಾಚರಣೆ?

ಇಸ್ರೇಲ್​​ನಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಭಾರತಕ್ಕೆ ಕರೆಸಿಕೊಳ್ಳಲು ಭಾರತ ಸರ್ಕಾರ ಅಕ್ಟೋಬರ್​​ 7ರಂದು ಆಪರೇಷನ್ ಅಜಯ್ ಆರಂಭಿಸಿಲಾಗಿತ್ತು. ಇದರ ಜತೆಗೆ ಇಸ್ರೇಲ್​​ ಪರಿಸ್ಥಿತಿ ಬಗ್ಗೆ ಮತ್ತು ಅಲ್ಲಿರುವ ಭಾರತೀಯರ ಸುರಕ್ಷತೆ ಬಗ್ಗೆ ಮೇಲ್ವಿಚಾರಣೆ ಮಾಡಲು ದೆಹಲಿಯಲ್ಲಿ 24 ಗಂಟೆಗಳ ಕಂಟ್ರೋಲ್​​ ರೂಮ್​​ನ್ನು (ನಿಯಂತ್ರಣ ಕೊಠಡಿ) ಸ್ಥಾಪಿಸಲಾಗಿದೆ. ಯಾವುದೇ ರೀತಿಯ ತೊಂದರೆಯಾದರೂ ಅಥವಾ ಸಹಾಯಕ್ಕಾಗಿ ಈ ನಂಬರ್​​ಗಳಿಗೆ ಫೋನ್​​ ಅಥವಾ ಮೆಸೇಜ್​​ ಮಾಡಬಹುದು, 1800118797 (ಟೋಲ್ ಫ್ರೀ), +91-11 23012113, +91-11-23014104, +91-11-23017905 ಮತ್ತು +919968291988, ಇದರ ಜತೆಗೆ ಭಾರತೀಯ ರಾಯಭಾರಿ ಕಚೇರಿಯ 24-ಗಂಟೆಗಳ ತುರ್ತು ಸಹಾಯವಾಣಿಯನ್ನು ನೀಡಿದೆ. +972-35226748 ಮತ್ತು +972-543278392, ಮತ್ತು ಇಮೇಲ್ ಮೂಲಕವು ತಿಳಿಸಬಹುದು cons1.telaviv@mea.gov.in.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ