AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಅಜಯ್: ಯುದ್ಧ ಪೀಡಿತ ಇಸ್ರೇಲ್‌ನಿಂದ 286 ಪ್ರಯಾಣಿಕರನ್ನು ಕರೆ ತರಲಿದೆ ಐದನೇ ವಿಮಾನ

Operation Ajay: ಮಂಗಳವಾರ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು, ಅಗತ್ಯವಿದ್ದರೆ ಮುಂಬರುವ ಪರಿಸ್ಥಿತಿಯ ಆಧಾರದ ಮೇಲೆ ಹೆಚ್ಚಿನ ವಿಮಾನಗಳನ್ನು ನಿರ್ವಹಿಸಲಾಗುವುದು ಎಂದು ಹೇಳಿದರು. ಹೊಸದಾಗಿ, 5 ವಿಮಾನಗಳು ಬಂದಿವೆ. ಅಗತ್ಯವಿದ್ದಲ್ಲಿ ನಾವು ಪರಿಸ್ಥಿತಿಯನ್ನು ನೋಡಿಕೊಂಡು ಹೆಚ್ಚಿನ ವಿಮಾನಗಳನ್ನು ನಿರ್ವಹಿಸುತ್ತೇವೆ ಎಂದಿದ್ದಾರೆ ಅವರು.

ಆಪರೇಷನ್ ಅಜಯ್: ಯುದ್ಧ ಪೀಡಿತ ಇಸ್ರೇಲ್‌ನಿಂದ 286 ಪ್ರಯಾಣಿಕರನ್ನು ಕರೆ ತರಲಿದೆ ಐದನೇ ವಿಮಾನ
ಆಪರೇಷನ್ ಅಜಯ್
ರಶ್ಮಿ ಕಲ್ಲಕಟ್ಟ
|

Updated on:Oct 17, 2023 | 8:34 PM

Share

ದೆಹಲಿ ಅಕ್ಟೋಬರ್ 17: ಯುದ್ಧಪೀಡಿತ ಇಸ್ರೇಲ್‌ನಿಂದ (Israel)  ನೇಪಾಳದ 18 ನಾಗರಿಕರು ಸೇರಿದಂತೆ ಇನ್ನೂ 286 ಪ್ರಯಾಣಿಕರನ್ನು ಭಾರತವು ‘ಆಪರೇಷನ್ ಅಜಯ್’ (Operation Ajay) ಅಡಿಯಲ್ಲಿ ಕರೆತರುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (S Jaishankar) ಮಂಗಳವಾರ ಹೇಳಿದ್ದಾರೆ.18 ನೇಪಾಳದ ನಾಗರಿಕರಲ್ಲಿ ಕೆಲವರು ಕಷ್ಟಕರ ವಲಯಗಳಲ್ಲಿ ಉಳಿದುಕೊಂಡಿದ್ದಾರೆ ಮತ್ತು ಇತರರು ಹಿಂತಿರುಗಲು ಬಯಸಿದ್ದಾರೆ ಎಂದು ಇಸ್ರೇಲ್‌ಗೆ ನೇಪಾಳದ ರಾಯಭಾರಿ ಕಾಂತಾ ರಿಜಾಲ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ನಾವು ಅಕ್ಟೋಬರ್ 12 ರಂದು ನೇಪಾಳ ಏರ್‌ಲೈನ್ಸ್‌ನಲ್ಲಿ 254 ನೇಪಾಳದ ನಾಗರಿಕರನ್ನು ಕಳುಹಿಸಿದ್ದೇವೆ. ಅವರನ್ನು ಹೊರಗೆ ಕರೆದೊಯ್ಯಲು ಹೆಚ್ಚಿನ ವಿಮಾನಗಳನ್ನು ವ್ಯವಸ್ಥೆ ಮಾಡಲು ನೋಡಬಹುದು ಎಂದು ಅವರು ಹೇಳಿದ್ದಾರೆ.

ಪ್ಯಾಲೆಸ್ತೀನಿಯನ್ ಉಗ್ರಗಾಮಿ ಗುಂಪು ಹಮಾಸ್‌ನೊಂದಿಗಿನ ಯುದ್ಧದ ಮಧ್ಯೆ ಇರುವ ಇಸ್ರೇಲ್‌ನಿಂದ ಭಾರತೀಯ ಪ್ರಜೆಗಳಿಗೆ ಮರಳಲು ಅನುಕೂಲವಾಗುವಂತೆ ಅಕ್ಟೋಬರ್ 11 ರಂದು ಭಾರತವು ‘ಆಪರೇಷನ್ ಅಜಯ್’ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಐದನೇ ವಿಮಾನವಾಗಿದೆ ಇದು.

ಮಂಗಳವಾರ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ (MoS) ವಿ ಮುರಳೀಧರನ್  ಅವರು, ಅಗತ್ಯವಿದ್ದರೆ ಮುಂಬರುವ ಪರಿಸ್ಥಿತಿಯ ಆಧಾರದ ಮೇಲೆ ಹೆಚ್ಚಿನ ವಿಮಾನಗಳನ್ನು ನಿರ್ವಹಿಸಲಾಗುವುದು ಎಂದು ಹೇಳಿದರು. ಹೊಸದಾಗಿ, 5 ವಿಮಾನಗಳು ಬಂದಿವೆ. ಅಗತ್ಯವಿದ್ದಲ್ಲಿ ನಾವು ಪರಿಸ್ಥಿತಿಯನ್ನು ನೋಡಿಕೊಂಡು ಹೆಚ್ಚಿನ ವಿಮಾನಗಳನ್ನು ನಿರ್ವಹಿಸುತ್ತೇವೆ. ಕಳೆದ, ಸುಮಾರು 4-5 ದಿನಗಳಲ್ಲಿ, ನಾವು ಇಸ್ರೇಲ್‌ನಿಂದ ಭಾರತಕ್ಕೆ ವಿಮಾನದಲ್ಲಿ ಪ್ರಯಾಣಿಕರನ್ನು ಕರೆತಂದಿದ್ದೇವೆ ಎಂದು ಸಚಿವರು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಇಸ್ರೇಲ್‌ನಲ್ಲಿ ಘರ್ಷಣೆ ಭುಗಿಲೆದ್ದಿದೆ, ಭಾರತೀಯ ರಾಯಭಾರ ಕಚೇರಿ ಸಲಹೆಯನ್ನು ನೀಡಿದೆ. ಅಲ್ಲಿನ ಭಾರತೀಯ ನಾಗರಿಕರು ಜಾಗರೂಕರಾಗಿರಲು ಮತ್ತು ಭಾರತೀಯ ರಾಯಭಾರ ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಲು ವಿನಂತಿಸಿದೆ ಎಂದು ಮುರಳೀಧರನ್ ಹೇಳಿದ್ದಾರೆ.

ಇದನ್ನೂ ಓದಿ: ದುಬೆ, ಸುಪ್ರೀಂ ವಕೀಲ ದೇಹದ್ರಾಯ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮಹುವಾ ಮೊಯಿತ್ರಾ

ಭಾರತೀಯ ರಾಯಭಾರ ಕಚೇರಿಯು ಜನರ ಕೋರಿಕೆಗಳು ಮತ್ತು ಅಲ್ಲಿ ಪರಿಸ್ಥಿತಿಯ ಆಧಾರದ ಮೇಲೆ ಎಲ್ಲರೂ ಭಾರತಕ್ಕೆ ಪ್ರಯಾಣಿಸಬೇಕೆಂದು ವಿನಂತಿಸಿದೆ ಎಂದು ಅವರು ಹೇಳಿದರು.

ಕಳೆದ ವಾರ, ಟೆಲ್ ಅವಿವ್‌ನಿಂದ ನಾಲ್ಕು ಚಾರ್ಟರ್ಡ್ ವಿಮಾನಗಳು ಮಕ್ಕಳು ಸೇರಿದಂತೆ ಒಟ್ಟು 906 ಪ್ರಯಾಣಿಕರನ್ನು ಕರೆತಂದಿದ್ದವು. ಅಲ್ಲಿನ ಆರೋಗ್ಯ ಸಚಿವಾಲಯದ ಪ್ರಕಾರ ಗಾಜಾದಲ್ಲಿ ಕನಿಷ್ಠ 2,778 ಜನರು ಸಾವಿಗೀಡಾಗಿದ್ದು ,9,700 ಮಂದಿ ಗಾಯಗೊಂಡಿದ್ದಾರೆ. ಹಮಾಸ್‌ನ ಅಕ್ಟೋಬರ್ 7 ರ ದಾಳಿಯಲ್ಲಿ 1,400 ಕ್ಕೂ ಹೆಚ್ಚು ಇಸ್ರೇಲಿಗಳು ಸಾವಿಗೀಡಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Tue, 17 October 23

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ