AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಅಜಯ್: ಇಸ್ರೇಲ್​ನಿಂದ 286 ಭಾರತೀಯರೊಂದಿಗೆ ದೆಹಲಿಗೆ ಬಂದಿಳಿದ ಐದನೇ ವಿಮಾನ

18 ನೇಪಾಳ ಪ್ರಜೆಗಳು ಸೇರಿದಂತೆ 286 ಪ್ರಯಾಣಿಕರೊಂದಿಗೆ ಟೆಲ್ ಅವಿವ್‌ನಿಂದ ಸ್ಪೈಸ್‌ಜೆಟ್ ವಿಮಾನ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಉಗ್ರಗಾಮಿ ಗುಂಪು ಹಮಾಸ್‌ನೊಂದಿಗೆ ತೀವ್ರ ಸಂಘರ್ಷ ನಡೆಯುತ್ತಿರುವ ಇಸ್ರೇಲ್‌ನಿಂದ ವಾಪಸಾಗಲು ಬಯಸುವ ಭಾರತೀಯರಿಗೆ ಮರಳಲು ಅನುಕೂಲವಾಗುವಂತೆ ಇದು ಸರ್ಕಾರದ ಆಪರೇಷನ್ ಅಜಯ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಐದನೇ ವಿಮಾನವಾಗಿದೆ.

ಆಪರೇಷನ್ ಅಜಯ್: ಇಸ್ರೇಲ್​ನಿಂದ 286 ಭಾರತೀಯರೊಂದಿಗೆ ದೆಹಲಿಗೆ ಬಂದಿಳಿದ ಐದನೇ ವಿಮಾನ
ಭಾರತೀಯರು
ನಯನಾ ರಾಜೀವ್
|

Updated on: Oct 18, 2023 | 8:50 AM

Share

18 ನೇಪಾಳ ಪ್ರಜೆಗಳು ಸೇರಿದಂತೆ 286 ಪ್ರಯಾಣಿಕರೊಂದಿಗೆ ಇಸ್ರೇಲ್​ನ ಟೆಲ್ ಅವಿವ್‌ನಿಂದ ಸ್ಪೈಸ್‌ಜೆಟ್ ವಿಮಾನ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಉಗ್ರಗಾಮಿ ಗುಂಪು ಹಮಾಸ್‌ನೊಂದಿಗೆ ತೀವ್ರ ಸಂಘರ್ಷ ನಡೆಯುತ್ತಿರುವ ಇಸ್ರೇಲ್‌ನಿಂದ ವಾಪಸಾಗಲು ಬಯಸುವ ಭಾರತೀಯರಿಗೆ ಮರಳಲು ಅನುಕೂಲವಾಗುವಂತೆ ಇದು ಸರ್ಕಾರದ ಆಪರೇಷನ್ ಅಜಯ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಐದನೇ ವಿಮಾನವಾಗಿದೆ.

ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಆಪರೇಷನ್ ಅಜಯ್ ಅಡಿಯಲ್ಲಿ ಐದನೇ ವಿಮಾನದಲ್ಲಿ 18 ನೇಪಾಳದ ಪ್ರಜೆಗಳು ಸೇರಿದಂತೆ 286 ಪ್ರಯಾಣಿಕರು ಆಗಮಿಸಿದ್ದಾರೆ ಎಂದು ಹೇಳಿದ್ದಾರೆ. ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್ ಮುರುಗನ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಸ್ವಾಗತಿಸುತ್ತಿರುವ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ಕೇರಳ ಸರ್ಕಾರದ ಪ್ರಕಾರ, ವಿಮಾನದಲ್ಲಿ ಬಂದ ಪ್ರಯಾಣಿಕರಲ್ಲಿ ರಾಜ್ಯದ 22 ಮಂದಿ ಇದ್ದರು. ಸ್ಪೈಸ್‌ಜೆಟ್ ವಿಮಾನ A340 ಭಾನುವಾರ ಟೆಲ್ ಅವಿವ್‌ನಲ್ಲಿ ಇಳಿದ ನಂತರ ತಾಂತ್ರಿಕ ಸಮಸ್ಯೆಯನ್ನು ಎದುರಿಸಿತು ಮತ್ತು ಸಮಸ್ಯೆಯನ್ನು ಸರಿಪಡಿಸಲು ವಿಮಾನವನ್ನು ಜೋರ್ಡಾನ್‌ಗೆ ಕೊಂಡೊಯ್ಯಲಾಯಿತು.

ಮತ್ತಷ್ಟು ಓದಿ: ಇಸ್ರೇಲ್​-ಲೆಬನಾನ್ ಗಡಿಯಲ್ಲಿ 900 ಭಾರತೀಯ ಸೈನಿಕರು ನಿಯೋಜನೆಗೊಂಡಿರುವುದು ಏಕೆ?

ಸಮಸ್ಯೆಯನ್ನು ಪರಿಹರಿಸಿದ ನಂತರ, ವಿಮಾನವು ಮಂಗಳವಾರ ಟೆಲ್ ಅವಿವ್‌ನಿಂದ ಜನರೊಂದಿಗೆ ಮರಳಿತು. ವಿಮಾನವು ಸೋಮವಾರ ಬೆಳಗ್ಗೆ ದೆಹಲಿಗೆ ಮರಳಬೇಕಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ